Don't Miss!
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- News ಉಚಿತ ಉಪಹಾರದಿಂದ ಉಚಿತ ದಂತ ತಪಾಸಣೆವರೆಗೆ; ಮತದಾನ ಮಾಡಿದವರಿಗೆ ಭರ್ಜರಿ ಆಫರ್ ಕೊಟ್ಟ ಮೈಸೂರು ವ್ಯಾಪಾರಸ್ಥರು
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗುರುಗಳ ಚಿತ್ರಕ್ಕೆ ಪವರ್ ತುಂಬಿದ ಕಿಚ್ಚ ಸುದೀಪ್
ಸಸ್ಪೆನ್ಸ್ ಥ್ರಿಲ್ಲರ್ ಚಿತ್ರಗಳ ಮಾಸ್ಟರ್ ಮೈಂಡ್ ನಿರ್ದೇಶಕ ಅಂತಾಲೇ ಖ್ಯಾತಿ ಗಳಿಸಿಕೊಂಡಿರುವ ಕನ್ನಡದ ಹೆಸರಾಂತ ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ, ಸದ್ಯ 'ಉದ್ಘರ್ಷ' ಸಿನಿಮಾ ಮೂಲಕ ದೊಡ್ಡ ನಿರೀಕ್ಷೆ ಹುಟ್ಟುಹಾಕಿದ್ದಾರೆ.
ಸುನೀಲ್ ಕುಮಾರ್ ದೇಸಾಯಿ ಯಾವುದೇ ಸಿನಿಮಾ ನಿರ್ದೇಶನ ಮಾಡೋಕೆ ಶುರು ಮಾಡಿದ್ರೂ, ಅಂತಹ ಸಮದಯದಲ್ಲಿ ಮತ್ತೊಂದು ದೊಡ್ಡ ಪ್ರಶ್ನೆ ಉದ್ಬವವಾಗುತ್ತೆ. ಕಿಚ್ಚ ಸುದೀಪ್ ಅವರ ಜೊತೆ ಯಾವಾಗ ಚಿತ್ರ ಮಾಡ್ತೀರಿ? ಎಂದು ಪ್ರಶ್ನಿಸುವ ಅಭಿಮಾನಿಗಳು ಹೆಚ್ಚಾಗ್ತಾರೆ. ಆದ್ರೆ, ಅದಕ್ಕೆ ಉತ್ತರ ಮಾತ್ರ ಸಿಕ್ಕಿಲ್ಲ.
ಬಿಡುಗಡೆಗೆ ಮೊದಲೇ ಹೆಚ್ಚಿದ ಬೇಡಿಕೆ, ಮಲಯಾಳಂಗೆ ಬಂತು 'ಉದ್ಘರ್ಷ'
ಆದ್ರೀಗ, ಇವರಿಬ್ಬರು ಸೇರಿ ಸರ್ಪ್ರೈಸ್ ನೀಡಿದ್ದಾರೆ. ಉದ್ಘರ್ಷ ಚಿತ್ರದ ಟ್ರೈಲರ್ ಗೆ ಅಭಿನಯ ಚಕ್ರವರ್ತಿ ಅವರಿಂದ ಹಿನ್ನಲೆ ಧ್ವನಿ ನೀಡಿಸಿದ್ದಾರೆ. ಕನ್ನಡ, ತೆಲುಗು, ತಮಿಳು, ಮಲಯಾಳಂನಲ್ಲಿ ಮೂಡಿ ಬಂದಿರುವ ಈ ಚಿತ್ರದ ಟ್ರೈಲರ್ ನೋಡಿ ಮೆಚ್ಚಿಕೊಂಡಿರುವ ಸುದೀಪ್, ಅತ್ಯಂತ ಖುಷಿಯಿಂದಲೇ ಕಂಠದಾನ ಮಾಡಿದ್ದಾರೆ.
'ಉದ್ವರ್ಘ' ಶೂಟಿಂಗ್ ಮುಗಿಸಿದ ಸುನೀಲ್ ಕುಮಾರ್ ದೇಸಾಯಿ
ಸೋಮವಾರ ಹೈದರಾಬಾದ್ ಗೆ ತೆರಳಿದ್ದ ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ, ನಿರ್ಮಾಪಕರಾದ ಆರ್. ದೇವರಾಜ್ ಸುದೀಪ್ ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಜೊತೆಗೆ ಹೈದರಾಬಾದ್ ನಲ್ಲಿಯೇ ಸುದೀಪ್ ಅವರಿಂದ ಟ್ರೈಲರ್ಗೆ ಡಬ್ಬಿಂಗ್ ಮಾಡಿಸಿದ್ದಾರೆ.
ಸುನೀಲ್ ಕುಮಾರ್ ದೇಸಾಯಿ ಸಂದರ್ಶನ: ನಾನು, ನನ್ನ ಬರ್ತಡೇ ಮತ್ತು 'ಉದ್ಘರ್ಷ'
ವಿಶೇಷ ಅಂದರೆ ನಾಲ್ಕೂ ಭಾಷೆಯಲ್ಲೂ ಸುದೀಪ್ ರದ್ದೇ ಧ್ವನಿ ಕೇಳಲಿದ್ದು, ಚಿತ್ರದ ಬಗ್ಗೆ ಮತ್ತಷ್ಟು ನಿರೀಕ್ಷೆ ಹೆಚ್ಚಿದೆ ಇದರ ಬೆನ್ನಲ್ಲೆ ಸುನೀಲ್ ಕುಮಾರ್ ದೇಸಾಯಿ ಮತ್ತು ಸುದೀಪ್ ಜೋಡಿಯಲ್ಲಿ ಹೊಸ ಸಿನಿಮಾ ಬರುತ್ತಾ ಎಂಬ ಚರ್ಚೆಗೆ ಮತ್ತೆ ಹುಟ್ಟಿಕೊಂಡಿದೆ.
ಮಿಸ್ಟರ್ ವರ್ಲ್ಡ್ ಸಿಂಗಮ್ -3 ಖ್ಯಾತಿಯ ಠಾಕೂರ್ ಅನೂಪ್ ಸಿಂಗ್, 'ಕಬಾಲಿ' ಖ್ಯಾತಿಯ ಧನ್ಸಿಕಾ, ತಾನ್ಯಾ ಹೋಪ್, ಕಬೀರ್ ಸಿಂಗ್ ದುಹಾನ್, ಬಾಹುಬಲಿ ಖ್ಯಾತಿಯ ಪ್ರಭಾಕರ್, ಕಿಶೋರ್, ವಂಶಿಕೃಷ್ಣ, ಶ್ರವಣ್ ರಾಘವೇಂದ್ರ, ಶ್ರದ್ಧಾ ದಾಸ್, ಮತ್ತು ಅತಿಥಿ ಪಾತ್ರದಲ್ಲಿ ಹರ್ಷಿಕಾ ಪೂಣಚ್ಚ ಸೇರಿದಂತೆ ಬಹುದೊಡ್ಡ ತಾರಾಗಣವನ್ನ ಒಳಗೊಂಡಿದೆ.
ಇನ್ನು ಚಿತ್ರದ ಬಹುತೇಕ ಚಿತ್ರೀಕರಣ ಮಡಿಕೇರಿಯಲ್ಲಿ ನಡೆದಿದ್ದು, ಬೆಂಗಳೂರು, ಹೈದರಾಬಾದ್ ಹಾಗೂ ಕೇರಳದಲ್ಲೂ ಕೆಲ ದೃಶ್ಯಗಳ ಚಿತ್ರೀಕರಣವಾಗಿದೆ. ಈ ಚಿತ್ರವನ್ನು ಡಿ ಕ್ರಿಯೇಷನ್ಸ್ ಅಡಿಯಲ್ಲಿ ದೇವರಾಜ್ .R ನಿರ್ಮಿಸುತ್ತಿದ್ದು, ಅವರ ಮಿತ್ರರಾದ ಮಂಜುನಾಥ್ .ಡಿ , ತಿರುಮಲೈ , ರಾಜೇಂದ್ರ ಕುಮಾರ್ ಸಹ ನಿರ್ಮಾಪಕರರಾಗಿ ಕೈ ಜೋಡಿಸಿದ್ದಾರೆ. M.S ಧೋನಿ , ಬೇಬೀ, ಏ ವೆಡ್ನೆಸ್ಡೇ ಖ್ಯಾತಿಯ ಸಂಜೋಯ್ ಚೌದುರಿ ಸಂಗೀತ ಸಂಯೋಜಿಸುತ್ತಿದ್ದಾರೆ. ವಿಷ್ಣು ವರ್ಧನ್ ಹಾಗೂ P.ರಾಜನ್ ಅವರ ಛಾಯಾಗ್ರಹಣವಿದೆ. ಇನ್ನು ಚಿತ್ರಕ್ಕೆ B.S ಕೆಂಪರಾಜು ಅವರು ಸಂಕಲನಕಾರರಾಗಿ ಕಾರ್ಯನಿರ್ವಹಿಸಿದ್ದಾರೆ.