Don't Miss!
- Automobiles ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- News Rameshwar Cafe: ರಾಮೇಶ್ವರ ಕೆಫೆ ಬಾಂಬ್ ಸ್ಪೋಟ ಪ್ರಕರಣ: ದಾಳಿಗೆ ಸಹಾಯ ಮಾಡಿದ ವ್ಯಕ್ತಿ ಬಂಧನ- ತೀರ್ಥಹಳ್ಳಿ ಉಗ್ರನೊಂದಿಗೆ ಸಂಪರ್
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Lifestyle 2024: ಮದುವೆ, ಗಾಡಿ ಖರೀದಿ, ಗೃಹ ಪ್ರವೇಶ ಹೀಗೆ ಶುಭ ಕಾರ್ಯಕ್ಕೆ ಏಪ್ರಿಲ್ನಲ್ಲಿರುವ ಶುಭ ದಿನಾಂಕಗಳಿವು
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುದೀಪ್ ಈ ಚಿತ್ರಕ್ಕೆ ಬೇಕೇ ಬೇಕು ಎಂದು ಆ ನಿರ್ದೇಶಕ ಪಟ್ಟು ಹಿಡಿದಿದ್ದೇಕೆ?
Recommended Video
ಕೆಲವು ನಿರ್ದೇಶಕರು ಸಿನಿಮಾ ಕಥೆ ಮಾಡಿ ಈ ಕಥಗೆ ಈ ನಾಯಕ ಸೂಕ್ತವಾಗಬಹುದು ಎಂದು ಆಯ್ಕೆ ಮಾಡುತ್ತಾರೆ. ಮತ್ತೆ ಕೆಲವರು ಈ ನಾಯಕನಿಗಾಗಿಯೇ ಕಥೆ ಮಾಡಿ ಸಿನಿಮಾ ಮಾಡ್ತಾರೆ. ಅದು ಹಲವರು ಬಾರಿ ಸಾಬೀತಾಗಿದೆ.
ಇದೀಗ, ತೆಲುಗಿನ ಖ್ಯಾತ ನಿರ್ದೇಶಕ ಆಕ್ಷನ್ ಕಟ್ ಹೇಳುತ್ತಿರುವ ದುಬಾರಿ ಚಿತ್ರದ ಪ್ರಮುಖ ಪಾತ್ರವೊಂದಕ್ಕೆ ಕನ್ನಡದ ಕಿಚ್ಚ ಸುದೀಪ್ ಅವರು ಬೇಕೇ ಬೇಕು ಎಂದು ಪಟ್ಟು ಹಿಡಿದು ಒಪ್ಪಿಸಿದ್ದಾರೆ. ಈ ಚಿತ್ರಕ್ಕೆ ಸುದೀಪ್ ಆರಂಭದಲ್ಲಿ ಒಪ್ಪಿಗೆ ಸೂಚಿಸಲು ಹಿಂದೇಟು ಹಾಕಿದ್ದರು. ಆದ್ರೆ, ನಿರ್ದೇಶಕರ ಬೇಡಿಕೆ ಮತ್ತು ಒತ್ತಾಯಕ್ಕೆ ಮಣಿದು ಕಿಚ್ಚ ಗ್ರೀನ್ ಸಿಗ್ನಲ್ ಕೊಡಬೇಕಾಯಿತು ಎನ್ನುವುದು ಗಾಂಧಿನಗರದ ಮಾತು. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿ......
ಮೆಗಾಸ್ಟಾರ್ ಚಿತ್ರವನ್ನ ಬೇಡವೆಂದಿದ್ದ ಸುದೀಪ್.!
ಮೆಗಾಸ್ಟಾರ್ ಚಿರಂಜೀವಿ ಅಭಿನಯಿಸುತ್ತಿರುವ 'ಸೈರಾ ನರಸಿಂಹ ರೆಡ್ಡಿ' ಚಿತ್ರದಲ್ಲಿ ಅಭಿನಯಿಸಲು ಸುದೀಪ್ ಅವರಿಗೆ ಅವಕಾಶ ಬಂದಿತ್ತು. ಆದ್ರೆ, ಅತಿ ಹೆಚ್ಚು ದಿನಗಳ ಕಾಲ ಕಾಲ್ ಶೀಟ್ ಕೊಡಬೇಕು ಎಂಬ ಕಾರಣದಿಂದ ಸುದೀಪ್ ಈ ಅವಕಾಶವನ್ನ ಬೇಡವೆಂದಿದ್ದರಂತೆ. ಹೀಗಾಗಿ, ಚಿರು ಚಿತ್ರವನ್ನ ಸುದೀಪ್ ರಿಜೆಕ್ಟ್ ಮಾಡಿದರು ಎಂಬ ಸುದ್ದಿಯಾಯಿತು.
ಯಾರ್ರೀ ಹೇಳಿದ್ದು ಸುದೀಪ್ ಗೆ 'ಮೆಗಾ' ಆಫರ್ ಕೈತಪ್ಪಿ ಹೋಯ್ತು ಅಂತ.?!
ನಿರ್ದೇಶಕರು ಪಟ್ಟು ಹಿಡಿದು ಕುಂತರು.!
ಸುದೀಪ್ ಅವರೇ ಈ ಚಿತ್ರವನ್ನ ಕೈಬಿಡಲು ನಿರ್ಧರಿಸಿ ಬಿಟ್ಟಿದ್ದರು. ಆದ್ರೆ, ಆ ಚಿತ್ರದ ನಿರ್ದೇಶಕ ಸುರೇಂದರ್ ರೆಡ್ಡಿ ಅವರು ಕಿಚ್ಚನನ್ನ ಬಿಡಲಿಲ್ಲ. ''ಈ ಪಾತ್ರವನ್ನು ನೀವು ಮಾಡಲೇ ಬೇಕು. ನೀವು ನಮ್ಮ ಸಿನಿಮಾದಲ್ಲಿದ್ದರೇ ಚೆಂದ. ನೀವು ಬಿಟ್ಟರೇ ಈ ಪಾತ್ರವನ್ನು ಬೇರೆ ಯಾರಿಂದಲೂ ಮಾಡಲು ಸಾದ್ಯವಿಲ್ಲ'' ಎಂದು ಸುರೇಂದ್ರ ರೆಡ್ಡಿ ಪಟ್ಟು ಹಿಡಿದರಂತೆ.
ಚಿರಂಜೀವಿ 151ನೇ ಚಿತ್ರದಲ್ಲಿ ಅಮಿತಾಬ್ ಪಾತ್ರದ ಗುಟ್ಟು ಈಗ ರಟ್ಟು.!
ಕಾಲ್ ಶೀಟ್ ನಲ್ಲಿ ಸಂಧಾನ
ಮೊದಲು ಹೇಳಿದಂತೆ ಈ ಚಿತ್ರದಲ್ಲಿ ಸುದೀಪ್ ಅವರು ಸುಮಾರು 100 ದಿನಕ್ಕಿಂತ ಹೆಚ್ಚು ಕಾಲ್ ಶೀಟ್ ನೀಡಬೇಕಾಗಿತ್ತಂತೆ. ಆದ್ರೆ, ಸುದೀಪ್ ಅವರು ಬಿಜಿ ಶೆಡ್ಯೂಲ್ ಬಗ್ಗೆ ಅರಿತು ಕೊಂಡ ನಿರ್ದೇಶಕರು 45 ರಿಂದ 50 ದಿನಕ್ಕೆ ಕಾಲ್ ಶೀಟ್ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಈ ಮೂಲಕ 'ಸೈರಾ ನರಸಿಂಹ ರೆಡ್ಡಿ' ಚಿತ್ರಕ್ಕೆ ಸುದೀಪ್ ಸಿದ್ದವಾಗಿದ್ದಾರಂತೆ.
ಎಲ್ಲ ಭಾಷೆಯ ನಟರು ಇದ್ದಾರೆ
ಅಂದ್ಹಾಗೆ, ಈ ಚಿತ್ರದಲ್ಲಿ ಎಲ್ಲ ಭಾಷೆಯ ಸ್ಟಾರ್ ನಟರು ಅಭಿನಯಿಸುತ್ತಿದ್ದಾರೆ. ಹಿಂದಿಯ ಮೆಗಾ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್, ತಮಿಳಿನ ವಿಜಯ್ ಸೇಥುಪತಿ, ಜಗಪತಿ ಬಾಬು, ನಯನತಾರ ಇವರ ಜೊತೆ ಸುದೀಪ್ ತೆರೆ ಹಂಚಿಕೊಳ್ಳುತ್ತಿದ್ದಾರೆ.
ಸುದೀಪ್ ಸಿನಿಮಾ ಪಟ್ಟಿ ನೋಡಿ
ಸದ್ಯ, ಸುದೀಪ್ 'ದಿ ವಿಲನ್' ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. 'ಬಿಗ್ ಬಾಸ್ ಕನ್ನಡ-5' ಶೋ ನಿರೂಪಣೆ ಮಾಡ್ತಿದ್ದಾರೆ. 'ದಿ ವಿಲನ್' ಚಿತ್ರದ ನಂತರ ಪೈಲ್ವಾನ್, 'ಕೋಟಿಗೊಬ್ಬ-3', ರೆಬೆಲ್ ಸ್ಟಾರ್ ಜೊತೆಗೆ 'ಅಂಬಿ ನಿಂಗೆ ವಯಸ್ಸಾಯ್ತೋ' ಚಿತ್ರದಲ್ಲಿ ಅಭಿನಯಿಸಲಿದ್ದಾರೆ. ಈ ಗ್ಯಾಪ್ ನಲ್ಲಿ ಹಾಲಿವುಡ್ `ರೈಸನ್' ಸಿನಿಮಾ ಕೂಡ ಮಾಡುತ್ತಿದ್ದಾರೆ. ಇದೆಲ್ಲರ ಮಧ್ಯೆ 'ಸೈರಾ ನರಸಿಂಹ ರೆಡ್ಡಿ' ಸಿನಿಮಾಗೂ ಒಕೆ ಅಂದಿದ್ದಾರೆ.
'ಸೈರಾ' ಚಿತ್ರದ ಬಗ್ಗೆ
ಅಂದ್ಹಾಗೆ, ಸ್ವಾತಂತ್ರ್ಯ ಹೋರಾಟಗಾರ ನರಸಿಂಹರೆಡ್ಡಿ ಅವರ ಐತಿಹಾಸಿಕ ಕಥೆ ಇದಾಗಿದ್ದು, ಸುರೇಂದ್ರ ರೆಡ್ಡಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ನಟ ರಾಮ್ ಚರಣ್ ಸಿನಿಮಾಗೆ ಬಂಡವಾಳ ಹಾಕುತ್ತಿದ್ದು, ಎ.ಆರ್.ರೆಹಮಾನ್ ಮ್ಯೂಸಿಕ್ ಒಳಗೊಂಡಿದೆ. ಇನ್ನು ತೆಲಗು, ತಮಿಳು, ಮಲೆಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಈ ಸಿನಿಮಾ ಮೂಡಿ ಬರಲಿದೆ.