Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಂಡ್ಯ ಕಬ್ಬಿನ ಗದ್ದೆಯಲ್ಲಿ ಬಾಲಕಿ ಸಾವು: ನ್ಯಾಯಕ್ಕೆ ಒತ್ತಾಯಿಸಿದ ಸುದೀಪ್
ಮಂಡ್ಯದ ಮದ್ದೂರಿನ ತಾಲೂಕಿನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ಈ ಘಟನೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
Recommended Video
ಇದೀಗ, ಕನ್ನಡ ನಟ ಕಿಚ್ಚ ಸುದೀಪ್ ಸಹ ಖಂಡಿಸಿದ್ದು, ಆ ಬಾಲಕಿಯ ಕುಟುಂಬಕ್ಕೆ ನ್ಯಾಯ ಸಿಗಬೇಕಿದೆ ಎಂದು ಆಗ್ರಹಿಸಿದ್ದಾರೆ.
ಈ ಕುರಿತು ಟ್ವಿಟ್ಟರ್ ಮೂಲಕ ಒತ್ತಾಯಿಸಿರುವ ಸುದೀಪ್ ''ಈ ಕೇಸ್ನಲ್ಲಿ ಬಾಲಕಿಗೆ ನ್ಯಾಯ ಸಿಗುತ್ತದೆ ಮತ್ತು ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುತ್ತದೆ ಎಂದು ಭಾವಿಸಿದ್ದೇನೆ. ಈ ಮೂಲಕ ಅತ್ಯಾಚಾರಿಗಳಿಗೆ ಭಯಾನಕ ಸಂದೇಶ ರವಾನೆಯಾಗಲಿದೆ'' ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ.
ಬಾಲಕಿ ಮೇಲೆ ಅತ್ಯಾಚಾರ ಕೊಲೆ ಖಂಡಿಸಿದ ನಟ ಸತೀಶ್ ನೀನಾಸಂ
ಸುದೀಪ್ ಅವರಿಗೂ ಮುಂಚೆ ನಟ ಸತೀಶ್ ನೀನಾಸಂ ಈ ಘಟನೆ ಖಂಡಿಸಿದ್ದು, ''ಮಂಡ್ಯ ಜಿಲ್ಲೆ, ಮದ್ದೂರ್ ತಾಲುಕು, "ಆರತಿ" ಮೇಲೆ ನಡೆದ ಅತ್ಯಾಚಾರದ ಬಗ್ಗೆ ಕೇಳಿ ಅಸಹ್ಯವಾಯಿತು. ಮನುಷ್ಯ ಸಂತತಿ ಬೆಳೆದಂತೆಲ್ಲ, ಅವನ ವಿಕೃತಿಗಳು ಹೆಚ್ಚುತ್ತಿವೆ. ಎಷ್ಟೇ ವಿದ್ಯಾವಂತರಾದರು ಹೆಣ್ಣಿಗೆ ರಕ್ಷಣೆ ಸಿಗುವಲ್ಲಿ ಸಮಾಜ ವಿಫಲವಾಗುತ್ತಿರುವುದು, ಈ ಭೂಮಿಯ ದುರಂತ'' ಎಂದು ಟ್ವಿಟ್ಟರ್ನಲ್ಲಿ ಆಕ್ರೋಶ ಹೊರಹಾಕಿದ್ದಾರೆ.
ಘಟನೆಯ
ವಿವರ
ಮದ್ದೂರಿನ
ಹುರುಗಲ
ವಾಡಿ
ಗ್ರಾಮದ
ರೈತ
ಚೆಲುವರಾಜ್
ಅವರ
ಕಬ್ಬಿನ
ಗದ್ದೆಯಲ್ಲಿ
ಈ
ಘಟನೆ
ನಡೆದಿದೆ.
ಬಳ್ಳಾರಿ
ಜಿಲ್ಲೆ
ಹಗರಿಬೊಮ್ಮನಹಳ್ಳಿ
ತಾಲೂಕು
ಮೂಲದ
ಬಾಲಕಿ
ಗದ್ದೆಯಲ್ಲಿ
ಕಬ್ಬು
ಕಟಾವು
ಮಾಡಲು
ಬಂದಿದ್ದಳು.
ಈ
ವೇಳೆ
ಆಕೆಯನ್ನು
ಹೊತ್ತೊಯ್ದು
ಅತ್ಯಾಚಾರಕ್ಕೆ
ಯತ್ನಿಸಿ
ಕತ್ತು
ಕೊಯ್ದು
ಕೊಲೆ
ಮಾಡಲಾಗಿದೆ
ಎಂದು
ಶಂಕಿಸಲಾಗಿದೆ.
ಮೃತ ಬಾಲಕಿಯ ದೇಹವನ್ನು ಅಂತ್ಯ ಸಂಸ್ಕಾರಕ್ಕೆಂದು ಇಂದು ಹೊಸಪೇಟೆಯ ಮೂಲ ಊರಿಗೆ ತೆಗೆದುಕೊಂಡು ಬರಲಾಗಿದೆ. ಈ ವೇಳೆ ಊರಿನ ಗ್ರಾಮಸ್ಥರು ಬಾಲಕಿ ಶವವನ್ನು ಮುಂದಿಟ್ಟು ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದರು. ನಂತರ ಸ್ಥಳಕ್ಕೆ ಡಿಸಿ ನಕುಲ್ ಭೇಟಿ ನೀಡಿ ಗ್ರಾಮಸ್ಥರ ಮನವೊಲಿಕೆಗೆ ಪ್ರಯತ್ನಿಸಿದರು.