Don't Miss!
- Technology Tecno: ಬಹುನಿರೀಕ್ಷಿತ ಟೆಕ್ನೋ ಪೋವಾ 6 ಪ್ರೊ ಲಾಂಚ್! 12GB RAM.. 6000mAh ಬ್ಯಾಟರಿ.. ಬೆಲೆ ಎಷ್ಟು?
- News ಬಿಜೆಪಿ 400 ಸ್ಥಾನ ಪಡೆಯಲು ಹರಸಾಹಸ ಪಡುತ್ತಿರುವುದ್ಯಾಕೆ.?-ಯತೀಂದ ಸಿದ್ದರಾಮಯ್ಯ ಹೇಳಿದ್ದೇನು?
- Sports CSK vs RCB: ದಾಖಲೆಯ ಪುಟ ಸೇರಿದ ಉದ್ಘಾಟನಾ ಪಂದ್ಯ: 16.8 ಕೋಟಿ ಜನರಿಂದ ವೀಕ್ಷಣೆ
- Finance ಮೃತರ ಖಾತೆಯಲ್ಲಿರುವ ಹಣವನ್ನು ಕುಟುಂಬಸ್ಥರು ಡ್ರಾ ಮಾಡಬಹುದಾ, ಬ್ಯಾಂಕ್ ನಿಯಮಾವಳಿ ಏನು ಹೇಳುತ್ತೆ?
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್: ಅಪಘಾತದಲ್ಲಿ ಕಾಲು ಕಳೆದುಕೊಂಡ ಅಭಿಮಾನಿಗೆ ನೆರವು
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಇಂದು (ಜನವರಿ 4) ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು.
Recommended Video
ರಂಗಿತರಂಗ ಚಿತ್ರದ ನಿರ್ದೇಶಕ ಅನೂಪ್ ಭಂಡಾರಿ ಜೊತೆ ಆಗಮಿಸಿದ ನಟ ಸುದೀಪ್ ಚಾಮುಂಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಸುದೀಪ್ ಅವರನ್ನು ನೋಡಲು ಸಾಕಷ್ಟು ಅಭಿಮಾನಿಗಳು ಜಮಾಯಿಸಿದ್ದರು. ಕಿಚ್ಚನ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಹರಸಾಹಸ ಪಟ್ಟರು.
ಮತ್ತೊಮ್ಮೆ 'ಮೈ ಆಟೋಗ್ರಾಫ್' ಪುಟ ತೆರೆದ ಸುದೀಪ್: 15 ವರ್ಷದ ನಂತರ ಲತಿಕಾ ಮನೆಗೆ ಭೇಟಿ
ಮೈಸೂರಿನಲ್ಲಿ ಚಾಮುಂಡೇಶ್ವರಿ ದರ್ಶನ ಪಡೆದು ಹಿಂತಿರುಗಿ ಬರುವ ವೇಳೆ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ಅಭಿಮಾನಿಯನ್ನು ಭೇಟಿ ಮಾಡಿ ನೆರವು ನೀಡಿದರು. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹಿರೇಮರಳಿ ನಿವಾಸಿ ರಾಘವ್ ಎಂಬುವವರ ಚಿಕಿತ್ಸೆಗೆ ನೆರವಾಗುವ ಮೂಲಕ ನಟ ಸುದೀಪ್ ಮಾನವೀಯತೆ ಮೆರೆದಿದ್ದಾರೆ.
ನಟ ಕಿಚ್ಚ ಸುದೀಪ್ ಅವರು ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು. ರಂಗಿತರಂಗ ಚಿತ್ರದ ನಿರ್ದೇಶಕ ಅನೂಪ್ ಭಂಡಾರಿ ಜೊತೆ ಆಗಮಿಸಿದ ನಟ ಸುದೀಪ್ ತಾಯಿ ಚಾಮುಂಡಿಯ ದರ್ಶನ ಪಡೆದರು. @KicchaSudeep @anupsbhandari #Mysore pic.twitter.com/hkUfaofQTd
— oneindiakannada (@OneindiaKannada) January 4, 2021
ಇನ್ನು ಅನೂಪ್ ಭಂಡಾರಿ ನಿರ್ದೇಶನದ ಫ್ಯಾಂಟಮ್ ಚಿತ್ರದ ಸುದೀಪ್ ನಟಿಸುತ್ತಿದ್ದು, ಬಹುತೇಕ ಚಿತ್ರೀಕರಣ ಮುಗಿಸಿದ್ದಾರೆ. ಹೈದರಾಬಾದ್ನ ರಾಮೋಜಿ ರಾವ್ ಫಿಲಂ ಸಿಟಿಯಲ್ಲಿ ಅದ್ಧೂರಿ ಸೆಟ್ ನಿರ್ಮಾಣ ಮಾಡಿ ತಿಂಗಳು ಕಾಲ ಶೂಟಿಂಗ್ ಮಾಡಿದ್ದಾರೆ.
ಇನ್ನು ಈ ತಿಂಗಳ ಅಂತ್ಯಕ್ಕೆ ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಏಂಟನೇ ಆವೃತ್ತಿ ಆರಂಭವಾಗುತ್ತಿದ್ದು, ನಟ ಸುದೀಪ್ ನಿರೂಪಣೆ ಮಾಡಲಿದ್ದಾರೆ.