Don't Miss!
- News ಅಚ್ಚೇದಿನಗಳಲ್ಲ-ದೌರ್ಭಾಗ್ಯದ ದಿನಗಳು: ಕಾಂಗ್ರೆಸ್ ಜಾಹೀರಾತು
- Finance bangalore royal challengers ತಂಡದಿಂದ ನಗರದ ಎರಡು ಕೆರೆಗಳ ಪುನರುಜ್ಜೀವನ
- Automobiles ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಬೆಸ್ಟ್ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ವಿಕ್ರಾಂತ್ ರೋಣ' ಡಬ್ಬಿಂಗ್ ಆರಂಭಿಸಿದ ನಟ ಕಿಚ್ಚ ಸುದೀಪ್
ಕಿಚ್ಚ ಸುದೀಪ್ ನಟಿಸಿರುವ ಬಹುನಿರೀಕ್ಷೆಯ ಚಿತ್ರ ವಿಕ್ರಾಂತ್ ರೋಣ ಬಿಡುಗಡೆಗೆ ಸಜ್ಜಾಗುತ್ತಿದ್ದು, ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿಕೊಂಡಿದೆ. ಸಿನಿಮಾದ ಡಬ್ಬಿಂಗ್ ಕೆಲಸ ನಡೆಯುತ್ತಿದ್ದು, ಪ್ರಮುಖ ಕಲಾವಿದರು ತಮ್ಮ ಪಾತ್ರಗಳ ಧ್ವನಿಮುದ್ರಿಕೆ ಮಾಡುತ್ತಿದ್ದಾರೆ. ಇದೀಗ, ವಿಕ್ರಾಂತ್ ರೋಣ ಚಿತ್ರದ ನಾಯಕ ನಟ ಕಿಚ್ಚ ಸುದೀಪ್ ಡಬ್ಬಿಂಗ್ ಶುರು ಮಾಡಿದ್ದಾರೆ.
ಬಹಳ ದಿನದ ನಂತರ ಮತ್ತೆ ಸಿನಿಮಾ ಕೆಲಸಕ್ಕೆ ಚಾಲನೆ ಕೊಟ್ಟಿರುವ ಕಿಚ್ಚ, ವಿಕ್ರಾಂತ್ ರೋಣ ಪಾತ್ರಕ್ಕೆ ಡಬ್ಬಿಂಗ್ ಮಾಡುವ ಮೂಲಕ ಮತ್ತೆ ಬೆಳ್ಳಿತೆರೆಗೆ ಕಂಬ್ಯಾಕ್ ಮಾಡಿದ್ದಾರೆ. ಅನಾರೋಗ್ಯದ ಹಿನ್ನೆಲೆ ತಿಂಗಳಿಗೂ ಅಧಿಕ ಸಮಯ ಸಂಪೂರ್ಣವಾಗಿ ವಿಶ್ರಾಂತಿ ಪಡೆದಿದ್ದರು ಸುದೀಪ್. ಈ ನಡುವೆ ರಿಯಾಲಿಟಿ ಶೋಗೂ ಬ್ರೇಕ್ ಹಾಕಿದ್ದರು. ಈಗ, ಸಂಪೂರ್ಣವಾಗಿ ಗುಣಮುಖರಾದ್ಮೇಲೆ ಟಿವಿ ಕಾರ್ಯಕ್ರಮಕ್ಕೆ ಎಂಟ್ರಿ ಕೊಟ್ಟಿದ್ದರು. ಅದರ ಜೊತೆಯಲ್ಲಿ ಸಿನಿಮಾ ಕೆಲಸನೂ ಆರಂಭಿಸಿದ್ದಾರೆ. ಮುಂದೆ ಓದಿ....
'ವಿಕ್ರಾಂತ್ ರೋಣ' ಡಬ್ಬಿಂಗ್ ಮುಗಿಸಿದ ನೀತಾ ಅಶೋಕ್ ಹೇಳಿದ್ದೇನು?
ಸಿನಿಮಾ ಬಹಳ ಖುಷಿ ತಂದಿದೆ
''ಬಹಳ ದಿನಗಳ ನಂತರ ಸಿನಿಮಾವೊಂದಕ್ಕೆ ನಾನು ಡಬ್ಬಿಂಗ್ ಮಾಡ್ತಿದ್ದೇನೆ. ಕೊನೆಗೂ ವಿಕ್ರಾಂತ್ ರೋಣ ಚಿತ್ರದ ನನ್ನ ಪಾತ್ರಕ್ಕೆ ಧ್ವನಿ ನೀಡಿದೆ. ತುಂಬಾ ಅದ್ಭುತವಾಗಿ ಮೂಡಿ ಬಂದಿದೆ, ನಾವು ಬಯಸಿದಂತೆ ತಯಾರಾಗಿರುವುದು ಸಂತಸ ತಂದಿದೆ'' ಎಂದು ಸುದೀಪ್ ಟ್ವಿಟ್ಟರ್ನಲ್ಲಿ ತಿಳಿಸಿದ್ದಾರೆ.
'ವಿಕ್ರಾಂತ್ ರೋಣ ನೋಡ್ತಾಯಿದ್ರೆ ಜೀವ ನಡುಗತ್ತೆ': ಡಬ್ಬಿಂಗ್ ಅನುಭವ ಬಿಚ್ಚಿಟ್ಟ ರವಿಶಂಕರ್
ಡಬ್ಬಿಂಗ್ ಮುಗಿಸಿದ ನೀತಾ ಅಶೋಕ್
ಇತ್ತೀಚಿಗಷ್ಟೆ ವಿಕ್ರಾಂತ್ ರೋಣ ಡಬ್ಬಿಂಗ್ ಮುಗಿಸಿದ ನಟಿ ನೀತಾ ಅಶೋಕ್ ಇನ್ಸ್ಟಾಗ್ರಾಂನಲ್ಲಿ ಸಂತಸ ಹಂಚಿಕೊಂಡಿದ್ದರು. ''ಡಬ್ಬಿಂಗ್ ವೇಳೆ ವಿಕ್ರಾಂತ್ ರೋಣ ಸಿನಿಮಾ ನೋಡಿದ ನನಗೆ ನಿರೀಕ್ಷೆ, ಉತ್ಸಾಹ, ಸಂತೋಷ, ಕುತೂಹಲ, ರೋಮಾಂಚನ ಎಲ್ಲವೂ 10,000 ಪಟ್ಟು ಹೆಚ್ಚಾಗಿದೆ. ಅನೂಪ್ ಭಂಡಾರಿ ಸರ್ ನಿಮ್ಮ ಕಲ್ಪನೆಗೆ ನನ್ನ ಸಲ್ಯೂಟ್. ಸಂಪೂರ್ಣವಾಗಿ ಸಿನಿಮಾ ನೋಡಿದ್ಮೇಲೆ ರೋಮಾಂಚನ ಉಂಟಾಗುತ್ತದೆ'' ಎಂದು ನೀತಾ ಅಶೋಕ್ ಬರೆದುಕೊಂಡಿದ್ದರು.
ಜೀವ ನಡುಗುತ್ತೆ ಎಂದಿದ್ದ ರವಿಶಂಕರ್ ಗೌಡ
ಅದಕ್ಕೂ ಮುಂಚೆ ನಟ ರವಿಶಂಕರ್ ಗೌಡ ವಿಕ್ರಾಂತ್ ರೋಣ ಡಬ್ಬಿಂಗ್ ಮುಗಿಸಿದ್ದರು. ''ವಿಕ್ರಾಂತ್ ರೋಣ ಡಬ್ಬಿಂಗ್ ಮಾಡಿದೆ. ಅಬ್ಬಾ!! ಸಿನಿಮಾ ಪ್ರಾರಂಭವಾದಗಿನಿಂದ ಕೊನೆಯವರೆಗೂ ಸೀಟಿನಲ್ಲಿ ಒರಗಿಕೊಳ್ಳಲು ಸಾದ್ಯವಿಲ್ಲ. ಕುತೂಹಲದ ಮಹಾಪೂರ. ಗೆಳೆಯ ದೀಪುವಿನ ಅಭಿನಯಕ್ಕೆ ಮನಸೋಲದವರಿಲ್ಲಾ. ಹೊಸ ಕಲಾವಿದರದು ಅಚ್ಚುಕಟ್ಟಾದ ಅಭಿನಯ. ಇಡೀ ಸಿನಿಮಾ ನೋಡ್ತಾಯಿದ್ರೆ ಜೀವ ನಡುಗುತ್ತೆ'' ಎಂದಿದ್ದರು.
Recommended Video
ಮೊದಲು ಕೋಟಿಗೊಬ್ಬ, ಆಮೇಲೆ ವಿಕ್ರಾಂತ್ ರೋಣ
ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆ ಕುರಿತು ಸದ್ಯಕ್ಕೆ ಸ್ಪಷ್ಟತೆ ಇಲ್ಲ. ಇದಕ್ಕೂ ಮುಂಚೆ ಸುದೀಪ್ ಅಭಿನಯದ ಕೋಟಿಗೊಬ್ಬ 3 ಸಿನಿಮಾ ತೆರೆಗೆ ಬರಬೇಕಿದೆ. ಈ ಚಿತ್ರದ ರಿಲೀಸ್ ದಿನಾಂಕ ನೋಡಿಕೊಂಡು ವಿಕ್ರಾಂತ್ ರೋಣ ಬಿಡುಗಡೆ ನಿರ್ಧರಿಸುವುದು ಚಿತ್ರತಂಡದ ಯೋಜನೆಯಾಗಿದೆ. ಅನೂಪ್ ಭಂಡಾರಿ ನಿರ್ದೇಶನದ ಈ ಚಿತ್ರದಲ್ಲಿ ಸುದೀಪ್, ನಿರೂಪ್ ಭಂಡಾರಿ, ರವಿಶಂಕರ್ ಗೌಡ, ನೀತಾ ಅಶೋಕ್ ನಟಿಸಿದ್ದಾರೆ.