Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿತರಕರಿಗೆ 'ರನ್ನ' ನಿರ್ಮಾಪಕ ಚಂದ್ರಶೇಖರ್ ಗುನ್ನ
ಸೆಟ್ಟೇರಿದಾಗಿನಿಂದಲೂ ಒಂದಲ್ಲಾ ಒಂದು ವಿವಾದದಿಂದ 'ರನ್ನ' ಚಿತ್ರ ಸದ್ದು-ಸುದ್ದಿ ಮಾಡುತ್ತಿದೆ. ಈಗ 'ರನ್ನ' ಸಿನಿಮಾ ರಿಲೀಸ್ ಆಗಿ ನಾಲ್ಕು ದಿನಗಳು ಕಳೆದಿವೆ. ಈಗಲೂ 'ರನ್ನ' ಹೊಸ ವಿವಾದದಿಂದ ಸೌಂಡ್ ಮಾಡ್ತಿದೆ.
ವಿತರಣೆ ಹಣವನ್ನ ನೀಡದ ಕಾರಣಕ್ಕೆ 'ರನ್ನ' ಚಿತ್ರ ನಿರ್ಮಾಪಕ ಚಂದ್ರಶೇಖರ್ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮೆಟ್ಟಿಲೇರಿದ್ದಾರೆ. ವಿತರಣಾ ಹಕ್ಕು ಪಡೆದಿದ್ದ ಗೋಕುಲ್ ಫಿಲ್ಮ್ಸ್ ಮಾಲೀಕ ಬಲರಾಮ್ ವಿರುದ್ಧ ನಿರ್ಮಾಪಕ ಚಂದ್ರಶೇಖರ್ ದೂರು ನೀಡಿದ್ದಾರೆ. [ಚಿತ್ರ ವಿಮರ್ಶೆ; ಕಳೆಗುಂದಿಲ್ಲ ಸುದೀಪ್ 'ರನ್ನ'ನ ರಂಗು]
ವಾಣಿಜ್ಯ ಮಂಡಳಿ ಅಧ್ಯಕ್ಷ ಥಾಮಸ್ ಡಿಸೋಜ ಮತ್ತು ಕಾರ್ಯದರ್ಶಿ ಬಾಮಾ ಹರೀಶ್ ನೇತೃತ್ವದಲ್ಲಿ ಸಭೆ ನಡೆದಿದ್ದು, ನಿರ್ಮಾಪಕರಿಗೆ ಹಣ ನೀಡುವಂತೆ ವಿತರಕ ಬಲರಾಮ್ ಅವರಿಗೆ ಸೂಚನೆ ನೀಡಲಾಗಿದೆ. ['ರನ್ನ'ನ ಅಬ್ಬರಕ್ಕೆ ಬಾಕ್ಸ್ ಆಫೀಸ್ ಚಿಂದಿ ಚಿತ್ರಾನ್ನ!]
ಮೂರು ದಿನಗಳಲ್ಲಿ ಕಿಚ್ಚ ಸುದೀಪ್-ರಚಿತಾ ರಾಮ್ ಅಭಿನಯದ 'ರನ್ನ' ಸುಮಾರು 10 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು ಅನ್ನುವ ಸುದ್ದಿ ಗಾಂಧಿನಗರದಿಂದ ಹೊರಬಂದಿತ್ತು.