Don't Miss!
- News ಲೋಕಸಭಾ ಚುನಾವಣೆಯಲ್ಲಿ ಕೊಡಗಿನಲ್ಲಿ ಮತ್ತೆ ‘ಕೈ’ ಕಮಾಲ್?: ಒಂದಷ್ಟು ನಾಯಕರು ಮೌನವಾಗಿದ್ದೇಕೆ?
- Lifestyle ಗ್ರಹಣ ಕಾಲದಲ್ಲಿ ಆಹಾರ ಸೇವಿಸಬಾರದೇಕೆ.? ಹಿರಿಯರ ವಾದವೇನು..?
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹುಚ್ಚ ವೆಂಕಟ್ ಚಿಕಿತ್ಸೆಗೆ ನೆರವು ನೀಡಲು ಮುಂದಾದ ಕಿಚ್ಚ ಸುದೀಪ್
ಮಾನಸಿಕ ಸಮತೋಲನ ಕಳೆದುಕೊಂಡು ಅಲೆದಾಡುವಾಗ ಕಿಡಿಗೇಡಿಗಳಿಂದ ಹಲ್ಲೆಗೆ ಒಳಗಾಗಿದ್ದ ನಟ, ನಿರ್ದೇಶಕ ಹುಚ್ಚ ವೆಂಕಟ್ ಅವರ ಪರವಾಗಿ ಇತ್ತೀಚೆಗೆ ಕೆಲವು ನಟರು ಧ್ವನಿ ಎತ್ತಿದ್ದರು. ಅವರ ಮೇಲೆ ಹಲ್ಲೆ ನಡೆಸಬೇಡಿ ಎಂದು ಮನವಿ ಮಾಡಿದ್ದರು. ಹಲ್ಲೆ ನಡೆಸಿದವರ ವಿರುದ್ಧ ದೂರು ಸಹ ನೀಡಲಾಗಿತ್ತು.
Recommended Video
ಹುಚ್ಚ ವೆಂಕಟ್ ಅವರಿಗೆ ಕರುಣೆ ತೋರಿ ಅನೇಕರು ಊಟ ಮತ್ತು ಹಣ ನೀಡಿ ಸಂತೈಸಿದಿದ್ದರು. ಅವರನ್ನುಮರಳಿ ಮನೆಗೆ ಕಳುಹಿಸಲು ಸಹಾಯ ಮಾಡಿದ್ದರು. ಮಾನಸಿಕ ಸಮಸ್ಯೆಯಿಂದ ಬಳಲುತ್ತಿರುವ ಅವರಿಗೆ ಚಿಕಿತ್ಸೆಯ ಅಗತ್ಯವಿದೆ. ಅವರ ಮಾನಸಿಕ ಆರೋಗ್ಯ ಸ್ಥಿಮಿತತೆ ಕಳೆದುಕೊಂಡ ಪರಿಣಾಮ ಅವರು ಅನೇಕ ಬಾರಿ ಅತಿರೇಕದ ವರ್ತನೆ ತೋರಿಸಿದ್ದರು. ಕೆಲವೆಡೆ ಹಲ್ಲೆ ನಡೆಸಿದ್ದರು. ಹಾಗೆಯೇ ಕೆಲವರನ್ನು ಪೀಡಿಸಿದ್ದರು.
ಹುಚ್ಚ ವೆಂಕಟ್ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಎಫ್ಐಆರ್: ದೂರು ನೀಡಿದವರು ಯಾರು?
ಅವರ ಸ್ಥಿತಿಯನ್ನು ಬಳಸಿಕೊಂಡ ಅನೇಕರು ಅವರೊಂದಿಗೆ ಸೆಲ್ಫಿ ವಿಡಿಯೋ ತೆಗೆದು ತಮಾಷೆ ಮಾಡಿದರೆ ಇನ್ನು ಕೆಲವರು ಹಲ್ಲೆನಡೆಸುವ ಮೂಲಕ ಅಮಾನವೀಯತೆ ಪ್ರದರ್ಶಿಸಿದ್ದರು. ಮುಂದೆ ಓದಿ...
ನೆರವಿನ ಹಸ್ತ ಚಾಚಿದ ಸುದೀಪ್
ಸಂಕಷ್ಟದಲ್ಲಿರುವ ಹುಚ್ಚ ವೆಂಕಟ್ ಅವರಿಗೆ ಸಹಾಯ ಮಾಡಲು ನಟ ಕಿಚ್ಚ ಸುದೀಪ್ ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಹುಚ್ಚ ವೆಂಕಟ್ ಅವರಿಗೆ ಚಿಕಿತ್ಸೆ ಮತ್ತು ಸಾಂತ್ವನದ ಅಗತ್ಯವಿದೆ. ಅದನ್ನು ನೀಡಲು ಸುದೀಪ್ ಬಯಸಿದ್ದಾರೆ.
ಜನರು ಕರುಣೆ ತೋರಿಸಿ
ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದೆ. ಕೆಲವು ದಿನಗಳಿಂದ ಮಾನಸಿಕವಾಗಿ ಜರ್ಜರಿತವಾಗಿ ಓಡಾಡುತ್ತಿದ್ದ ಹುಚ್ಚ ವೆಂಕಟ್ ಅವರ ಮೇಲೆ ದೈಹಿಕವಾಗಿ ಹಲ್ಲೆಯಾಗುತ್ತಿದ್ದು, ಸಾರ್ವಜನಿಕರು ಸ್ವಲ್ಪ ಸಂಯಮ ಮತ್ತು ಕರುಣೆ ತೋರಿಸಬೇಕು ಎಂದು ಸೊಸೈಟಿ ಮನವಿ ಮಾಡಿದೆ.
ಹುಚ್ಚ ವೆಂಕಟ್ಗೆ ದಯವಿಟ್ಟು ಹೊಡೆಯಬೇಡಿ: ದುನಿಯಾ ವಿಜಯ್ ಕಳಕಳಿಯ ಮನವಿ
ಚಿಕಿತ್ಸೆ ನೀಡಲು ನಿರ್ಧಾರ
ಹುಚ್ಚ ವೆಂಕಟ್ ಅವರಿಗೆ ಚಿಕಿತ್ಸೆ ಮತ್ತು ಸಾಂತ್ವನ ನೀಡಲು ಕಿಚ್ಚ ಸುದೀಪ್ ನಿರ್ಧರಿಸಿದ್ದು, ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿಗೆ ಅನುಮತಿ ನೀಡಿದ್ದಾರೆ. ಹುಚ್ಚ ವೆಂಕಟ್ ಅವರು ಯಾವುದೇ ಸ್ಥಳದಲ್ಲಿ ಕಂಡು ಬಂದರೆ 63603 34455 ಸಂಖ್ಯೆಗೆ ಕರೆ ಮಾಡಿ ತಿಳಿಸಿ. ಮಾನವೀಯತೆ ಗೆಲ್ಲುವ ಹಾಗೆ ಮಾಡಿ ಎಂದು ಕೋರಿದ್ದಾರೆ.
ಹಲ್ಲೆ ಮಾಡಿದ್ದ ಯುವಕರು
ಶ್ರೀರಂಗಪಟ್ಟಣದಲ್ಲಿ ಕೆಲವು ಯುವಕರು ಇತ್ತೀಚೆಗೆ ಹುಚ್ಚ ವೆಂಕಟ್ ಮೇಲೆ ಹಲ್ಲೆ ನಡೆಸಿದ್ದರು. ಇದನ್ನು ನಟ ಜಗ್ಗೇಶ್ ಮತ್ತು ದುನಿಯಾ ವಿಜಯ್ ಖಂಡಿಸಿದ್ದರು. ಟೀ ಅಂಗಡಿ ಮಾಲೀಕರೊಬ್ಬರು ನೀಡಿದ್ದ ದೂರಿನ ಅನ್ವಯ ಯುವಕ ಮೇಲೆ ಪ್ರಕರಣ ದಾಖಲಿಸಲಾಗಿತ್ತು.
ಹುಚ್ಚ ವೆಂಕಟ್ ಮೇಲೆ ಹಲ್ಲೆ ಮಾಡಿದ ಯುವಕರಿಗೆ ಜಗ್ಗೇಶ್ ಪ್ರಶ್ನೆ
ಮಾನವೀಯತೆ ಪ್ರದರ್ಶಿಸಿದ್ದರು
ಹಲ್ಲೆಯ ವಿಡಿಯೋ ನಡುವೆಯೇ ಕೆಲವರು ವೆಂಕಟ್ ಅವರಿಗೆ ತಮ್ಮ ಕಯ್ಯಾರೆ ಊಟ ಮಾಡಿಸಿದ ಮತ್ತು ಮಹಿಳೆಯೊಬ್ಬರು ಕಾಲಿನ ಮೇಲೆ ಮಲಗಿಸಿಕೊಂಡು ಸಾಂತ್ವನ ಹೇಳುವ ವಿಡಿಯೋಗಳು ಜನರಲ್ಲಿ ಇನ್ನೂ ಮಾನವೀಯತೆಯ ಸೆಲೆ ಇದೆ ಎಂಬುದನ್ನು ಸಾಬೀತುಪಡಿಸಿದ್ದವು.