Just In
Don't Miss!
- News
ಬುಧವಾರ ಜೋ ಬೈಡನ್, ಕಮಲಾ ಹ್ಯಾರಿಸ್ ಪ್ರಮಾಣವಚನ: ಸಮಯ, ವೀಕ್ಷಣೆ ವಿವರ
- Sports
ಐಎಸ್ಎಲ್: ಹೈದರಾಬಾದ್ ಜಯಕ್ಕೆ ಅಡ್ಡಿಯಾದ ಕಳಿಂಗ ವಾರಿಯರ್ಸ್
- Education
AAI Recruitment 2021: 7 ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Finance
ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ, ಮೆಣಸು, ಕಾಫೀ ಜ. 19ರ ದರ
- Automobiles
ವಾಣಿಜ್ಯ ವಾಹನಗಳ ಖರೀದಿಗಾಗಿ ಹಲವು ಆಕರ್ಷಕ ಸಾಲಸೌಲಭ್ಯಗಳಿಗೆ ಚಾಲನೆ ನೀಡಿದ ಟಾಟಾ
- Lifestyle
ಜ. 25ಕ್ಕೆ ಕುಂಭ ರಾಶಿಗೆ ಬುಧನ ಸಂಚಾರ: 12 ರಾಶಿಗಳ ಮೇಲೆ ಇದರ ಪ್ರಭಾವವೇನು?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್: ಅಪಘಾತದಲ್ಲಿ ಕಾಲು ಕಳೆದುಕೊಂಡ ಅಭಿಮಾನಿಗೆ ನೆರವು
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಇಂದು (ಜನವರಿ 4) ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು.
ರಂಗಿತರಂಗ ಚಿತ್ರದ ನಿರ್ದೇಶಕ ಅನೂಪ್ ಭಂಡಾರಿ ಜೊತೆ ಆಗಮಿಸಿದ ನಟ ಸುದೀಪ್ ಚಾಮುಂಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಸುದೀಪ್ ಅವರನ್ನು ನೋಡಲು ಸಾಕಷ್ಟು ಅಭಿಮಾನಿಗಳು ಜಮಾಯಿಸಿದ್ದರು. ಕಿಚ್ಚನ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಹರಸಾಹಸ ಪಟ್ಟರು.
ಮತ್ತೊಮ್ಮೆ 'ಮೈ ಆಟೋಗ್ರಾಫ್' ಪುಟ ತೆರೆದ ಸುದೀಪ್: 15 ವರ್ಷದ ನಂತರ ಲತಿಕಾ ಮನೆಗೆ ಭೇಟಿ
ಮೈಸೂರಿನಲ್ಲಿ ಚಾಮುಂಡೇಶ್ವರಿ ದರ್ಶನ ಪಡೆದು ಹಿಂತಿರುಗಿ ಬರುವ ವೇಳೆ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ಅಭಿಮಾನಿಯನ್ನು ಭೇಟಿ ಮಾಡಿ ನೆರವು ನೀಡಿದರು. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹಿರೇಮರಳಿ ನಿವಾಸಿ ರಾಘವ್ ಎಂಬುವವರ ಚಿಕಿತ್ಸೆಗೆ ನೆರವಾಗುವ ಮೂಲಕ ನಟ ಸುದೀಪ್ ಮಾನವೀಯತೆ ಮೆರೆದಿದ್ದಾರೆ.
ನಟ ಕಿಚ್ಚ ಸುದೀಪ್ ಅವರು ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು. ರಂಗಿತರಂಗ ಚಿತ್ರದ ನಿರ್ದೇಶಕ ಅನೂಪ್ ಭಂಡಾರಿ ಜೊತೆ ಆಗಮಿಸಿದ ನಟ ಸುದೀಪ್ ತಾಯಿ ಚಾಮುಂಡಿಯ ದರ್ಶನ ಪಡೆದರು. @KicchaSudeep @anupsbhandari #Mysore pic.twitter.com/hkUfaofQTd
— oneindiakannada (@OneindiaKannada) January 4, 2021
ಇನ್ನು ಅನೂಪ್ ಭಂಡಾರಿ ನಿರ್ದೇಶನದ ಫ್ಯಾಂಟಮ್ ಚಿತ್ರದ ಸುದೀಪ್ ನಟಿಸುತ್ತಿದ್ದು, ಬಹುತೇಕ ಚಿತ್ರೀಕರಣ ಮುಗಿಸಿದ್ದಾರೆ. ಹೈದರಾಬಾದ್ನ ರಾಮೋಜಿ ರಾವ್ ಫಿಲಂ ಸಿಟಿಯಲ್ಲಿ ಅದ್ಧೂರಿ ಸೆಟ್ ನಿರ್ಮಾಣ ಮಾಡಿ ತಿಂಗಳು ಕಾಲ ಶೂಟಿಂಗ್ ಮಾಡಿದ್ದಾರೆ.
ಇನ್ನು ಈ ತಿಂಗಳ ಅಂತ್ಯಕ್ಕೆ ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಏಂಟನೇ ಆವೃತ್ತಿ ಆರಂಭವಾಗುತ್ತಿದ್ದು, ನಟ ಸುದೀಪ್ ನಿರೂಪಣೆ ಮಾಡಲಿದ್ದಾರೆ.