Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಒಳ್ಳೆ ಮನಸ್ಸಿದ್ದರೆ ಅಡ್ಡಿ ಆತಂಕ ಇಲ್ಲ - ಕಿಚ್ಚ ಸುದೀಪ್
ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ದೊಡ್ಡಕಲ್ಲಸಂದ್ರ ಅಣ್ಣಮ್ಮದೇವಿ ಭಕ್ತ ಮಂಡಳಿ ಆಯೋಜಿಸಿದ್ದ ಎಸ್.ಪಿ.ಬಿ-ಸಾಧು ಕೋಕಿಲ ರಸಸಂಜೆ ಕಾರ್ಯಕ್ರಮದಲ್ಲಿ ನಟ ಕಿಚ್ಚ ಸುದೀಪ್ ಅವರನ್ನ ಸನ್ಮಾನಿಸಲಾಯಿತು.
ಎನ್.ಶ್ರೀನಿವಾಸ್ ನೇತೃತ್ವದಲ್ಲಿ ನಡೆದ ಈ ವರ್ಣರಂಜಿತ ಸಮಾರಂಭದಲ್ಲಿ ನಟ ಕಿಚ್ಚ ಸುದೀಪ್ ಜೊತೆಗೆ ಹಿರಿಯ ಕಲಾವಿದರಾದ ಸುದರ್ಶನ್, ಶೈಲಶ್ರೀ ಹಾಗೂ ಒಂದು ಸಾವಿರಕ್ಕೂ ಅಧಿಕ ಚಿತ್ರಗಳಿಗೆ ನೃತ್ಯ ನಿರ್ದೇಶನ ಮಾಡಿರುವ ದೇವಿ ಅವರನ್ನ ಸನ್ಮಾನ ಮಾಡಲಾಯ್ತು.
''ಒಳ್ಳೆ ಮನಸ್ಸಿನಿಂದ ಕಾರ್ಯಕ್ರಮ ನಡೆಸುವಾಗ ಎಂದಿಗೂ ಅಡ್ಡಿ-ಆತಂಕ ಆಗಲ್ಲ. ಶ್ರೀನಿವಾಸ್ ಅವರು ನನಗೆ ಹಳೇ ಪರಿಚಯ. ಕಲಾವಿದರಿಗೆ, ಕಾರ್ಯಕ್ರಮ ಆಯೋಜಿಸುವವರಿಗೆ ಅಭಿಮಾನಿಗಳೇ ಸ್ಪೂರ್ತಿ. ಅವರ ಬೆಂಬಲ ಇದ್ದರೆ ಎಂಥ ಕಷ್ಟದ ಕೆಲಸವೂ ಸುಲಭವಾಗುವುದು'' ಅಂತ ಮಳೆಯಲ್ಲಿ ಕುಳಿತಿದ್ದ ಸಾವಿರಾರು ಅಭಿಮಾನಿಗಳನ್ನ ಉದ್ದೇಶಿಸಿ ಸುದೀಪ್ ಮಾತನಾಡಿದರು. [ಕಿಚ್ಚ ಸುದೀಪ್ ಬೆಳ್ಳಿ ಕಿರೀಟ ನಿರಾಕರಿಸಿದ್ದು ಯಾಕೆ?]
ವರ್ಣರಂಜಿತ ವೇದಿಕೆಯಲ್ಲಿ ಸಾಧುಕೋಕಿಲ ಮತ್ತು ಅವರ ಸಹೋದರಿ ಉಷಾ ಹಾಗೂ ತಂಡದವರು ಇಂಪಾದ ಹಾಡುಗಳನ್ನ ಹಾಡಿದರು. ಸಂಸದ ಡಿ.ಕೆ.ಸುರೇಶ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಇಕ್ಬಾಲ್ ಹುಸೇನ್, ಗೋವಿಂದರಾಜು ಮುಂತಾದವರು ಉಪಸ್ಥಿತರಿದ್ದರು.
ಜನಪ್ರಿಯ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು ಕಾರ್ಯಕ್ರಮಕ್ಕೆ ಆಗಮಿಸಿದ್ದರೂ, ಭಾರಿ ಮಳೆಯ ಕಾರಣದಿಂದ ರಸಸಂಜೆ ಕಾರ್ಯಕ್ರಮವನ್ನ ನಡೆಸಿಕೊಡಲಾಗಲಿಲ್ಲ. (ಫಿಲ್ಮಿಬೀಟ್ ಕನ್ನಡ)