Don't Miss!
- Automobiles ಜೀವದ ಗೆಳೆಯನಿಗೆ ಸರ್ಪ್ರೈಸ್ ಆಗಿ 'ಬೈಕ್' ಉಡುಗೊರೆ ನೀಡಿದ ವಧು.. ಆತನ ಸಂತೋಷಕ್ಕೆ ಪಾರವೇ ಇರಲಿಲ್ಲ!
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Lifestyle ಮೈ ತೂಕ ಕಡಿಮೆಯಾಗಲು ಈ ಪುದೀನಾ ನೀರು ಸಹಕಾರಿಯೇ? ಇದರ ಇತರ ಪ್ರಯೋಜನಗಳೇನು?
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ವಿಷ್ಣು ಸ್ಮಾರಕ' ಹೋರಾಟದಲ್ಲಿ ಕಿಚ್ಚನಿಗೆ ಮೊದಲ ಗೆಲುವು
ಕನ್ನಡ ಸಿನಿಮಾರಂಗದ ಸಾಹಸಸಿಂಹ ವಿಷ್ಣುವರ್ಧನ್ ಪುಣ್ಯಭೂಮಿ ವಿಚಾರವಾಗಿ ಒಂದು ವಾರದ ಹಿಂದೆಯಷ್ಟೇ ಕಿಚ್ಚ ಸುದೀಪ್ ಸಿ ಎಂ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ್ದರು. ಸ್ಮಾರಕ ನಿರ್ಮಾಣ ಮಾಡಲು ಇರುವ ಸಮಸ್ಯೆಗಳನ್ನು ಹಾಗೂ ಪರ್ಯಾಯವಾಗಿ ಏನು ಮಾಡಬಹುದು ಎನ್ನುವ ವಿಚಾರಗಳನ್ನ ಒಟ್ಟಿಗೆ ಕೂತು ಚರ್ಚೆ ಮಾಡಿದ್ದರು.
ಸುದೀಪ್ ಮೇಲೆ ಭಾರತಿ ವಿಷ್ಣುವರ್ಧನ್ ಅಸಮಾಧಾನಗೊಂಡ್ರಾ?
ಪುಣ್ಯಭೂಮಿ ಮಾಡಲು ಅವಕಾಶ ಕಲ್ಪಿಸಿ ಸ್ಮಾರಕವನ್ನ ಮೈಸೂರಿನಲ್ಲೇ ಮಾಡಿ ಎಂದು ಬೇಡಿಕೆ ಇಟ್ಟಿದ್ದ ಕಿಚ್ಚನ ಮನವಿಗೆ ಮೊದಲ ಗೆಲವು ಸಿಕ್ಕಿದೆ. ಮುಖ್ಯಮಂತ್ರಿಗಳ ಕಛೇರಿಯಿಂದ 'ವಿಷ್ಣು ಸ್ಮಾರಕ'ದ ವಿಚಾರ ನೀಡಿರುವ ಮನವಿಯನ್ನ ಪರಿಶೀಲಿಸಿ ಆದಷ್ಟು ಬೇಗ ಕ್ರಮ ತೆಗೆದುಕೊಳ್ಳುತ್ತೇವೆ ಎನ್ನುವ ಉತ್ತರವನ್ನ ನೀಡಿದ್ದಾರೆ.
ಸಿದ್ಧರಾಮಯ್ಯ ಭೇಟಿ ಬೆನ್ನಲ್ಲೆ ರಾಜಕೀಯ ಪ್ರವೇಶ ಸುದ್ದಿ ಬಗ್ಗೆ ಸುದೀಪ್ ಮಾತು!
ಮುಖ್ಯಮಂತ್ರಿಗಳ ಕಛೇರಿಯಿಂದ ಬಂದಿರುವ ಪತ್ರದ ಪ್ರತಿಯನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಾಕಿರುವ ಕಿಚ್ಚ ಸುದೀಪ್ ಇದು ನಿಜಕ್ಕೂ ನಮ್ಮೆಲ್ಲರಿಗೂ ವಿಶೇಷವಾದ ಕ್ಷಣವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ಇಡೀ ಕನ್ನಡ ಚಿತ್ರರಂಗವೇ ಒಟ್ಟಿಗೆ ನಿಂತು ಹೋರಾಟ ಮಾಡುತ್ತಿರುವ 'ವಿಷ್ಣು ಪುಣ್ಯಭೂಮಿ' ವಿಚಾರದಲ್ಲಿ ಕಿಚ್ಚನಿಗೆ ಮೊದಲನೆಯ ಜಯ ಸಿಕ್ಕಿದ್ದು ಮುಂದಿನ ದಿನಗಳಲ್ಲಿ ಸರ್ಕಾರ ಯಾವ ರೀತಿಯಲ್ಲಿ ಈ ಕೆಲಸವನ್ನ ಮಾಡುತ್ತೆ ಅನ್ನೋದನ್ನ ಕಾದು ನೋಡಬೇಕಿದೆ.