Just In
Don't Miss!
- News
ನಮ್ಮನ್ನು ಬಿಟ್ಟು ಓಡುತ್ತಿವೆ 500 ನಕ್ಷತ್ರಗಳು, ವಿಜ್ಞಾನಿಗಳಿಂದ ರಹಸ್ಯ ರಿವೀಲ್..!
- Lifestyle
"ಗುರುವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್ಯ"
- Sports
ಐಎಸ್ಎಲ್: ಬೆಂಗಳೂರಿಗೆ ಸೋಲಿನ ಆಘಾತ ನೀಡಿದ ಕೇರಳ ಬ್ಲಾಸ್ಟರ್ಸ್
- Education
WAPCOS Recruitment 2021: 11 ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Finance
ಇಪ್ಪತ್ತು ದಿನದಲ್ಲಿ 47 ಪರ್ಸೆಂಟ್ ನಷ್ಟು ಏರಿಕೆ ಕಂಡ ಟಾಟಾ ಮೋಟಾರ್ಸ್ ಷೇರು
- Automobiles
ಡ್ಯುಯಲ್ ಟೋನ್ ಬಣ್ಣದ ಆಯ್ಕೆಯೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ಸಿಟ್ರನ್ ಸಿ5 ಏರ್ಕ್ರಾಸ್ ಕಾರು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಶ್ರೀಮುರಳಿಗೆ ಸುದೀಪ್ ಬರ್ತಡೇ ವಿಶ್; 'ಬಘೀರ' ಬಗ್ಗೆ ಕಿಚ್ಚ ಹೇಳಿದ್ದೇನು?
ಸ್ಯಾಂಡಲ್ ವುಡ್ ನ ರೋರಿಂಗ್ ಸ್ಟಾರ್ ಶ್ರೀಮುರಳಿ ಇಂದು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಉಗ್ರಂ ವೀರನ ಹುಟ್ಟುಹಬ್ಬಕ್ಕೆ ಅಭಿಮಾನಿಗಳು, ಸ್ನೇಹಿತರು ಮತ್ತು ಚಿತ್ರರಂಗದ ಗಣ್ಯರಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.
ಈ ಬಾರಿ ಶ್ರೀಮುರಳಿ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಸ್ನೇಹಿತರು ಮತ್ತು ಕುಟುಂಬದವರ ಜೊತೆ ಕೇಕ್ ಕತ್ತರಿಸಿ ಹುಟ್ಟುಹಬ್ಬ ಸಂಭ್ರಮಿಸಿದ್ದಾರೆ. ಈ ಬಾರಿ ನೆಚ್ಚಿನ ನಟನನ್ನು ಹತ್ತಿರದಿಂದ ನೋಡಿ ಕಣ್ತುಂಬಿಕೊಳ್ಳುವ ಅವಕಾಶ ಸಿಗದಿದ್ದರೂ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ಸಿಕ್ಕಿದೆ. ಹೌದು, ಹೊಂಬಾಳೆ ಫಿಲ್ಮ್ಸ್ ನ ಮುಂದಿನ ಸಿನಿಮಾದಲ್ಲಿ ಶ್ರೀಮುರಳಿ ನಟಿಸುತ್ತಿದ್ದಾರೆ. ಈ ಸುದ್ದಿ ಅಭಿಮಾನಿಗಳ ನಿದ್ದೆ ಗೆಡಿಸಿದೆ.
ಶ್ರೀಮುರಳಿ ಜೊತೆ ಹೊಂಬಾಳೆ ಫಿಲ್ಮ್ಸ್ ಹೊಸ ಸಿನಿಮಾ; 'ಬಘೀರ'ನಾಗಿ ಎಂಟ್ರಿ ಕೊಟ್ಟ ರೋರಿಂಗ್ ಸ್ಟಾರ್

ರೋರಿಂಗ್ ಸ್ಟಾರ್ ಗೆ ಸುದೀಪ್ ವಿಶ್
ಇದೀಗ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ರೋರಿಂಗ್ ಸ್ಟಾರ್ ಶ್ರೀಮುರಳಿಗೆ ವಿಶ್ ಮಾಡಿದ್ದಾರೆ. ಜನ್ಮದಿನದ ಶುಭಾಶಯ ತಿಳಿಸುವ ಜೊತೆಗೆ ಬಘೀರ ಸಿನಿಮಾದ ಬಗ್ಗೆಯೂ ಹೇಳಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಶ್ರೀಮುರಳಿಗೆ ಸಂದೇಶ ರವಾನಿಸಿರುವ ಶ್ರೀಮುರಳಿ, 'ಹುಟ್ಟುಹಬ್ಬದ ಶುಭಾಶಯಗಳು ಶ್ರೀಮುರಳಿ. ಯಾವಾಗಲು ಸಂತೋಷವಾಗಿರಿ ಎಂದು ಹಾರೈಸುತ್ತೇನೆ. ಬಘೀರ ಲುಕ್ ಅದ್ಭುತವಾಗಿದೆ' ಎಂದು ಹೇಳಿದ್ದಾರೆ.

ಮದಗಜ ಟೀಸರ್ ರಿಲೀಸ್
ಅಭಿಮಾನಿಗಳು ಸುದೀಪ್ ಮತ್ತು ಶ್ರೀಮುರಳಿ ಫೋಟೋಗಳನ್ನು ಶೇರ್ ಮಾಡಿ, ಹುಟ್ಟುಹಬ್ಬ ಶುಭಾಶಯ ತಿಳಿಸುತ್ತಿದ್ದಾರೆ. ಶ್ರೀಮುರಳಿ ಹುಟ್ಟುಹಬ್ಬದ ಪ್ರಯುಕ್ತ ಇಂದು ಮದಗಜ ಚಿತ್ರದ ಫಸ್ಟ್ ಲುಕ್ ಟೀಸರ್ ರಿಲೀಸ್ ಆಗಿದೆ. ಈ ಸಿನಿಮಾದಲ್ಲೂ ಶ್ರೀಮುರಳಿ ಮಾಸ್ ಲುಕ್ ನಲ್ಲಿ ಮಿಂಚಿದ್ದಾರೆ.
ಮಹೇಶ್ ಬಾಬು ಟು ಶ್ರೀಮುರಳಿ: 2020ರಲ್ಲಿ ಘೋಷಣೆಯಾದ ಬಿಗ್ಗೆಸ್ಟ್ ಸಿನಿಮಾಗಳು

ಸೂರಿ ನಿರ್ದೇಶನದಲ್ಲಿ ಬಘೀರ
ಶ್ರೀಮುರಳಿ ನಟನೆಯ ಬಘೀರ ಸಿನಿಮಾದ ಲುಕ್ ಎಲ್ಲರ ಕಣ್ಣುಕುಕ್ಕುತ್ತಿದೆ. ಫಸ್ಟ್ ಲುಕ್ ನಲ್ಲಿ ಮುರಳಿ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ಗೊತ್ತಾಗುತ್ತಿದೆ. ಈ ಸಿನಿಮಾಗೆ ಡಾ. ಸೂರಿ ನಿರ್ದೇಶನ ಮಾಡುತ್ತಿದೆ. ಹೊಂಬಾಳೆ ಫಿಲ್ಸ್ಮ್ ನ 8ನೇ ಸಿನಿಮಾ ಇದಾಗಿದೆ. ಈಗಾಗಲೇ ನೇ ಸಿನಿಮಾ ಪ್ರಭಾಸ್ ಜೊತೆ ಮಾಡುವುದಾಗಿ ಅನೌನ್ಸ್ ಮಾಡಿದ್ದಾರೆ.

ಬಘೀರನಿಗೆ ಕಥೆ ಬರೆದ ಪ್ರಶಾಂತ್ ನೀಲ್
ವಿಶೇಷ ಎಂದರೆ ಬಘೀರ ಸಿನಿಮಾದ ಕಥೆಯನ್ನು ಪ್ರಶಾಂತ್ ನೀಲ್ ಬರೆದ್ದಾರೆ. 'ನನ್ನ ಮೊದಲ ನಿಜವಾದ ಮಾಸ್ ಹೀರೋ ಶ್ರೀಮುರಳಿಗಾಗಿ ಶೌರ್ಯದ ಕಥೆಯನ್ನು ಬರೆದಿದ್ದೀನಿ. ಹುಟ್ಟುಹಬ್ಬದ ಶುಭಾಶಯಗಳು ಶ್ರೀಮುರಳಿ' ಎಂದು ಪ್ರಶಾಂತ್ ನೀಲ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.