Don't Miss!
- News Rain: ಬರದಿಂದ ತತ್ತರಿಸಿದ ಮಲೆನಾಡು: ಕೊಪ್ಪ ಮೇರುತಿ ಶಿಖರದಲ್ಲಿ ವರುಣನಿಗೆ ಹೋಮ-ಹವನ
- Technology Tecno: ಬಹುನಿರೀಕ್ಷಿತ ಟೆಕ್ನೋ ಪೋವಾ 6 ಪ್ರೊ ಲಾಂಚ್! 12GB RAM.. 6000mAh ಬ್ಯಾಟರಿ.. ಬೆಲೆ ಎಷ್ಟು?
- Sports CSK vs RCB: ದಾಖಲೆಯ ಪುಟ ಸೇರಿದ ಉದ್ಘಾಟನಾ ಪಂದ್ಯ: 16.8 ಕೋಟಿ ಜನರಿಂದ ವೀಕ್ಷಣೆ
- Finance ಮೃತರ ಖಾತೆಯಲ್ಲಿರುವ ಹಣವನ್ನು ಕುಟುಂಬಸ್ಥರು ಡ್ರಾ ಮಾಡಬಹುದಾ, ಬ್ಯಾಂಕ್ ನಿಯಮಾವಳಿ ಏನು ಹೇಳುತ್ತೆ?
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಿಯಲ್ ಸ್ಟಾರ್, ಚಾಲೆಂಜಿಂಗ್ ಸ್ಟಾರ್ ಗೆ ವಿಶ್ ಮಾಡಿದ ಕಿಚ್ಚ
ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ನಟರು ಇದೀಗ ಒಬ್ಬರಿಗೊಬ್ಬರು ಹತ್ತಿರವಾಗುತ್ತಿದ್ದಾರೆ ಅಂದ್ರೆ ಅದು ಕನ್ನಡ ಚಿತ್ರರಂಗದಲ್ಲಿ ಒಂದೊಳ್ಳೆ ಬೆಳವಣಿಗೆ ಅಂತಾನೇ ಹೇಳಬಹುದು.
ಅಂದಹಾಗೆ ನಾವೇಕೆ ಹೀಗನ್ನುತ್ತಿದ್ದೇವೆ ಅಂದ್ರೆ, ಕನ್ನಡ ನಟ ಅಭಿನವ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಸ್ಯಾಂಡಲ್ ವುಡ್ ನ ಮತ್ತಿಬ್ಬರು ಸ್ಟಾರ್ ನಟರಿಗೆ ಅವರ ಬಿಡುಗಡೆಯ ಹಂತದಲ್ಲಿರುವ ಚಿತ್ರ ಹಾಗೂ ಆಡಿಯೋ, ಟ್ರೈಲರ್ ಗಳಿಗೆ ಬೆಸ್ಟ್ ವಿಶ್ ಅಂತ ಟ್ವಿಟ್ಟರ್ ಮೂಲಕ ಶುಭಾಶಯ ಕೋರಿದ್ದಾರೆ.['ಉಪ್ಪಿ-2' ಸವಿಯೋಕೆ ನಾಳೆಯೇ ಟಿಕೆಟ್ ಕೊಂಡುಕೊಳ್ಳಿ]
ಹೌದು ಕಿಚ್ಚ ಸುದೀಪ್ ಅವರು ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಹುನಿರೀಕ್ಷಿತ ಚಿತ್ರಗಳಿಗೆ ಆಲ್ ದ ಬೆಸ್ಟ್ ಹೇಳಿದ್ದಾರೆ.
ಆಗಸ್ಟ್ 14 ರಂದು ಭರ್ಜರಿಯಾಗಿ ತೆರೆ ಮೇಲೆ ಅಪ್ಪಳಿಸಲಿರುವ ಉಪೇಂದ್ರ ನಿರ್ದೇಶಿಸಿ ನಟಿಸುತ್ತಿರುವ 'ಉಪ್ಪಿ 2' ಚಿತ್ರಕ್ಕೆ ಕಿಚ್ಚ ಸುದೀಪ್ ಅವರು ತಮ್ಮ ಮೈಕ್ರೋ ಬ್ಲಾಗಿಂಗ್ ತಾಣವಾದ ಟ್ವಿಟ್ಟರ್ ನಲ್ಲಿ ಶುಭ ಹಾರೈಸಿದ್ದಾರೆ.[ಉಪ್ಪಿ Unknownu ನಾನೇಶ್ವರನಾದ ಟೀಸರ್ ನೋಡಿ]
Wshn
Uppi
too
for
his
Uppi2..have
always
been
a
fan
of
his
direction.
Glad
he
is
bk
wth
it.
Looking
frwrd
fr
many
more
from
him.Bst
wshs
Sir
—
Kichcha
Sudeepa
(@KicchaSudeep)
August
11,
2015
"ಉಪ್ಪಿ ಅವರ ನಿರ್ದೇಶನಕ್ಕೆ ನಾನು ಯಾವಾಗ್ಲೂ ಒಬ್ಬ ದೊಡ್ಡ ಅಭಿಮಾನಿ, ಅವರು ಈ ಚಿತ್ರದ ಮೂಲಕ ಮತ್ತೆ ನಿರ್ದೇಶನಕ್ಕೆ ವಾಪಸಾಗಿರುವುದು ತುಂಬಾ ಖುಷಿಯಾಗ್ತಿದೆ. ಉಪೇಂದ್ರ ಅವರನ್ನು ಮತ್ತೊಮ್ಮೆ ಈ ಥರಾ ನೋಡಿ ತುಂಬಾ ಸಂತೋಷವಾಗುತ್ತಿದೆ, ನಿಮ್ಮ ಚಿತ್ರಕ್ಕೆ ಶುಭಹಾರೈಕೆಗಳು ಸರ್" ಅಂತ ಟ್ವೀಟ್ ಮಾಡಿದ್ದಾರೆ.[ಚಾಲೆಂಜಿಂಗ್ ಸ್ಟಾರ್ 'ಮಿಸ್ಟರ್ ಐರಾವತ' ಟೀಸರ್ ಔಟ್]
ಜೊತೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಹುನಿರೀಕ್ಷಿತ ಚಿತ್ರ 'ಮಿಸ್ಟರ್ ಐರಾವತ'ದ ಆಡಿಯೋ ಹಾಗು ಟ್ರೈಲರ್ ಆಗಸ್ಟ್ 16ರಂದು ಬಿಡುಗಡೆಯಾಗುತ್ತಿದ್ದು, ಅದಕ್ಕೂ ಕಿಚ್ಚ ಸುದೀಪ್ ಅವರು ದರ್ಶನ್ ಹಾಗೂ ಇಡೀ 'ಐರಾವತ' ಚಿತ್ರತಂಡಕ್ಕೆ ಟ್ವಿಟ್ಟರ್ ಮೂಲಕ ಶುಭಹಾರೈಸಿದ್ದಾರೆ.
Best
wshs
to
Airavatha
team
fr
their
Audio
release...
may
this
film
break
all
records
n
come
out
more
victorious
than
ever..
Cheers
D.
—
Kichcha
Sudeepa
(@KicchaSudeep)
August
11,
2015
"ಐರಾವತ' ಚಿತ್ರದ ಆಡಿಯೋ ಬಿಡುಗಡೆ ಮಾಡುತ್ತಿರುವ ಚಿತ್ರತಂಡಕ್ಕೆ ಪ್ರೀತಿಯ ಶುಭ ಹಾರೈಕೆಗಳು, ಈ ಚಿತ್ರ ಹಿಂದಿನ ಎಲ್ಲಾ ರೆಕಾರ್ಡ್ ಗಳನ್ನು ಮುರಿಯಲಿ, ಮುಂದಿನ ದಿನಗಳಲ್ಲಿ ಈ ಚಿತ್ರ ಯಶಸ್ಸಿನ ಉತ್ತುಂಗಕ್ಕೇರಲಿ, ಚಿಯರ್ ಅಪ್ ಡಿ(ದರ್ಶನ್)" ಅಂತ ಟ್ವೀಟ್ ಮೂಲಕ ವಿಶ್ ಮಾಡಿದ್ದಾರೆ.[ಆಗಸ್ಟ್ 16ರಂದು ದರ್ಶನ್ ಅಭಿಮಾನಿಗಳಿಗೆ ಸಿಹಿಸುದ್ದಿ ಕಾದಿದೆ!]
ಒಟ್ನಲ್ಲಿ ಸ್ಟಾರ್ ವಾರ್ ಅಂತ ಸುಖಾ-ಸುಮ್ಮನೆ ಪುಕಾರು ಎಬ್ಬಿಸುವ ಕೆಲವಾರು ಮಂದಿಗೆ, ಅಂತಹ ವಿಚಾರ ಏನಿಲ್ಲ, ಸ್ಟಾರ್ ಗಳು ಎಲ್ಲರೂ ಒಗ್ಗಟ್ಟಾಗಿದ್ದಾರೆ ಅನ್ನೋದನ್ನ ತೋರಿಸೋಕೆ ಇದೊಂದು ಉತ್ತಮ ನಿದರ್ಶನ ಅಂತಾನೇ ಹೇಳಬಹುದು.