Don't Miss!
- Automobiles Tata Curvv Vs Citroen Basalt: ಟಾಟಾಗೆ ಸೆಡ್ಡು ಹೊಡೆಯುವ ತಾಕತ್ತಿದೆಯೇ?
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂಧ ವ್ಯಕ್ತಿಯ ಬಾಳಿಗೆ ಬೆಳಕಾದ ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ
ನಟ ಸುದೀಪ್ ಮಾಡಿರುವ, ಮಾಡುತ್ತಿರುವ ಸಮಾಜ ಸೇವೆಗೆ ಪೀಠಿಕೆ ಅಗತ್ಯವಿಲ್ಲ. ಅವರ ಸಮಾಜ ಸೇವೆಗಳ ಬಗ್ಗೆ ಆಗಾಗ್ಗೆ ಸುದ್ದಿಗಳು ಪ್ರಕಟವಾಗುತ್ತಲೇ ಇರುತ್ತವೆ.
ಇದೀಗ ಕಿಚ್ಚ ಸುದೀಪ್ ಬೆಂಬಲದೊಂದಿಗೆ ಅವರ ಅಭಿಮಾನಿಗಳು ನಿರ್ವಹಿಸುತ್ತಿರುವ 'ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ' ಅಂಧ ವ್ಯಕ್ತಿಯೊಬ್ಬನ ಬಾಳಿಗೆ ಬೆಳಕಾಗುವ ಪ್ರಯತ್ನ ಮಾಡಿದ್ದಾರೆ.
ಗುಲ್ಬರ್ಗ ಜಿಲ್ಲೆಯ ಔರಾದ್ ಗ್ರಾಮದ ಅಂಧ ಯುವಕ ಸಾಯಿನಾಥ್ ಗೆ ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ ವತಿಯಿಂದ ನೆರವು ದೊರೆತಿದೆ. ನೆರವಿನ ರೂಪದಲ್ಲಿ ಹಣವನ್ನು ನಿರಾಕರಿಸಿದ ಯುವಕ, ತನಗೆ ಒಂದು ಮೈಕ್ ಹಾಗೂ ಒಂದು ಸ್ಪೀಕರ್ ಬೇಕೆಂದು ಕೇಳಿದ್ದಾನೆ.
ಆತನ ಆಸೆಯಂತೆಯೇ ಒಂದು ಮೈಕ್ ಹಾಗೂ ಸ್ಪೀಕರ್ ಅನ್ನು ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ ಸದಸ್ಯರು ಒದಗಿಸಿದ್ದಾರೆ. ಆ ಮೈಕ್ ಹಾಗೂ ಸ್ಪೀಕರ್ ಮೂಲಕ ಹಾಡುಗಳನ್ನು ಹಾಡಿ ತಾನು ಜೀವನಕ್ಕೆ ಹಣ ಗಳಿಸುವುದಾಗಿ ಸಾಯಿನಾಥ್ ಹೇಳಿದ್ದಾನೆ.
ಉತ್ತಮವಾಗಿ ಹಾಡು ಹೇಳುವ ಸಾಯಿನಾಥ್, ಆ ಮೈಕ್ ಹಾಗೂ ಸ್ಪೀಕರ್ ಮೂಲಕ ಜೀವನಕ್ಕೆ ಹಣ ಗಳಿಸುವ ಉಮೇದು ಹೊಂದಿದ್ದಾನೆ. ಆತನ ಜೀವನ ಸುಗಮವಾಗಿ ನಡೆಯಲು ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ ನೆರವಾಗಿದೆ. ಈ ಹಿಂದೆ ಸಹ ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿಯು ಈ ರೀತಿಯ ಹಲವು ಕಾರ್ಯಗಳನ್ನು ಮಾಡಿದೆ.
Recommended Video
ಕೆಲವು ದಿನಗಳ ಹಿಂದೆಯಷ್ಟೆ ಸುದೀಪ್ ಅವರು ಚಾಮುಂಡೇಶ್ವರಿ ದೇವಾಲಯಕ್ಕೆ ಬಂದಾಗ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ವ್ಯಕ್ತಿಗೆ ನೆರವಾಗಿದ್ದರು.