Don't Miss!
- News Gold Price: ಇಂದು ಮತ್ತಷ್ಟು ಹೆಚ್ಚಾದ ಬಂಗಾರದ ಬೆಲೆ: ಬೆಳ್ಳಿಯೂ ಬಲು ದುಬಾರಿ
- Technology AI Camera: ಎಐ ಕ್ಯಾಮೆರಾ ಆಯ್ಕೆ ಇರುವ ಅತ್ಯುತ್ತಮ ಸ್ಮಾರ್ಟ್ಫೋನ್ಗಳಿವು! ಬೆಲೆ ಎಷ್ಟು ?
- Sports IPL 2024: RCB vs KKR ಹೆಡ್-ಟು-ಹೆಡ್ ದಾಖಲೆ, ಪಿಚ್ ವರದಿ; ಚಿನ್ನಸ್ವಾಮಿಯಲ್ಲಿ ಗೆಲುವು ಯಾರಿಗೆ?
- Finance ವಿವಿಧ ರಾಜ್ಯಗಳ ನರೇಗಾ ಕಾರ್ಮಿಕರ ವೇತನ ದರ ಪರಿಷ್ಕರಣೆ, ವಿವರ
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾತ್ರೋರಾತ್ರಿ ವಿಜಯ್ ಆಪರೇಷನ್ಗೆ ವ್ಯವಸ್ಥೆ ಮಾಡಿಸಿದ ಸುದೀಪ್
ನಟ ಸಂಚಾರಿ ವಿಜಯ್ಗೆ ಅಪಘಾತವಾದ ಕೂಡಲೇ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಕರೆದುಕೊಂಡು ಬರುವಷ್ಟರಲ್ಲಿ ಸಾಕಷ್ಟು ರಕ್ತಸ್ರಾವ ಆಗಿತ್ತು.
Recommended Video
ಈ ವೇಳೆ ಬಲ ತೊಡೆ ಹಾಗೂ ಮೆದುಳಿನ ಬಲ ಭಾಗಕ್ಕೆ ಬಲವಾದ ಪೆಟ್ಟು ಬಿದ್ದಿರುವುದು ತಿಳಿಯುತ್ತದೆ. ಆ ರಾತ್ರಿ ಸಮಯದಲ್ಲೇ ಶಸ್ತ್ರ ಚಿಕಿತ್ಸೆ ಮಾಡಬೇಕಾದ ಅನಿವಾರ್ಯತೆ ಉಂಟಾಗುತ್ತದೆ. ಆಗ ನಟ ಟೈಗರ್ ಖ್ಯಾತಿಯ ಪ್ರದೀಪ್ ಮೂಲಕ ಕಿಚ್ಚ ಸುದೀಪ್ರನ್ನು ಸಂಪರ್ಕಿಸಲಾಗುತ್ತದೆ.
ರಾತ್ರೋರಾತ್ರಿ ವಿಷಯ ತಿಳಿದ ಸುದೀಪ್ ಕೂಡಲೇ ಅಪೋಲೋ ಆಸ್ಪತ್ರೆಯ ಮುಖಸ್ಥರಿಗೆ ಕರೆ ಮಾಡಿ, ಬೇಗ ಶಸ್ತ್ರ ಚಿಕಿತ್ಸೆ ಮಾಡಲು ವ್ಯವಸ್ಥೆ ಮಾಡಿದ್ದಾರೆ. ಆ ನಂತರ ನ್ಯೂರೋ ಸರ್ಜನ್ ಡಾ ಅರುಣ್ ನಾಯಕ್ ರಾತ್ರಿಯೇ ಸಂಚಾರಿ ವಿಜಯ್ಗೆ ಯಶಸ್ವಿಯಾಗಿ ಆಪರೇಷನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಸಂಚಾರಿ ವಿಜಯ್ಗೆ ಏನಾಗಿದೆ, ವೈದ್ಯರು ಏನು ಹೇಳಿದ್ರು?
ಕಳೆದ ರಾತ್ರಿಯಿಂದಲೂ ನಟ ಪ್ರದೀಪ್, ಸಂಚಾರಿ ವಿಜಯ್ ಆರೋಗ್ಯದ ಬಗ್ಗೆ ಮಾಹಿತಿ ಪಡೆಯುತ್ತಿದ್ದು, ಸುದೀಪ್ಗೂ ಈ ವಿಷಯ ಮುಟ್ಟಿದೆ.
ಮತ್ತೊಂದೆಡೆ ಸಂಚಾರಿ ವಿಜಯ್ಗೆ ಅಪಘಾತ ನಡೆದ ವಿಚಾರ ತಿಳಿದ ಕೂಡಲೇ ನಟ ಸತೀಶ್ ನೀನಾಸಂ ಆಸ್ಪತ್ರೆ ಬಳಿ ಭೇಟಿ ನೀಡಿದ್ದಾರೆ. ವಿಜಯ್ ಆರೋಗ್ಯದ ಬಗ್ಗೆ ನಿಗಾವಹಿಸಿದ್ದು, ವೈದ್ಯರ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ.
ನಂತರ ಮಾಧ್ಯಮದವರ ಜೊತೆ ಮಾಡಿದ ಸತೀಶ್ ನೀನಾಸಂ 'ವಿಜಯ್ ಅವರಿಗೆ ಪ್ರಾಣಾಪಾಯ ಇಲ್ಲ. ಅವರು ಶೀಘ್ರ ಗುಣಮುಖರಾಗುತ್ತಾರೆ' ಎಂದು ಭರವಸೆ ವ್ಯಕ್ತಪಡಿಸಿದರು.