Don't Miss!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- News ಲೋಕಸಭಾ ಚುನಾವಣೆ 2024: ಮತದಾನಕ್ಕೆ ಸಕಲ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಆಕ್ಟ್ 1978' ಸಿನಿಮಾ ನೋಡಿದ ಕಿಚ್ಚ ಸುದೀಪ್ ಏನಂದ್ರು?
ರಾಷ್ಟ್ರ ಪ್ರಶಸ್ತಿ ವಿಜೇತ ಮಂಸೋರೆ ನಿರ್ದೇಶನದ ಆಕ್ಟ್ 1978 ಸಿನಿಮಾ ಈ ವಾರ ಚಿತ್ರಮಂದಿರಕ್ಕೆ ಬರ್ತಿದೆ. ಲಾಕ್ಡೌನ್ ನಂತರ ಥಿಯೇಟರ್ನಲ್ಲಿ ಬಿಡುಗಡೆಯಾಗುತ್ತಿರುವ ಮೊಟ್ಟ ಮೊದಲ ಕನ್ನಡ ಸಿನಿಮಾ ಇದಾಗಿದೆ.
ಮಲ್ಟಿಪ್ಲೆಕ್ಟ್ ಮತ್ತು ಸಿಂಗಲ್ ಸ್ಕ್ರೀನ್ ಸೇರಿ ಸುಮಾರು 100ಕ್ಕೂ ಹೆಚ್ಚು ಚಿತ್ರಮಂದಿರದಲ್ಲಿ 'ಆಕ್ಟ್ 1978' ಸಿನಿಮಾ ನವೆಂಬರ್ 20 ರಿಂದ ಪ್ರದರ್ಶನವಾಗಲಿದೆ. ಏಳೆಂಟು ತಿಂಗಳ ಬಳಿಕ ಚಿತ್ರಮಂದಿರಕ್ಕೆ ಬರ್ತಿರುವ ಚಿತ್ರಕ್ಕೆ ಸ್ಯಾಂಡಲ್ ವುಡ್ ಸ್ಟಾರ್ಸ್ ಬೆಂಬಲವಾಗಿ ನಿಂತಿದ್ದು, ಕಿಚ್ಚ ಸುದೀಪ್ ರಿಲೀಸ್ಗೂ ಮೊದಲೇ ಸಿನಿಮಾ ವೀಕ್ಷಿಸಿದ್ದಾರೆ. ಏನಂದ್ರು? ಮುಂದೆ ಓದಿ....
'ಆಕ್ಟ್ 1978' ಚಿತ್ರಕ್ಕೆ ಮುಂಗಡ ಟಿಕೆಟ್ ಬುಕ್ಕಿಂಗ್ ಆರಂಭ
ಅದ್ಭುತ ಪ್ರಯತ್ನ ಎಂದ ಸುದೀಪ್
ನವೆಂಬರ್ 20 ರಂದು ಅಧಿಕೃತವಾಗಿ ಚಿತ್ರಮಂದಿರದಲ್ಲಿ ಆಕ್ಟ್ 1978 ಸಿನಿಮಾ ತೆರೆಕಾಣುತ್ತಿದೆ. ಇದಕ್ಕೂ ಮುಂಚೆಯೇ ಸುದೀಪ್ ಈ ಸಿನಿಮಾ ನೋಡಿದ್ದು ಮೆಚ್ಚಿಕೊಂಡಿದ್ದಾರೆ. ಈ ಕುರಿತು ಟ್ವಿಟ್ಟರ್ನಲ್ಲಿ ಮೆಚ್ಚುಗೆ ವ್ಯಕ್ತಪಡಿಸಿರುವ ಸುದೀಪ್ ''ಚಿತ್ರವನ್ನು ನೋಡಿದೆ,,, ಅದ್ಭುತ ಪ್ರಯತ್ನ ಮತ್ತು ಎಲ್ಲರದ್ದು ಅದ್ಭುತ ನಟನೆ. ಬಿಡುಗಡೆಗೆ ನನ್ನ ಶುಭಾಶಯಗಳು'' ಎಂದಿದ್ದಾರೆ.
ಮೊದಲ ಚಿತ್ರ ಎನ್ನುವುದೇ ವಿಶೇಷತೆ
ಲಾಕ್ಡೌನ್ ಆದ್ಮೇಲೆ ಚಿತ್ರಮಂದಿರಗಳಿಗೆ ಅವಕಾಶ ಕೊಟ್ಟರೂ ಯಾವ ನಿರ್ಮಾಪಕರು ಸಿನಿಮಾ ರಿಲೀಸ್ ಮಾಡಲು ಮುಂದಾಗಿಲಿಲ್ಲ. ಪ್ರೇಕ್ಷಕರ ಕೊರತೆ ಎದುರಾಗಬಹುದು ಎಂಬ ಆತಂಕದಿಂದ ಸ್ಟಾರ್ ನಟರು ಸಹ ಮುಂದೆ ಬರಲಿಲ್ಲ. ಇದೀಗ, ಆಕ್ಟ್ 1978 ಚಿತ್ರ ಮೊದಲು ರಿಲೀಸ್ ಆಗುತ್ತಿದ್ದು, ಇಡೀ ಸ್ಯಾಂಡಲ್ ವುಡ್ ಬೆಂಬಲವಾಗಿ ನಿಂತಿದೆ.
ಆಕ್ಟ್ 1978: ಕೇವಲ ಮನರಂಜನೆಯಲ್ಲ, ಕಾನೂನಿನ ತಿಳುವಳಿಕೆ
ಅದ್ಧೂರಿಯಾಗಿ ಸ್ವಾಗತಿಸಿ
ನಿರ್ದೇಶಕ ಪವನ್ ಒಡೆಯರ್ ಸಹ ಆಕ್ಟ್ 1978 ಸಿನಿಮಾದ ಕುರಿತು ಟ್ವೀಟ್ ಮಾಡಿದ್ದು, ''ಚಿತ್ರಮಂದಿರದಲ್ಲಿ ಸಿನಿಮಾವನ್ನು ಸಂಭ್ರಮಿಸೋಣ, ಕೊರೊನಾ ಲಾಕ್ಡೌನ್ ನಂತರ ಬರುತ್ತಿರುವ ಮೊದಲ ಚಿತ್ರಕ್ಕೆ ಅದ್ಧೂರಿ ಸ್ವಾಗತ ನೀಡೋಣ'' ಎಂದು ಶುಭಕೋರಿದ್ದಾರೆ.
Recommended Video
ಥ್ರಿಲ್ಲರ್ ಸಿನಿಮಾ
ಹರಿವು, ನಾತಿಚರಾಮಿ ಸಿನಿಮಾಗಳ ಬಳಿಕ ಮಂಸೋರೆ ಮಾಡಿರುವ ಚಿತ್ರ ಇದಾಗಿದ್ದು, ಸಹಜವಾಗಿ ಕುತೂಹಲ ಕೆರಳಿಸಿದೆ. ನಟಿ ಯಜ್ಞಾ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಬಿ. ಸುರೇಶ್, ಪ್ರಮೋದ್ ಶೆಟ್ಟಿ, ಅಚ್ಯುತ್ ಕುಮಾರ್, ಕೃಷ್ಣ ಹೆಬ್ಬಾಳೆ, ಶ್ರುತಿ, ದತ್ತಣ್ಣ, ಸಂಚಾರಿ ವಿಜಯ್, ಶರಣ್ಯಾ, ಶೋಭರಾಜ್, ಅವಿನಾಶ್, ರಾಘು ಶಿವಮೊಗ್ಗ ಮುಂತಾದವರು ತಾರಬಳಗದಲ್ಲಿದ್ದಾರೆ. ದೇವರಾಜ್ ಆರ್ ಈ ಸಿನಿಮಾವನ್ನು ನಿರ್ಮಿಸಿದ್ದಾರೆ.