ಅಭಿನಯ ಚಕ್ರವರ್ತಿ ಸುದೀಪ್ ಅವರು ಇದೀಗ ಮತ್ತೊಂದು ರೀಮೇಕ್ ಚಿತ್ರದಲ್ಲಿ ಜಿಜಿಯಾಗಿದ್ದಾರೆ. ತೆಲುಗಿನ ಸೂಪರ್ ಡೂಪರ್ ಹಿಟ್ ಚಿತ್ರ 'ಅತ್ತಾರಿಂಟಿಕಿ ದಾರೇದಿ' ಕನ್ನಡ ರೀಮೇಕ್ 'ರನ್ನ' ಶೂಟಿಂಗ್ ಭರದಿಂದ ಸಾಗುತ್ತಿದೆ.
ಈ ಚಿತ್ರಕ್ಕೆ ಸಂಬಂಧಿಸಿದ ಕ್ಲೈಮ್ಯಾಕ್ಸ್ ಸನ್ನಿವೇಶವನ್ನು ಇತ್ತೀಚೆಗೆ ಚಿತ್ರೀಕರಿಸಿಕೊಳ್ಳಲಾಗಿದೆ. ರೈಲ್ವೇ ನಿಲ್ದಾಣದಲ್ಲಿ ಅತ್ತೆಯೊಂದಿಗೆ ನಡೆಯುವ ಸನ್ನಿವೇಶವದು. ಚಿತ್ರದ ನಿರ್ಣಾಯಕ ಘಟ್ಟದಲ್ಲಿ ಬರುವ ಸನ್ನಿವೇಶ. ಸೋದರತ್ತೆ ಪಾತ್ರದಲ್ಲಿ ಅಭಿನಯಿಸುತ್ತಿರುವ ಮಧುಬಾಲಾ ಅವರ ತೊಡೆಯ ಮೇಲೆ ತಲೆಯಿಟ್ಟು ಕಣ್ಣೀರುಡುವ ದೃಶ್ಯವನ್ನು ಸೆರೆಹಿಡಿಯಲಾಯಿತು. [ಕಿಚ್ಚ ಸುದೀಪ್ 'ರನ್ನ' ಶೀರ್ಷಿಕೆ ಅಂತರಾರ್ಥ ಏನು?]
ತೆಲುಗಿನಲ್ಲಿ ಪವನ್ ಕಲ್ಯಾಣ್ ಗೆ ದಕ್ಷಿಣದ ಖ್ಯಾತ ತಾರೆ ನಾದಿಯಾ ಅತ್ತೆಯಾಗಿ ಅಭಿನಯಿಸಿದ್ದರು. ಇದೀಗ ಅದೇ ರೀತಿಯ ಸನ್ನಿವೇಶವನ್ನು ಸುದೀಪ್ ಹಾಗೂ ಮಧುಬಾಲಾ ಅಭಿನಯಿಸಿದರು. ಶ್ರೀ ನಿಮಿಷಾಂಬ ಪ್ರೊಡಕ್ಷನ್ ಲಾಂಛನದಲ್ಲಿ ಎಂ.ಚಂದ್ರಶೇಖರ್ ನಿರ್ಮಿಸುತ್ತಿರುವ ಚಿತ್ರ ಇದಾಗಿದೆ.
ರನ್ನ ಚಿತ್ರಕ್ಕೆ ನಂದಕಿಶೋರ್ ಆಕ್ಷನ್ ಕಟ್ ಹೇಳುತ್ತಿದ್ದು ಹರಿಪ್ರಿಯಾ ಹಾಗೂ ರಚಿತಾ ರಾಮ್ ಇಬ್ಬರು ನಾಯಕಿಯರು. ಈಗಾಗಲೆ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದ್ದು ಸುದೀಪ್ ಅಭಿಮಾನಿಗಳ ಕಣ್ಣಿಗೆ ಹಬ್ಬ ನೀಡಿದೆ.
"ನಾನೊಂಥರಾ ತ್ರಿಡಿ ಪಿಕ್ಚರ್ ಇದ್ದಾಗೆ. ಹತ್ತಿರದಿಂದ ನೋಡಿದರೂ ದೂರದಿಂದ ನೋಡಿದರೂ ಮಂಜು ಮಂಜಾಗೇ ಕಾಣಿಸ್ತೀನಿ. ತಾಳ್ಮೆ ಎಂಬ ಕನ್ನಡಕ ಹಾಕಿಕೊಂಡು ಕರೆಕ್ಟಗಾಗಿ ನೋಡಿದರೆ ಮಾತ್ರ ಈ ಆರಡಿ ಕಟೌಟ್ ಗೆ ಒಂದು ಕ್ಲಾರಿಟಿ ಸಿಗೋದು" ಎಂಬ ಡೈಲಾಗ್ ಮೋಷನ್ ಪೋಸ್ಟರ್ ನ ಪ್ರಮುಖ ಆಕರ್ಷಣೆಯಾಗಿತ್ತು.
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ | Subscribe to Kannada Filmibeat.