twitter
    For Quick Alerts
    ALLOW NOTIFICATIONS  
    For Daily Alerts

    ಸುದೀಪ್ ಬೇಗ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ ಅಭಿಮಾನಿಗಳು

    |

    ಕಿಚ್ಚ ಸುದೀಪ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಸುದೀಪ್ ಅವರಲ್ಲಿ ಜ್ವರ ಕಾಣಿಸಿಕೊಂಡಿದ್ದು, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ತಮ್ಮ ಆರೋಗ್ಯದ ಬಗ್ಗೆ ಟ್ವೀಟ್ ಮಾಡಿ ಸುದೀಪ್ ಮಾಹಿತಿ ನೀಡಿದ್ದರು.

    Recommended Video

    ಕಿಚ್ಚನಿಗಾಗಿ ದೇವರಲ್ಲಿ ಬೇಡಿಕೊಂಡ ವಿಶೇಷಚೇತನ ಅಭಿಮಾನಿ | Filmibeat Kannada

    ಸುದೀಪ್ ಅವರು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸಿದ್ದಾರೆ. ಅಭಿನಯ ಚಕ್ರವರ್ತಿ ಶೀಘ್ರವಾಗಿ ಚೇತರಿಸಿಕೊಂಡು ಮತ್ತೆ ಕೆಲಸದಲ್ಲಿ ತೊಡಗಿಕೊಳ್ಳಲಿ ಎಂದು ಕಿಚ್ಚನ ಅಭಿಮಾನಿಗಳು ದೇವರಲ್ಲಿ ಮನವಿ ಮಾಡಿದ್ದಾರೆ.

    ಈ ವಿಡಿಯೋಗಳು ಮತ್ತು ಫೋಟೋಗಳನ್ನು ಸುದೀಪ್ ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡು ಹೃದಯಪೂರ್ವಕ ಧನ್ಯವಾದ ತಿಳಿಸಿದ್ದಾರೆ.

    Kichcha Sudeep Shares Video of His Handicapped Fan Praying for His Health

    ಚೆನ್ನಗಿರಿಯ (ತಾ) ಅಖಿಲ ಕರ್ನಾಟಕ ವಾಲ್ಮೀಕಿ ರತ್ನ ಬಾದ್ ‍ಷಾ ಕಿಚ್ಚ ಸುದೀಪ್ ಸೇನೆ ಸದಸ್ಯರು ಆಂಜನೇಯ ದೇವಸ್ಥಾನದಲ್ಲಿ ಸುದೀಪ್ ಅವರು ಚೇತರಿಸಿಕೊಳ್ಳಲಿ ಎಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ವಿಕಲಚೇತನ ಅಭಿಮಾನಿಯೊಬ್ಬ ಸುದೀಪ್ ಅವರ ಆರೋಗ್ಯ ಬೇಗ ಸುಧಾರಿಸಲಿ ಎಂದು ದೇವರ ಸನ್ನಧಿಯಲ್ಲಿ ಬೇಡಿಕೊಳ್ಳುತ್ತಿರುವ ವಿಡಿಯೋವನ್ನು ಸಹ ಸುದೀಪ್ ಟ್ವಿಟ್ಟರ್‌ನಲ್ಲಿ ಶೇರ್ ಮಾಡಿದ್ದಾರೆ.

    ಸುದೀಪ್ ಆರೋಗ್ಯ ಸರಿ ಇಲ್ಲದ ಕಾರಣ ವಾರಾಂತ್ಯದಲ್ಲಿ ನಡೆಸಿಕೊಡಬೇಕಾಗಿದ್ದ ರಿಯಾಲಿಟಿ ಶೋನಲ್ಲಿ ಭಾಗಿಯಾಗಿಲ್ಲ. ಈ ವಾರ ಸುದೀಪ್ ಇಲ್ಲದೇ ಶೋ ಪ್ರಸಾರವಾಗಿದೆ. ಇನ್ನು ಸುದೀಪ್ ನಟಿಸಿರುವ ಕೋಟಿಗೊಬ್ಬ 3 ಹಾಗೂ ಫ್ಯಾಂಟಮ್ ಚಿತ್ರಗಳು ಶೂಟಿಂಗ್ ಮುಗಿಸಿ ಬಿಡುಗಡೆಗೆ ಸಜ್ಜಾಗಿದೆ.

    English summary
    Kichcha Sudeep Shares Video of His Handicapped Fan Praying for His Health.
    Tuesday, April 20, 2021, 18:11
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X