Don't Miss!
- Lifestyle ಪುರುಷರಲ್ಲಿ ಹೆಚ್ಚಾಗುತ್ತಿದೆ ಬಂಜೆತನ: ಪುರುಷರು ಈ ಆಹಾರ ಸೇವಿಸಿದರೆ ಸಂತಾನೋತ್ಪತ್ತಿ ಸಾಮರ್ಥ್ಯ ಹೆಚ್ಚುವುದು
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- News Narendra Modi: ಕರ್ನಾಟಕಕ್ಕೆ ಏಪ್ರಿಲ್ 28, 29ಕ್ಕೆ ಪ್ರಧಾನಿ ಮೋದಿ ಆಗಮನ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜು ಕನ್ನಡ ಮೀಡಿಯಂ ಚಿತ್ರ ವಿಮರ್ಶೆ ಮಾಡಿದ ಕಿಚ್ಚ ಸುದೀಪ್
ನಟ ಗುರುನಂದನ್ ಅಭಿನಯದ ಸಿನಿಮಾ ರಾಜು ಕನ್ನಡ ಮೀಡಿಯಂ. ಮೂರು ವಾರಗಳ ಹಿಂದೆ ರಾಜ್ಯಾದಂತ್ಯ ಬಿಡುಗಡೆ ಆಗಿರುವ ರಾಜು ಕನ್ನಡ ಮೀಡಿಯಂ ಸಿನಿಮಾಗೆ ಎಲ್ಲೆಡೆ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ.
ಸಿನಿಮಾದಲ್ಲಿ ಕಿಚ್ಚ ಸುದೀಪ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದು ಅಭಿಮಾನಿಗಳು ಕಿಚ್ಚನ ಪಾತ್ರವನ್ನ ತುಂಬಾ ಎಂಜಾಯ್ ಮಾಡಿದ್ದರು. ಅದಷ್ಟೇ ಅಲ್ಲದೆ ಸಿನಿಮಾ ಬಿಡುಗಡೆ ನಂತರವೂ ಸಿನಿಮಾತಂಡದ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದರು ಕಿಚ್ಚ ಸುದೀಪ್.
82 ವರ್ಷದ ಅಜ್ಜಿಯ ಪ್ರೀತಿ ಕಂಡ ಮೂಕವಿಸ್ಮಿತರಾದ ಸುದೀಪ್
ಉತ್ತಮ ವಿಮರ್ಶೆ, ಪ್ರೇಕ್ಷಕರಿಗೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡ ರಾಜು ಕನ್ನಡ ಮೀಡಿಯಂ ಸಿನಿಮಾವನ್ನ ಅಭಿನಯ ಚಕ್ರವರ್ತಿ ವಿಮರ್ಶೆ ಮಾಡಿದ್ದಾರೆ. ಹಾಗಾದ್ರೆ ಕಿಚ್ಚನ ಸಿನಿಮಾ ವಿಮರ್ಶೆ ಹೇಗಿದೆ? ಚಿತ್ರದ ಯಾವ ಯಾವ ಅಂಶದ ಬಗ್ಗೆ ಸುದೀಪ್ ಮಾತನಾಡಿದ್ದಾರೆ? ಸಂಪೂರ್ಣ ಮಾಹಿತಿ ಇಲ್ಲಿದೆ.
ಕಿಚ್ಚ ಸುದೀಪ್ ಮಾಡಿದರು ಸಿನಿಮಾ ರಿವ್ಯೂ
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ವಿಶೇಷ ಪಾತ್ರದಲ್ಲಿ ಅಭಿನಯಿಸಿರುವ ರಾಜು ಕನ್ನಡ ಮಿಡಿಯಂ ಸಿನಿಮಾದ ಬಗ್ಗೆ ಸುದೀಪ್ ಅಭಿಪ್ರಾಯವನ್ನ ಹಂಚಿಕೊಂಡಿದ್ದಾರೆ. ಚಿತ್ರಕಥೆಯ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದಾರೆ.
ಹಂತ ಹಂತಕ್ಕೂ ಬದಲಾಗುವ ಆಯ್ಕೆ
ರಾಜು ಕನ್ನಡ ಮೀಡಿಯಂ ಸಿನಿಮಾದಲ್ಲಿ ಜೀವನದಲ್ಲಿ ಯಾವುದಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಬೇಕು. ಜೀವನ ಅಂದರೆ ಏನು ಎನ್ನುವುದನ್ನ ಬಿಡಿಸಿ ಹೇಳಲಾಗಿದೆ. ಈ ಅಂಶ ಕಿಚ್ಚನನ್ನ ಹೆಚ್ಚು ಆಕರ್ಷಣೆ ಮಾಡಿದೆ.
ಜೀವನ ಯಾವಾಗಲೂ ಕಷ್ಟ
ಜೀವನದ ಪ್ರಾಮುಖ್ಯತೆ ಬಗ್ಗೆ ಮಾತ್ರವಲ್ಲದೆ ಜೀವನ ಅಂದುಕೊಂಡಷ್ಟು ಸುಲಭವಲ್ಲ ಎನ್ನುವುದನ್ನ ತುಂಬಾ ಚೆನ್ನಾಗಿ ವಿವರಿಸಿದ್ದಾರೆ ನಿರ್ದೇಶಕರು. ಈ ವಿಚಾರ ಪ್ರೇಕ್ಷಕರಿಗೆ ತುಂಬಾ ಇಷ್ಟವಾಗಿದೆ.
ಖುಷಿಯನ್ನ ಹಂಚಿಕೊಂಡ ಕಿಚ್ಚ ಸುದೀಪ್
ರಾಜು ಕನ್ನಡ ಮೀಡಿಯಂ ಸಿನಿಮಾದ ಕಥೆ ಸುದೀಪ್ ಅವರಿಗೆ ತುಂಬಾ ಇಷ್ಟವಾಗಿದೆ. ನಿರ್ದೇಶನ ಮತ್ತು ಚಿತ್ರಕಥೆ ಬಗ್ಗೆ ಮೆಚ್ಚುಗೆಯ ಮಾತುಗಳನ್ನ ತಮ್ಮ ಟ್ವಿಟ್ಟರ್ ನಲ್ಲಿ ಚಿತ್ರದ ಬಗ್ಗೆ ಬರೆಯುವ ಬಗ್ಗೆ ವ್ಯಕ್ತ ಪಡಿಸಿದ್ದಾರೆ.
ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ
ರಾಜು ಕನ್ನಡ ಮೀಡಿಯಂ ಸಿನಿಮಾ ಇಂದಿಗೂ ಎಲ್ಲೆಡೆ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ನರೇಶ್ ಹಾಗೂ ಗುರುನಂದನ್ ಅವರ ಕಾಂಬಿನೇಶನ್ ಜನರಿಗೆ ಇಷ್ಟವಾಗಿದೆ. ಚಿತ್ರವನ್ನ ಸುರೇಶ್ ನಿರ್ಮಾಣ ಮಾಡಿದ್ದು ಅವಂತಿಕಾ ಶೆಟ್ಟಿ ಮತ್ತು ಆಶಿಕಾ ರಂಗನಾಥ್ ನಾಯಕಿಯಾಗಿ ಅಭಿನಯಿಸಿದ್ದಾರೆ.