Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ರನ್ನ' ಚಿತ್ರಕ್ಕೆ ಎದುರಾಗಿದೆ ಹೊಸ ಸಂಕಷ್ಟ
ಕಿಚ್ಚ ಸುದೀಪ್ ಅಭಿನಯದ 'ರನ್ನ' ಚಿತ್ರ ಜೂನ್ 4 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ರಿಲೀಸ್ ಆಗಲು ಸಜ್ಜಾಗಿದೆ. ಹೀಗಿರುವಾಗಲೇ 'ರನ್ನ' ನಿರ್ಮಾಪಕರಿಗೆ ಸಂಕಷ್ಟ ಎದುರಾಗಿದೆ. ನಿರ್ಮಾಪಕ ಚಂದ್ರಶೇಖರ್ ವಿರುದ್ಧ ಚಿತ್ರ ವಿತರಕ ಪ್ರಸನ್ನ ಕುಮಾರ್ ಕೋರ್ಟ್ ಮೆಟ್ಟಿಲೇರಿದ್ದಾರೆ.
'ರನ್ನ' ಶೂಟಿಂಗ್ ಹಂತದಲ್ಲಿರುವಾಗಲೇ ಬೆಂಗಳೂರು, ಮೈಸೂರು ಮತ್ತು ಕೋಲಾರ ಜಿಲ್ಲೆಗಳ ವಿತರಣಾ ಹಕ್ಕುಗಳನ್ನ ಪ್ರಸನ್ನ ಕುಮಾರ್ ಅವರಿಗೆ ನಿರ್ಮಾಪಕ ಚಂದ್ರಶೇಖರ್ ಮಾರಟ ಮಾಡಿದ್ದರು. ಆದರೂ, ಪೋಸ್ಟರ್ ಗಳಲ್ಲಿ ಪ್ರಸನ್ನ ಕುಮಾರ್ ಹೆಸರು ಹಾಕಿರಲಿಲ್ಲ.
ಇದೀಗ 'ರನ್ನ' ಚಿತ್ರ ಬಿಡುಗಡೆ ದಿನಾಂಕ ಸನಿಹವಾಗುತ್ತಿದ್ದಂತೆ ಚಿತ್ರದ ಸಂಪೂರ್ಣ ವಿತರಣಾ ಹಕ್ಕುಗಳನ್ನ ಗೋಕುಲ್ ಫಿಲ್ಮ್ ಡಿಸ್ಟ್ರಿಬ್ಯೂಷನ್ಸ್ ಗೆ ಚಂದ್ರಶೇಖರ್ ನೀಡಿದ್ದಾರೆ. ಇದರಿಂದ ಕುಪಿತಗೊಂಡಿರುವ ಪ್ರಸನ್ನ ಕುಮಾರ್ ಸಿಟಿ ಸಿವಿಲ್ ಕೋರ್ಟ್ ನಲ್ಲಿ ದಾವೆ ಹೂಡಿದ್ದಾರೆ. [ಸುದೀಪ್ 'ರನ್ನ' ರಿಲೀಸ್ ಗೆ ಕೋರ್ಟ್ ಮಧ್ಯಂತರ ತಡೆ]
ಜೂನ್ 2 ರೊಳಗೆ ಉತ್ತರ ನೀಡುವಂತೆ 'ರನ್ನ' ಚಿತ್ರ ನಿರ್ಮಾಪಕರಿಗೆ ಸಿಟಿ ಸಿವಿಲ್ ಕೋರ್ಟ್ ಸೂಚನೆ ನೀಡಿ ನೋಟಿಸ್ ಜಾರಿ ಮಾಡಿದೆ. ''ಚಿತ್ರ ಬಿಡುಗಡೆಗೆ ಇದರಿಂದ ಯಾವುದೇ ತೊಂದರೆ ಇಲ್ಲ. ಹಳೆ ಅಗ್ರೀಮೆಂಟ್ ಇಟ್ಕೊಂಡು ಈಗ ಕೋರ್ಟ್ ಮೆಟ್ಟಿಲೇರಿದ್ದಾರೆ. ರಿಲೀಸ್ ಸಮಯದಲ್ಲಿ ಈಗ ಇದೆಲ್ಲಾ ಸಾಮಾನ್ಯ. ಎಲ್ಲಾ ಕ್ಲಿಯರ್ ಆಗುತ್ತೆ'' ಅಂತ 'ಫಿಲ್ಮಿಬೀಟ್ ಕನ್ನಡ'ಗೆ ತರುಣ್ ಸುಧೀರ್ ತಿಳಿಸಿದರು. [ರನ್ನ ಚಿತ್ರಕ್ಕೆ ಅಡ್ಡಿ ಮಾಡುತ್ತಿರುವ ವಿಘ್ನ ಸಂತೋಷಿಗಳಾರು?]
ಒಟ್ನಲ್ಲಿ ಸೆಟ್ಟೇರಿದಾಗಿನಿಂದಲೂ ಒಂದಲ್ಲಾ ಒಂದು ವಿವಾದಗಳಿಂದ 'ರನ್ನ' ಚಿತ್ರ ಸುದ್ದಿಯಾಗುತ್ತಲೇ ಇದೆ. ಯಾವುದೇ ಅಡ್ಡಿಯಿಲ್ಲದೆ ಸಿನಿಮಾ ರಿಲೀಸ್ ಆದ್ರೆ ಸಾಕು ಅಂತಿದ್ದಾರೆ ನಿರ್ಮಾಪಕರು.