ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್: ಅಪಘಾತದಲ್ಲಿ ಕಾಲು ಕಳೆದುಕೊಂಡ ಅಭಿಮಾನಿಗೆ ನೆರವು

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಇಂದು (ಜನವರಿ 4) ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು.

Recommended Video

ಕಿಚ್ಚನ ಕೆಲಸಕ್ಕೆ ಭೇಶ್ ಎಂದ ಅಭಿಮಾನಿಗಳು | Kiccha Sudeep In Pandavapura | Filmibeat Kannada

ರಂಗಿತರಂಗ ಚಿತ್ರದ ನಿರ್ದೇಶಕ ಅನೂಪ್ ಭಂಡಾರಿ ಜೊತೆ ಆಗಮಿಸಿದ ನಟ ಸುದೀಪ್ ಚಾಮುಂಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಸುದೀಪ್ ಅವರನ್ನು ನೋಡಲು ಸಾಕಷ್ಟು ಅಭಿಮಾನಿಗಳು ಜಮಾಯಿಸಿದ್ದರು. ಕಿಚ್ಚನ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಹರಸಾಹಸ ಪಟ್ಟರು.

ಮೈಸೂರಿನಲ್ಲಿ ಚಾಮುಂಡೇಶ್ವರಿ ದರ್ಶನ ಪಡೆದು ಹಿಂತಿರುಗಿ ಬರುವ ವೇಳೆ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ಅಭಿಮಾನಿಯನ್ನು ಭೇಟಿ ಮಾಡಿ ನೆರವು ನೀಡಿದರು. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹಿರೇಮರಳಿ ನಿವಾಸಿ ರಾಘವ್ ಎಂಬುವವರ ಚಿಕಿತ್ಸೆಗೆ ನೆರವಾಗುವ ಮೂಲಕ ನಟ ಸುದೀಪ್ ಮಾನವೀಯತೆ ಮೆರೆದಿದ್ದಾರೆ.

ಇನ್ನು ಅನೂಪ್ ಭಂಡಾರಿ ನಿರ್ದೇಶನದ ಫ್ಯಾಂಟಮ್ ಚಿತ್ರದ ಸುದೀಪ್ ನಟಿಸುತ್ತಿದ್ದು, ಬಹುತೇಕ ಚಿತ್ರೀಕರಣ ಮುಗಿಸಿದ್ದಾರೆ. ಹೈದರಾಬಾದ್‌ನ ರಾಮೋಜಿ ರಾವ್‌ ಫಿಲಂ ಸಿಟಿಯಲ್ಲಿ ಅದ್ಧೂರಿ ಸೆಟ್‌ ನಿರ್ಮಾಣ ಮಾಡಿ ತಿಂಗಳು ಕಾಲ ಶೂಟಿಂಗ್ ಮಾಡಿದ್ದಾರೆ.

Kichcha Sudeep Visits Chamundi Temple in Mysuru

ಇನ್ನು ಈ ತಿಂಗಳ ಅಂತ್ಯಕ್ಕೆ ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಏಂಟನೇ ಆವೃತ್ತಿ ಆರಂಭವಾಗುತ್ತಿದ್ದು, ನಟ ಸುದೀಪ್ ನಿರೂಪಣೆ ಮಾಡಲಿದ್ದಾರೆ.

More from Filmibeat

English summary
Kannada actor Kichcha Sudeep visits chamundi temple in Mysuru along with director anup bhanadri.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X