Don't Miss!
- News ಮಠಗಳಿಗೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದ ಡಾ. ಕೆ. ಸುಧಾಕರ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರೈಲ್ವೇ ಸ್ಟೇಷನಲ್ಲಿ ಅತ್ತೆ ಮುಂದೆ ಕಣ್ಣೀರಿಟ್ಟ ಸುದೀಪ್!
ಅಭಿನಯ ಚಕ್ರವರ್ತಿ ಸುದೀಪ್ ಅವರು ಇದೀಗ ಮತ್ತೊಂದು ರೀಮೇಕ್ ಚಿತ್ರದಲ್ಲಿ ಜಿಜಿಯಾಗಿದ್ದಾರೆ. ತೆಲುಗಿನ ಸೂಪರ್ ಡೂಪರ್ ಹಿಟ್ ಚಿತ್ರ 'ಅತ್ತಾರಿಂಟಿಕಿ ದಾರೇದಿ' ಕನ್ನಡ ರೀಮೇಕ್ 'ರನ್ನ' ಶೂಟಿಂಗ್ ಭರದಿಂದ ಸಾಗುತ್ತಿದೆ.
ಈ ಚಿತ್ರಕ್ಕೆ ಸಂಬಂಧಿಸಿದ ಕ್ಲೈಮ್ಯಾಕ್ಸ್ ಸನ್ನಿವೇಶವನ್ನು ಇತ್ತೀಚೆಗೆ ಚಿತ್ರೀಕರಿಸಿಕೊಳ್ಳಲಾಗಿದೆ. ರೈಲ್ವೇ ನಿಲ್ದಾಣದಲ್ಲಿ ಅತ್ತೆಯೊಂದಿಗೆ ನಡೆಯುವ ಸನ್ನಿವೇಶವದು. ಚಿತ್ರದ ನಿರ್ಣಾಯಕ ಘಟ್ಟದಲ್ಲಿ ಬರುವ ಸನ್ನಿವೇಶ. ಸೋದರತ್ತೆ ಪಾತ್ರದಲ್ಲಿ ಅಭಿನಯಿಸುತ್ತಿರುವ ಮಧುಬಾಲಾ ಅವರ ತೊಡೆಯ ಮೇಲೆ ತಲೆಯಿಟ್ಟು ಕಣ್ಣೀರುಡುವ ದೃಶ್ಯವನ್ನು ಸೆರೆಹಿಡಿಯಲಾಯಿತು. [ಕಿಚ್ಚ ಸುದೀಪ್ 'ರನ್ನ' ಶೀರ್ಷಿಕೆ ಅಂತರಾರ್ಥ ಏನು?]
ರನ್ನ ಚಿತ್ರಕ್ಕೆ ನಂದಕಿಶೋರ್ ಆಕ್ಷನ್ ಕಟ್ ಹೇಳುತ್ತಿದ್ದು ಹರಿಪ್ರಿಯಾ ಹಾಗೂ ರಚಿತಾ ರಾಮ್ ಇಬ್ಬರು ನಾಯಕಿಯರು. ಈಗಾಗಲೆ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದ್ದು ಸುದೀಪ್ ಅಭಿಮಾನಿಗಳ ಕಣ್ಣಿಗೆ ಹಬ್ಬ ನೀಡಿದೆ.
"ನಾನೊಂಥರಾ ತ್ರಿಡಿ ಪಿಕ್ಚರ್ ಇದ್ದಾಗೆ. ಹತ್ತಿರದಿಂದ ನೋಡಿದರೂ ದೂರದಿಂದ ನೋಡಿದರೂ ಮಂಜು ಮಂಜಾಗೇ ಕಾಣಿಸ್ತೀನಿ. ತಾಳ್ಮೆ ಎಂಬ ಕನ್ನಡಕ ಹಾಕಿಕೊಂಡು ಕರೆಕ್ಟಗಾಗಿ ನೋಡಿದರೆ ಮಾತ್ರ ಈ ಆರಡಿ ಕಟೌಟ್ ಗೆ ಒಂದು ಕ್ಲಾರಿಟಿ ಸಿಗೋದು" ಎಂಬ ಡೈಲಾಗ್ ಮೋಷನ್ ಪೋಸ್ಟರ್ ನ ಪ್ರಮುಖ ಆಕರ್ಷಣೆಯಾಗಿತ್ತು.