Don't Miss!
- News
Bharat Jodo Yatra: ಭಾರತ್ ಜೋಡೋ ಯಾತ್ರೆಯ ಸಮಾರೋಪದಲ್ಲಿ 9 ಪಕ್ಷಗಳು ಗೈರು, 12 ಪಕ್ಷಗಳು ಹಾಜರು
- Sports
ಆರ್ಸಿಬಿ ತನ್ನ ಆಟಗಾರರನ್ನು ನಂಬಲ್ಲ ಎಂದ ಕ್ರಿಸ್ ಗೇಲ್: ತಿರುಗಿಬಿದ್ದ ಅಭಿಮಾನಿಗಳು ಕೊಟ್ಟ ಉತ್ತರವೇನು?
- Automobiles
'ಮಹೀಂದ್ರಾ ಸ್ಕಾರ್ಪಿಯೊ ಎನ್' ಈ ರೂಪಾಂತರಗಳಿಗೆ ಬರೋಬ್ಬರಿ 2 ವರ್ಷ ಕಾಯಬೇಕು..
- Lifestyle
Horoscope Today 29 Jan 2023: ಭಾನುವಾರ: ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Finance
ಅಭ್ಯರ್ಥಿಯ ಸಂದರ್ಶನ ಮಾಡುತ್ತಿದ್ದಾಗಲೇ ಗೂಗಲ್ ಎಚ್ಆರ್ ವಜಾ!
- Technology
ಒಪ್ಪೋ ಕಂಪೆನಿಯ ಈ ಸ್ಮಾರ್ಟ್ಫೋನ್ ಮೇಲೆ ಭಾರಿ ನಿರೀಕ್ಷೆ? ಲಾಂಚ್ ಯಾವಾಗ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಶ್ರೀಮುರಳಿಗೆ ಸುದೀಪ್ ಬರ್ತಡೇ ವಿಶ್; 'ಬಘೀರ' ಬಗ್ಗೆ ಕಿಚ್ಚ ಹೇಳಿದ್ದೇನು?
ಸ್ಯಾಂಡಲ್ ವುಡ್ ನ ರೋರಿಂಗ್ ಸ್ಟಾರ್ ಶ್ರೀಮುರಳಿ ಇಂದು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಉಗ್ರಂ ವೀರನ ಹುಟ್ಟುಹಬ್ಬಕ್ಕೆ ಅಭಿಮಾನಿಗಳು, ಸ್ನೇಹಿತರು ಮತ್ತು ಚಿತ್ರರಂಗದ ಗಣ್ಯರಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.
Recommended Video
ಈ ಬಾರಿ ಶ್ರೀಮುರಳಿ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಸ್ನೇಹಿತರು ಮತ್ತು ಕುಟುಂಬದವರ ಜೊತೆ ಕೇಕ್ ಕತ್ತರಿಸಿ ಹುಟ್ಟುಹಬ್ಬ ಸಂಭ್ರಮಿಸಿದ್ದಾರೆ. ಈ ಬಾರಿ ನೆಚ್ಚಿನ ನಟನನ್ನು ಹತ್ತಿರದಿಂದ ನೋಡಿ ಕಣ್ತುಂಬಿಕೊಳ್ಳುವ ಅವಕಾಶ ಸಿಗದಿದ್ದರೂ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ಸಿಕ್ಕಿದೆ. ಹೌದು, ಹೊಂಬಾಳೆ ಫಿಲ್ಮ್ಸ್ ನ ಮುಂದಿನ ಸಿನಿಮಾದಲ್ಲಿ ಶ್ರೀಮುರಳಿ ನಟಿಸುತ್ತಿದ್ದಾರೆ. ಈ ಸುದ್ದಿ ಅಭಿಮಾನಿಗಳ ನಿದ್ದೆ ಗೆಡಿಸಿದೆ.
ಶ್ರೀಮುರಳಿ
ಜೊತೆ
ಹೊಂಬಾಳೆ
ಫಿಲ್ಮ್ಸ್
ಹೊಸ
ಸಿನಿಮಾ;
'ಬಘೀರ'ನಾಗಿ
ಎಂಟ್ರಿ
ಕೊಟ್ಟ
ರೋರಿಂಗ್
ಸ್ಟಾರ್

ರೋರಿಂಗ್ ಸ್ಟಾರ್ ಗೆ ಸುದೀಪ್ ವಿಶ್
ಇದೀಗ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ರೋರಿಂಗ್ ಸ್ಟಾರ್ ಶ್ರೀಮುರಳಿಗೆ ವಿಶ್ ಮಾಡಿದ್ದಾರೆ. ಜನ್ಮದಿನದ ಶುಭಾಶಯ ತಿಳಿಸುವ ಜೊತೆಗೆ ಬಘೀರ ಸಿನಿಮಾದ ಬಗ್ಗೆಯೂ ಹೇಳಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಶ್ರೀಮುರಳಿಗೆ ಸಂದೇಶ ರವಾನಿಸಿರುವ ಶ್ರೀಮುರಳಿ, 'ಹುಟ್ಟುಹಬ್ಬದ ಶುಭಾಶಯಗಳು ಶ್ರೀಮುರಳಿ. ಯಾವಾಗಲು ಸಂತೋಷವಾಗಿರಿ ಎಂದು ಹಾರೈಸುತ್ತೇನೆ. ಬಘೀರ ಲುಕ್ ಅದ್ಭುತವಾಗಿದೆ' ಎಂದು ಹೇಳಿದ್ದಾರೆ.

ಮದಗಜ ಟೀಸರ್ ರಿಲೀಸ್
ಅಭಿಮಾನಿಗಳು ಸುದೀಪ್ ಮತ್ತು ಶ್ರೀಮುರಳಿ ಫೋಟೋಗಳನ್ನು ಶೇರ್ ಮಾಡಿ, ಹುಟ್ಟುಹಬ್ಬ ಶುಭಾಶಯ ತಿಳಿಸುತ್ತಿದ್ದಾರೆ. ಶ್ರೀಮುರಳಿ ಹುಟ್ಟುಹಬ್ಬದ ಪ್ರಯುಕ್ತ ಇಂದು ಮದಗಜ ಚಿತ್ರದ ಫಸ್ಟ್ ಲುಕ್ ಟೀಸರ್ ರಿಲೀಸ್ ಆಗಿದೆ. ಈ ಸಿನಿಮಾದಲ್ಲೂ ಶ್ರೀಮುರಳಿ ಮಾಸ್ ಲುಕ್ ನಲ್ಲಿ ಮಿಂಚಿದ್ದಾರೆ.
ಮಹೇಶ್
ಬಾಬು
ಟು
ಶ್ರೀಮುರಳಿ:
2020ರಲ್ಲಿ
ಘೋಷಣೆಯಾದ
ಬಿಗ್ಗೆಸ್ಟ್
ಸಿನಿಮಾಗಳು

ಸೂರಿ ನಿರ್ದೇಶನದಲ್ಲಿ ಬಘೀರ
ಶ್ರೀಮುರಳಿ ನಟನೆಯ ಬಘೀರ ಸಿನಿಮಾದ ಲುಕ್ ಎಲ್ಲರ ಕಣ್ಣುಕುಕ್ಕುತ್ತಿದೆ. ಫಸ್ಟ್ ಲುಕ್ ನಲ್ಲಿ ಮುರಳಿ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ಗೊತ್ತಾಗುತ್ತಿದೆ. ಈ ಸಿನಿಮಾಗೆ ಡಾ. ಸೂರಿ ನಿರ್ದೇಶನ ಮಾಡುತ್ತಿದೆ. ಹೊಂಬಾಳೆ ಫಿಲ್ಸ್ಮ್ ನ 8ನೇ ಸಿನಿಮಾ ಇದಾಗಿದೆ. ಈಗಾಗಲೇ ನೇ ಸಿನಿಮಾ ಪ್ರಭಾಸ್ ಜೊತೆ ಮಾಡುವುದಾಗಿ ಅನೌನ್ಸ್ ಮಾಡಿದ್ದಾರೆ.

ಬಘೀರನಿಗೆ ಕಥೆ ಬರೆದ ಪ್ರಶಾಂತ್ ನೀಲ್
ವಿಶೇಷ ಎಂದರೆ ಬಘೀರ ಸಿನಿಮಾದ ಕಥೆಯನ್ನು ಪ್ರಶಾಂತ್ ನೀಲ್ ಬರೆದ್ದಾರೆ. 'ನನ್ನ ಮೊದಲ ನಿಜವಾದ ಮಾಸ್ ಹೀರೋ ಶ್ರೀಮುರಳಿಗಾಗಿ ಶೌರ್ಯದ ಕಥೆಯನ್ನು ಬರೆದಿದ್ದೀನಿ. ಹುಟ್ಟುಹಬ್ಬದ ಶುಭಾಶಯಗಳು ಶ್ರೀಮುರಳಿ' ಎಂದು ಪ್ರಶಾಂತ್ ನೀಲ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.