Don't Miss!
- News
ಬೆಂಗಳೂರು ಏರ್ಪೋರ್ಟ್ ಭದ್ರತೆಗೆ 1,700 ಹೆಚ್ಚುವರಿ ಸಿಬ್ಬಂದಿ
- Sports
ನ್ಯೂಜಿಲೆಂಡ್ ವಿರುದ್ಧ ಗೆದ್ದು ಸರಣಿ ಸಮಬಲಗೊಳಿಸಿದರೂ ಅಚ್ಚರಿ ವ್ಯಕ್ತಪಡಿಸಿದ ನಾಯಕ ಹಾರ್ದಿಕ್ ಪಾಂಡ್ಯ
- Lifestyle
Horoscope Today 30 Jan 2023: ಸೋಮವಾರ: ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Finance
ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಮುಂದೂಡಿದ ಬ್ಯಾಂಕ್ ಯೂನಿಯನ್ಸ್: ಜ.31ಕ್ಕೆ ಮಹತ್ವದ ಸಭೆ
- Technology
ಬಜೆಟ್ ಬೆಲೆಯಲ್ಲಿ ಈ ಸ್ಮಾರ್ಟ್ಫೋನ್ಗಳು ಬೆಸ್ಟ್ ಎನಿಸಿಲಿವೆ! ಜಬರ್ದಸ್ತ್ ಫೀಚರ್ಸ್!
- Automobiles
ಬೆಲೆ ಏರಿಕೆ ಪಡೆದುಕೊಂಡ ಪರ್ಫಾಮೆನ್ಸ್ ಕಾರು ಪ್ರಿಯರ ಮೆಚ್ಚಿನ ಹ್ಯುಂಡೈ ಐ20 ಎನ್ ಲೈನ್
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
'ಸೀತಾರಾಮ ಕಲ್ಯಾಣ' ಚಿತ್ರದಲ್ಲಿ ನಿಖಿಲ್ ಅಭಿನಯ ಕಂಡು ಚಪ್ಪಾಳೆ ತಟ್ಟಿದ ಸುದೀಪ್.!
ಕಳೆದ ವಾರವಷ್ಟೇ ಬಿಡುಗಡೆ ಆದ 'ಸೀತಾರಾಮ ಕಲ್ಯಾಣ' ಚಿತ್ರಕ್ಕೆ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಅಪ್ಪಟ ಫ್ಯಾಮಿಲಿ ಎಂಟರ್ ಟೇನರ್ ಆಗಿರುವ 'ಸೀತಾರಾಮ ಕಲ್ಯಾಣ' ಚಿತ್ರ ಬಹುತೇಕ ಚಿತ್ರಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ.
'ಸೀತಾರಾಮ ಕಲ್ಯಾಣ' ಚಿತ್ರವನ್ನು ಕಣ್ತುಂಬಿಕೊಂಡ ರಾಜಕಾರಣಿಗಳಾದ ಸಿದ್ದರಾಮಯ್ಯ, ಕೆ.ಎಸ್.ಈಶ್ವರಪ್ಪ, ಎಚ್.ಡಿ.ದೇವೇಗೌಡ ಸೇರಿದಂತೆ ಅನೇಕರು ನಿಖಿಲ್ ಅಭಿನಯವನ್ನು ಕೊಂಡಾಡಿದ್ದರು.
'ಸೀತಾರಾಮ
ಕಲ್ಯಾಣ'
ನೋಡಿ
ಭಲೇ
ಭಲೇ
ಎಂದ
ರಾಜಕಾರಣಿಗಳು.!
ಇದೀಗ 'ಸೀತಾರಾಮ ಕಲ್ಯಾಣ' ಚಿತ್ರವನ್ನ ವೀಕ್ಷಿಸಿದ ಸುದೀಪ್ ಕೂಡ ನಟ ನಿಖಿಲ್ ಕುಮಾರ್ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ''ನಿಖಿಲ್ ನಿಜಕ್ಕೂ ಭರವಸೆ ಮೂಡಿಸುತ್ತಾರೆ. ನಿಖಿಲ್ ಪರ್ಫಾಮೆನ್ಸ್ ನನಗೆ ತುಂಬಾ ಇಷ್ಟ ಆಯ್ತು. ಎಲ್ಲಾ ದೃಶ್ಯಗಳಿಗೂ ನಿಖಿಲ್ ಕುಮಾರ್ ನ್ಯಾಯ ಒದಗಿಸಿದ್ದಾರೆ. ಜನರ ಹೃದಯಕ್ಕೆ ಇನ್ನೂ ಹತ್ತಿರ ಆಗುವಂಥ ಸಿನಿಮಾಗಳಲ್ಲಿ ನಿಖಿಲ್ ಅಭಿನಯ ನೋಡಲು ಇಷ್ಟ ಪಡುವೆ. ಗೆಳೆಯ ನಿನಗೆ ಶುಭ ಹಾರೈಕೆಗಳು'' ಎಂದು ಕಿಚ್ಚ ಸುದೀಪ್ ಟ್ವೀಟ್ ಮಾಡಿದ್ದಾರೆ.
Nikhil surely looks a promising actor. luvd his subtlety in performance n has delivered what’s expected outta him towards the scene written. Would luv to see him in a script and a character mch simpler to take him close to peoples hearts. Bst wishes my friend.#Seetharamakalyana
— Kichcha Sudeepa (@KicchaSudeep) January 28, 2019
ಮೊಮ್ಮಗನ
'ಸೀತಾರಾಮ
ಕಲ್ಯಾಣ'
ಮೆಚ್ಚಿದ
ತಾತ
ಎಚ್.ಡಿ.ದೇವೇಗೌಡ
ಅಂದಹಾಗೆ ನಿಖಿಲ್, ರಚಿತಾ ರಾಮ್, ಮಧೂ, ಶರತ್ ಕುಮಾರ್ ಸೇರಿದಂತೆ ದೊಡ್ಡ ತಾರಾ ಬಳಗ ಹೊಂದಿರುವ 'ಸೀತಾರಾಮ ಕಲ್ಯಾಣ' ಚಿತ್ರಕ್ಕೆ ಎ.ಹರ್ಷ ಆಕ್ಷನ್ ಕಟ್ ಹೇಳಿದ್ದಾರೆ. ಚಿತ್ರಕ್ಕೆ ಎಲ್ಲೂ ಕಾಂಪ್ರಮೈಸ್ ಆಗದಂತೆ ಎಚ್.ಡಿ.ಕುಮಾರಸ್ವಾಮಿ ಮತ್ತು ಪತ್ನಿ ಅನಿತಾ ಕುಮಾರಸ್ವಾಮಿ ಬಂಡವಾಳ ಹಾಕಿದ್ದಾರೆ. ಕುಟುಂಬ ಸಮೇತ ಕೂತು ನೋಡುವ 'ಸೀತಾರಾಮ ಕಲ್ಯಾಣ' ಸಿನಿಮಾ ಸದ್ಯ ಗಾಂಧಿನಗರದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ.