Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಕ್ರಾಂತ್ ರೋಣ ಫೆಬ್ರವರಿ 24ಕ್ಕೆ ರಿಲೀಸ್ ಪಕ್ಕಾ!
ಕನ್ನಡದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಕಿಚ್ಚ ಸುದೀಪ್ ಅಭಿನಯದ 'ವಿಕ್ರಾಂತ್ ರೋಣ' ಚಿತ್ರವು ಒಂದು. ಕೊರೊನಾ ಹೆಚ್ಚಾಗಿ ಲಾಕ್ಡೌನ್ ಆದ ಕಾರಣ ಸಿನಿಮಾ ಯಾವಾಗ ರಿಲೀಸ್ ಎನ್ನುವ ಗೊಂದಲಗಳು ಉಂಟಾಗಿದ್ದವು. ಈಗ ಎಲ್ಲಾ ಗೊಂದಲಗಳಿಗೆ ತೆರೆ ಬಿದ್ದಿದೆ. ಮೊದಲಿನ ಯೋಜನೆ ಪ್ರಕಾರ ಸಿನಿಮಾ ಫೆಬ್ರವರಿ 24ಕ್ಕೆ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ.
Recommended Video
ಈ ಸಿನಿಮಾವನ್ನು ಪ್ಯಾನ್ ಇಂಡಿಯಾ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸುತ್ತಿದೆ. ನಿಗದಿತ ದಿನಾಂಕ ಫೆಬ್ರವರಿ 24 ಕ್ಕೆ ಚಿತ್ರಮಂದಿರಗಳಲ್ಲಿ ವಿಕ್ರಾಂತ್ ರೋಣ ಬಿಡುಗಡೆಯಾಗಲಿದೆ. ಹಾಗಾಗಿ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗಿವೆಯಂತೆ. ಈ ವಿಚಾರವನ್ನು ನಿರ್ಮಾಪಕ ಜಾಕ್ ಮಂಜು ಅವರು ಬಹಿರಂಗ ಪಡಿಸಿದ್ದಾರೆ.
'ರಂಗಿತರಂಗ' ಖ್ಯಾತಿಯ ನಿರ್ಮಾಪಕ ಅನೂಪ್ ಭಂಡಾರಿ ಈ ಚಿತ್ರ ನಿರ್ದೇಶನ ಮಾಡಿದ್ದು, ಅಡ್ವೆಂಚರ್ ಮತ್ತು ಆಕ್ಷನ್ ಚಿತ್ರದಲ್ಲಿ ಮುಖ್ಯ ಅಂಶ ಆಗಿರಲಿದೆ. ಸದ್ಯ ಕನ್ನಡದಲ್ಲಿ ರಿಲೀಸ್ ಆಗುತ್ತಿರುವ ದೊಡ್ಡ ಸಿನಿಮಾ ಇದೆ, ಹಾಗಾಗಿ ಹೆಚ್ಚಿನ ನಿರೀಕ್ಷೆಗಳು ಮನೆ ಮಾಡಿವೆ. ಚಿತ್ರದಲ್ಲಿ ಕಿಚ್ಚ ಸುದೀಪ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಚಿತ್ರದಲ್ಲಿ ನಿರೂಪ್ ಭಂಡಾರಿ, ನೀತಾ ಅಶೋಕ್ ಮತ್ತು ಜಾಕ್ವೆಲಿನ್ ಫರ್ನಾಂಡಿಸ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ವಿಲಿಯಂ ಡೇವಿಡ್ ಚಿತ್ರಕ್ಕೆ ಇದೆ. ಈ ಹಿಂದೆ ವಿಕ್ರಾಂತ್ ರೋಣ ಚಿತ್ರಕ್ಕೆ ಓಟಿಟಿಯಿಂದ ರೂ.100 ಕೋಟಿ ಆಫರ್ ಬಂದಿತ್ತು ಎಂದು ನಿರ್ಮಾಪಕರು ಹೇಳಿ ಕೊಂಡಿದ್ದಾರೆ. ಆದರೆ ಈ ಆಫರ್ ಬೇಡ ಎಂದು ಚಿತ್ರತಂಡ ನಿರಾಕರಿಸಿತ್ತು. ಚಿತ್ರವನ್ನು ಓಟಿಟಿ ಬದಲಿದೆ ಚಿತ್ರಮಂದಿರಲ್ಲಿ ಬಿಡುಗಡೆ ಮಾಡುವುದಾಗಿ ತಿಳಿಸಿತ್ತು.
ವಿಕ್ರಾಂತ್ ರೋಣ 3ಡಿ ಸಿನಿಮಾ ಆಗಿರುವ ಕಾರಣ ಸಿನಿಮಾವನ್ನು ಚಿತ್ರ ಮಂದಿರದಲ್ಲಿ ರಿಲೀಸ್ ಮಾಡಲು ಚಿತ್ರ ತಂಡ ಮುಂದಾಗಿದೆ. ಹಾಗಾಗಿ ಫೆಬ್ರವರಿ 24ಕ್ಕೆ ವಿಕ್ರಾಂತ್ ರೋಣ ಸಿನಿಮಾದ ಮೂಲಕ ಕಿಚ್ಚನನ್ನು ಅಭಿಮಾನಿಗಳು ಕಣ್ತುಂಬಿಕೊಳ್ಳ ಬಹುದಾಗಿದೆ.