Don't Miss!
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- News Government Employees; ಸರ್ಕಾರಿ ನೌಕರರ ಜೀವ ವಿಮೆ ಪಾಲಿಸಿ ಅವಧಿ ಏರಿಕೆ
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Automobiles Kia: ಬ್ರೇಕ್ ಇಲ್ಲದ ಟ್ರಕ್ನಂತೆ ಮುನ್ನುಗ್ಗುತ್ತಿದೆ ಕಿಯಾ: ಈಗ ಸಣ್ಣ ಪಟ್ಟಣಗಳಲ್ಲೂ ಸಿಗಲಿದೆ!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡದ ಸ್ಟಾರ್ ನಟನ ಸ್ಫೂರ್ತಿ: ಅಮೆರಿಕದಲ್ಲಿ ಕಾರ್ ನಂಬರ್ ಪ್ಲೇಟ್ ಮೇಲೆ ಕನ್ನಡ
ವಿದೇಶದಲ್ಲಿ ನೆಲೆಸಿದ್ದರೂ ಸಹ ಅನೇಕರು ನಾಡು, ನುಡಿಯನ್ನು ಯಾವತ್ತು ಮರೆಯಲ್ಲ. ದೂರದ ಊರಿನಲ್ಲಿದ್ದರೂ ನಾಡಿನ ಬಗ್ಗೆ ಅಪಾರ ಪ್ರೀತಿ ಹೊಂದಿರುತ್ತಾರೆ. ಇದಕ್ಕೆ ಸಾಕಷ್ಟು ಉದಾಹರಣೆಗಳು ಇವೆ.
ಇದೀಗ ಅಮೆರಿಕದಲ್ಲಿರುವ ಕನ್ನಡಿಗರೊಬ್ಬರು ಕನ್ನಡ ಭಾಷಾಭಿಮಾನ ಮೆರೆದಿದ್ದಾರೆ. ತಮ್ಮ ಕಾರ್ ನಂಬರ್ ಪ್ಲೇಟ್ ಅನ್ನು ಕನ್ನಡ ಅಂತ ಹಾಕಿಸಿದ್ದಾರೆ. ವಿಶೇಷ ಎಂದರೆ ಇದಕ್ಕೆ ಸ್ಫೂರ್ತಿ ಆಗಿದ್ದು, ಕನ್ನಡದ ಸ್ಟಾರ್ ನಟ ಸುದೀಪ್ ಎಂದು ಹೇಳಿಕೊಂಡಿದ್ದಾರೆ.
ಸುದೀಪ್ ಇತ್ತೀಚಿಗಷ್ಟೆ ವಿಕ್ರಾಂತ್ ರೋಣ ಸಿನಿಮಾದ ಟೀಸರ್ ಅನ್ನು ದುಬೈನ ಬುರ್ಜ್ ಖಲೀಫಾ ಮೇಲೆ ಪ್ರದರ್ಶನ ಮಾಡಿದ್ದರು. ಟೀಸರ್ ಪ್ರದರ್ಶನಕ್ಕೂ ಮೊದಲು ಬುರ್ಜ್ ಖಲೀಫಾ ಮೇಲೆ ಕನ್ನಡದ ಬಾವುಟ ರಾರಾಜಿಸಿತ್ತು. ಇದನ್ನು ನೋಡಿ ಸ್ಫೂರ್ತಿಯಾದ ನ್ಯೂಯಾರ್ಕ್ ನಲ್ಲಿ ನೆಲೆಸಿರುವ ಕನ್ನಡಿಗ ಕಾರಿನ ಮೇಲೆ ಕನ್ನಡ ಎಂದು ನಾಮ ಫಲಕ ಹಾಕಿಸಿದ್ದಾರೆ.
'ಹುಚ್ಚ ವೆಂಕಟ್ ಗೆಲ್ಲುವ ಸಾಧ್ಯತೆ ಇತ್ತು': ಸುದೀಪ್ ಹೀಗೆ ಹೇಳಿದ್ಯಾಕೆ?
ಅಂದಹಾಗೆ ಕೆಲವು ದೇಶಗಳಲ್ಲಿ ಕಾರಿನ ಮೇಲೆ ನಂಬರ್ ಬದಲು ಇಷ್ಟದ ಹೆಸರಗಳನ್ನು ಇಟ್ಟುಕೊಳ್ಳಬಹುದು. ಅದರಂತೆ ಕನ್ನಡಿಗರೊಬ್ಬರು ಕನ್ನಡ ಎಂದು ನಂಬರ್ ಪ್ಲೇಟ್ ಮೇಲೆ ಹಾಕಿಸಿಕೊಂಡು ಭಾಷಾಭಿಮಾನ ಮೆರೆದಿದ್ದಾರೆ.
ಶಂಕರ್ ಎನ್ನುವವರು ಕಾರಿನ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿ ಕಿಚ್ಚ ಸುದೀಪ್ ಗೆ ಟ್ಯಾಗ್ ಮಾಡಿದ್ದಾರೆ. ಜೊತೆಗೆ ಬುರ್ಜ್ ಖಲೀಫಾ ಮೇಲೆ ಕನ್ನಡ ಬಾವುಟ ನೋಡಿ ಕಿಚ್ಚ ಸುದೀಪ್ ಅವರಿಂದ ಸ್ಫೂರ್ತಿ ಪಡೆದು ಕಾರಿಗೆ ಕನ್ನಡ ಎಂದು ಪ್ಲೇಟ್ ಹಾಕಿರುವುದಾಗಿ ಬರೆದುಕೊಂಡಿದ್ದಾರೆ.
ಕಾರಿನ ಫೋಟೋವನ್ನು ನೋಡಿ ಇಷ್ಟಪಟ್ಟ ಕಿಚ್ಚ ನಮಸ್ಕಾರದ ಇಮೋಜಿ ಹಾಕಿದ್ದಾರೆ. ಅಮೆರಿಕದಲ್ಲಿ ನೆಲೆಸಿರುವ ಕನ್ನಡಿಗನ ಭಾಷಾಭಿಮಾನಕ್ಕೆ ಕನ್ನಡಿಗರು ಮನಸೋತಿದ್ದಾರೆ.
Recommended Video
ಕಿಚ್ಚ ಸುದೀಪ್ ಸದ್ಯ ಬಿಗ್ ಬಾಸ್ ಸೀಸನ್ 8ರಲ್ಲಿ ಬ್ಯುಸಿಯಾಗಿದ್ದಾರೆ. ವಿಕ್ರಾಂತ್ ರೋಣ ಚಿತ್ರೀಕರಣ ಮುಗಿಸಿರುವ ಕಿಚ್ಚ ಹಾಡಿನ ಚಿತ್ರೀಕರಣಕ್ಕಾಗಿ ಎದುರು ನೋಡುತ್ತಿದ್ದಾರೆ. ವಿಕ್ರಾಂತ್ ರೋಣ ಬಳಿಕ ಸುದೀಪ್ ಯಾವ ಸಿನಿಮಾವನ್ನು ಒಪ್ಪಿಕೊಂಡಿಲ್ಲ. ಕಿಚ್ಚನ ಮುಂದಿನ ಸಿನಿಮಾ ಯಾವುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿದೆ.