Don't Miss!
- News ಬೆಂಗಳೂರಿನಲ್ಲಿ ಮೋದಿ ಮತಬೇಟೆ; ರಾಜ್ಯಕ್ಕೆ ಪ್ರಧಾನಿ ಮೋದಿಯ ಕೊಡುಗೆ ಏನಿದೆ?: ಡಾ.ಜಿ ಪರಮೇಶ್ವರ್
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Technology ನಿಮ್ಮ ಬಳಿ ರೆಡ್ಮಿಯ ಈ ಫೋನ್ ಇದ್ರೆ, ಇಲ್ಲಿದೆ ನಿಮಗೆ ಗುಡ್ನ್ಯೂಸ್!
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುದೀಪ್ ಹೊಸ ಸಿನಿಮಾ ಬಗ್ಗೆ ಗಾಂಧಿನಗರದಿಂದ ಬಂದ ಬ್ರೇಕಿಂಗ್ ನ್ಯೂಸ್
ಕಿಚ್ಚ ಸುದೀಪ್ ರವರ ಹೊಸ ಸಿನಿಮಾದ ಬಗ್ಗೆ ಗಾಂಧಿನಗರದಿಂದ ಒಂದು ಬ್ರೇಕಿಂಗ್ ನ್ಯೂಸ್ ಬಂದಿದೆ.
ಸ್ಯಾಂಡಲ್ ವುಡ್ ನಲ್ಲಿ ಸದಭಿರುಚಿಯ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಾ ಬಂದಿರುವ ಪ್ರತಿಷ್ಟಿತ 'ಹೊಂಬಾಳೆ ಫಿಲ್ಮ್ಸ್' ಬ್ಯಾನರ್ ನಲ್ಲಿ ತಯಾರಾಗುವ ಹೊಸ ಚಿತ್ರದಲ್ಲಿ ನಟಿಸಲು 'ಅಭಿನಯ ಚಕ್ರವರ್ತಿ' ಸುದೀಪ್ ಗ್ರೀನ್ ಸಿಗ್ನಲ್ ನೀಡಿದ್ದಾರಂತೆ.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ 'ನಿನ್ನಿಂದಲೇ' ಹಾಗೂ 'ರಾಜಕುಮಾರ' ಮತ್ತು ರಾಕಿಂಗ್ ಸ್ಟಾರ್ ಯಶ್ ರವರ 'ಮಾಸ್ಟರ್ ಪೀಸ್' ಹಾಗೂ 'ಕೆ.ಜಿ.ಎಫ್' ಚಿತ್ರಗಳನ್ನು 'ಹೊಂಬಾಳೆ ಫಿಲ್ಮ್ಸ್' ಬ್ಯಾನರ್ ಅಡಿ ನಿರ್ಮಾಣ ಮಾಡಿರುವ ವಿಜಯ್ ಕಿರಗಂದೂರು ಬಂಡವಾಳ ಹಾಕುವ ನೂತನ ಚಿತ್ರದಲ್ಲಿ ಸುದೀಪ್ ನಟಿಸಲು ಒಪ್ಪಿಕೊಂಡಿದ್ದಾರೆ.
ಸದ್ಯ 'ದಿ ವಿಲನ್' ಚಿತ್ರದ ಚಿತ್ರೀಕರಣದಲ್ಲಿ ಸುದೀಪ್ ಬಿಜಿಯಾಗಿದ್ದಾರೆ. 'ದಿ ವಿಲನ್' ಶೂಟಿಂಗ್ ಮುಗಿದ ಬಳಿಕ ಕೃಷ್ಣ ಆಕ್ಷನ್ ಕಟ್ ಹೇಳುವ ಚಿತ್ರಕ್ಕೆ ಸುದೀಪ್ ಚಾಲನೆ ನೀಡಿದ್ದಾರೆ. ಅದು ಮುಗಿದ ನಂತರ ವಿಜಯ್ ಕಿರಗಂದೂರು ನಿರ್ಮಾಣದ ಚಿತ್ರ ಸೆಟ್ಟೇರಲಿದೆ.
ಅಂದ್ಹಾಗೆ, ವಿಜಯ್ ಕಿರಗಂದೂರು ಹಾಗೂ ಸುದೀಪ್ ಕಾಂಬಿನೇಷನ್ ನ ಚಿತ್ರಕ್ಕೆ ಆಕ್ಷನ್ ಕಟ್ ಹೇಳುವ ಪ್ರತಿಭಾವಂತ ನಿರ್ದೇಶಕ ಯಾರು ಅನ್ನೋದು ಇನ್ನೂ ಗುಟ್ಟಾಗಿ ಉಳಿದಿದೆ.