Don't Miss!
- News Mysuru: ಏಪ್ರಿಲ್ 26ಕ್ಕೆ ಮೈಸೂರಿನ ಪ್ರವಾಸಿ ತಾಣಗಳು ಬಂದ್, ಕಾರಣ ಇಲ್ಲಿದೆ
- Finance April 23 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Automobiles ಸಾಮಾನ್ಯರಂತೆ ಹಳ್ಳಿಯಲ್ಲಿರುವ ದೇಶದ 55ನೇ ಶ್ರೀಮಂತ ಶ್ರೀಧರ್ ವೆಂಬು: ಕಚೇರಿಗೆ ಹೋಗಲು ಎಲೆಕ್ಟ್ರಿಕ್ ಆಟೋ ಖರೀದಿ!
- Technology Google Chrome: ಗೂಗಲ್ ಕ್ರೋಮ್ ಬಳಕೆದಾರರು ಹ್ಯಾಕಿಂಗ್ ಅಪಾಯದಲ್ಲಿ! ಸುರಕ್ಷಿತವಾಗಿರೋದು ಹೇಗೆ?
- Sports IPL 2024: ವಿರಾಟ್ ಕೊಹ್ಲಿ ವಿವಾದಾತ್ಮಕ ಔಟ್; ಅಂಪೈರಿಂಗ್ ವಿರುದ್ಧ ಕೆಂಡಕಾರಿದ ಮೊಹಮ್ಮದ್ ಕೈಫ್!
- Lifestyle ಮನೆಯಲ್ಲಿ ಘಮ ಘಮಿಸುವ ಮಲ್ಲಿಗೆ ಗಿಡ ಬೆಳೆಸೋದು ಹೇಗೆ..? ಇಲ್ಲಿದೆ ಮಾಹಿತಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಸೀತಾರಾಮ ಕಲ್ಯಾಣ' ಚಿತ್ರದಲ್ಲಿ ನಿಖಿಲ್ ಅಭಿನಯ ಕಂಡು ಚಪ್ಪಾಳೆ ತಟ್ಟಿದ ಸುದೀಪ್.!
ಕಳೆದ ವಾರವಷ್ಟೇ ಬಿಡುಗಡೆ ಆದ 'ಸೀತಾರಾಮ ಕಲ್ಯಾಣ' ಚಿತ್ರಕ್ಕೆ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಅಪ್ಪಟ ಫ್ಯಾಮಿಲಿ ಎಂಟರ್ ಟೇನರ್ ಆಗಿರುವ 'ಸೀತಾರಾಮ ಕಲ್ಯಾಣ' ಚಿತ್ರ ಬಹುತೇಕ ಚಿತ್ರಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ.
'ಸೀತಾರಾಮ ಕಲ್ಯಾಣ' ಚಿತ್ರವನ್ನು ಕಣ್ತುಂಬಿಕೊಂಡ ರಾಜಕಾರಣಿಗಳಾದ ಸಿದ್ದರಾಮಯ್ಯ, ಕೆ.ಎಸ್.ಈಶ್ವರಪ್ಪ, ಎಚ್.ಡಿ.ದೇವೇಗೌಡ ಸೇರಿದಂತೆ ಅನೇಕರು ನಿಖಿಲ್ ಅಭಿನಯವನ್ನು ಕೊಂಡಾಡಿದ್ದರು.
'ಸೀತಾರಾಮ ಕಲ್ಯಾಣ' ನೋಡಿ ಭಲೇ ಭಲೇ ಎಂದ ರಾಜಕಾರಣಿಗಳು.!
ಇದೀಗ 'ಸೀತಾರಾಮ ಕಲ್ಯಾಣ' ಚಿತ್ರವನ್ನ ವೀಕ್ಷಿಸಿದ ಸುದೀಪ್ ಕೂಡ ನಟ ನಿಖಿಲ್ ಕುಮಾರ್ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ''ನಿಖಿಲ್ ನಿಜಕ್ಕೂ ಭರವಸೆ ಮೂಡಿಸುತ್ತಾರೆ. ನಿಖಿಲ್ ಪರ್ಫಾಮೆನ್ಸ್ ನನಗೆ ತುಂಬಾ ಇಷ್ಟ ಆಯ್ತು. ಎಲ್ಲಾ ದೃಶ್ಯಗಳಿಗೂ ನಿಖಿಲ್ ಕುಮಾರ್ ನ್ಯಾಯ ಒದಗಿಸಿದ್ದಾರೆ. ಜನರ ಹೃದಯಕ್ಕೆ ಇನ್ನೂ ಹತ್ತಿರ ಆಗುವಂಥ ಸಿನಿಮಾಗಳಲ್ಲಿ ನಿಖಿಲ್ ಅಭಿನಯ ನೋಡಲು ಇಷ್ಟ ಪಡುವೆ. ಗೆಳೆಯ ನಿನಗೆ ಶುಭ ಹಾರೈಕೆಗಳು'' ಎಂದು ಕಿಚ್ಚ ಸುದೀಪ್ ಟ್ವೀಟ್ ಮಾಡಿದ್ದಾರೆ.
Nikhil surely looks a promising actor. luvd his subtlety in performance n has delivered what’s expected outta him towards the scene written. Would luv to see him in a script and a character mch simpler to take him close to peoples hearts. Bst wishes my friend.#Seetharamakalyana
— Kichcha Sudeepa (@KicchaSudeep) January 28, 2019
ಮೊಮ್ಮಗನ 'ಸೀತಾರಾಮ ಕಲ್ಯಾಣ' ಮೆಚ್ಚಿದ ತಾತ ಎಚ್.ಡಿ.ದೇವೇಗೌಡ
ಅಂದಹಾಗೆ ನಿಖಿಲ್, ರಚಿತಾ ರಾಮ್, ಮಧೂ, ಶರತ್ ಕುಮಾರ್ ಸೇರಿದಂತೆ ದೊಡ್ಡ ತಾರಾ ಬಳಗ ಹೊಂದಿರುವ 'ಸೀತಾರಾಮ ಕಲ್ಯಾಣ' ಚಿತ್ರಕ್ಕೆ ಎ.ಹರ್ಷ ಆಕ್ಷನ್ ಕಟ್ ಹೇಳಿದ್ದಾರೆ. ಚಿತ್ರಕ್ಕೆ ಎಲ್ಲೂ ಕಾಂಪ್ರಮೈಸ್ ಆಗದಂತೆ ಎಚ್.ಡಿ.ಕುಮಾರಸ್ವಾಮಿ ಮತ್ತು ಪತ್ನಿ ಅನಿತಾ ಕುಮಾರಸ್ವಾಮಿ ಬಂಡವಾಳ ಹಾಕಿದ್ದಾರೆ. ಕುಟುಂಬ ಸಮೇತ ಕೂತು ನೋಡುವ 'ಸೀತಾರಾಮ ಕಲ್ಯಾಣ' ಸಿನಿಮಾ ಸದ್ಯ ಗಾಂಧಿನಗರದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ.