Don't Miss!
- News ಹಾಸನದಲ್ಲಿ ಬಿಜೆಪಿಯ ಸಹಕಾರವಿಲ್ಲ, ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ: ಮತ್ತೆ ಸಂಕಷ್ಟದಲ್ಲಿ ದಳಪತಿ
- Lifestyle ಮಳೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ ಕೊಟ್ಟ ಹವಾಮಾನ ಇಲಾಖೆ..!
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Technology ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಒಂದು ತುತ್ತು ಒಂದು ಜೀವವನ್ನ ಉಳಸೋದಾದ್ರೆ ಅ ಮೊದಲನೇ ತುತ್ತು ನನ್ನದಾಗಲಿ'- ಸುದೀಪ್
ಕನ್ನಡ ನಟ ಕಿಚ್ಚ ಸುದೀಪ್ ಆ ಸಿನಿಮಾದಲ್ಲಿ ನಟಿಸುತ್ತಿದ್ದಾರೆ, ಈ ಸ್ಟಾರ್ ಜೊತೆ ಸ್ಕ್ರೀನ್ ಶೇರ್ ಮಾಡ್ತಿದ್ದಾರೆ, ಬಿಗ್ ಬಾಸ್ ಮಾಡ್ತಿದ್ದಾರೆ, ಕ್ರಿಕೆಟ್ ಆಡ್ತಿದ್ದಾರೆ ಎನ್ನುವುದು ಸಾಮಾನ್ಯ. ಇಷ್ಟೆಲ್ಲದರ ನಡುವೆಯೂ ಮಹತ್ವದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ ಎನ್ನುವುದು ಮೆಚ್ಚುವಂತಹದ್ದು.
Recommended Video
ಹೌದು, ಸುದೀಪ್ ಅವರ ಜೊತೆಯಲ್ಲಿರುವ ಸ್ನೇಹಿತರು, ಅಭಿಮಾನಿಗಳು ಹಾಗೂ ಆಪ್ತರು ''ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ'' ಮೂಲಕ ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದಾರೆ. ಇದಕ್ಕೆ ಅಭಿನಯ ಚಕ್ರವರ್ತಿ ಮಾರ್ಗದರ್ಶಕರಾಗಿದ್ದಾರೆ.
ಹಾರಲಿದ್ದ ಹೆಲೆಕಾಪ್ಟರ್ ಬಳಿ ಓಡಿಬಂದು ಆತಂಕ ತಂದ ಸುದೀಪ್ ಅಭಿಮಾನಿ
ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ಮೂಲಕ ಬಡಜನರಿಗೆ, ವಿದ್ಯಾರ್ಥಿಗಳಿಗೆ, ವಿಶೇಷ ಚೇತನರಿಗೆ, ಮೂಕಪ್ರಾಣಿಗಳಿಗೆ ಸಹಾಯ ಮಾಡುವ ಕೆಲಸ ಆಗ್ತಿದೆ. ಕಷ್ಟ ಎಂದು ಬಂದವರಿಗೆ, ಚಿಕಿತ್ಸೆಗೆಂದು ಬಂದವರಿಗೆ ಸುದೀಪ್ ಚಾರಿಟೇಬಲ್ ಸೊಸೈಟಿ ನೆರವಾಗಿದೆ.
ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿಗೆ ನಾಲ್ಕು ವರ್ಷ. ಕಳೆದ ನಾಲ್ಕು ವರ್ಷದಿಂದಲೂ ಅನೇಕ ಕೆಲಸಗಳನ್ನು ತೆರೆಮರೆಯಲ್ಲಿ ಮಾಡಿಕೊಂಡು ಬಂದಿದೆ. ಇದೀಗ, ನಾಲ್ಕನೇ ವರ್ಷದ ಪ್ರಯುಕ್ತ ಫೆಬ್ರವರಿ 14 ರಂದು ಕೆಲವು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಿದೆ.
* ಬೀದಿ ಬದಿಯಲ್ಲಿ ಪ್ರಾಣಿಗಳಿಗೆ ಮತ್ತು ಪಕ್ಷಿಗಳಿಗೆ ಒಂದು ತುತ್ತು ಅನ್ನ ನೀಡುವ ಮೂಲಕ ನೀರನ್ನು ಕೊಡುವ ಮೂಲಕ...
* ಪಂಜರದಲ್ಲಿ ಬಂದಿಯಾಗಿರುವ ಪಕ್ಷಿಗಳನ್ನು ಬಿಡುಗಡೆಗೊಳಿಸುವ ಮೂಲಕ...
* ಗೋಶಾಲೆ ಭೇಟಿ ನೀಡುವ ಮೂಲಕ ಸಂಭ್ರಮಿಸಲು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ನಿರ್ಧರಿಸಿದೆ.
ಫೆಬ್ರವರಿ 14 ರಂದು ಪ್ರೇಮಿಗಳ ದಿನ ಅಂತಾರೆ. ಆದರೆ, ಪುಲ್ವಾಮ ದಾಳಿಯಲ್ಲಿ ದೇಶದ ಅನೇಕ ಸೈನಿಕರು ಹುತಾತ್ಮರಾದ ದಿನ ಅದು. ಆ ವೀರಾ ಸೈನಿಕರಿಗೆ ಶ್ರದ್ಧಾಂಜಲಿ ಸಲ್ಲಿಸುವುದು ಪ್ರತಿಯೊಬ್ಬ ಭಾರತೀಯರ ಕರ್ತವ್ಯ ಎಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ಪ್ರಕಟಿಸಿದೆ.
ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿಯ ಮಹತ್ವದ ಕೆಲಸಗಳ ಬಗ್ಗೆ ಸುದೀಪ್ ಸಹ ಟ್ವಿಟ್ಟರ್ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ''ಒಂದು ತುತ್ತು ಒಂದು ಜೀವವನ್ನ ಉಳಸೋದಾದ್ರೆ ಅ ಮೊದಲನೇ ತುತ್ತು ನನ್ನದಾಗಲಿ'' ಎಂದಿದ್ದಾರೆ.