ಕಟೀಲು ದೇವಾಲಯದಲ್ಲಿ ಅಭಿಮಾನದ ಅಲೆಯಲ್ಲಿ ಮಿಂದೆದ್ದ ಕಿಚ್ಚ ಸುದೀಪ

ಸ್ಯಾಂಡಲ್‌ವುಡ್ ಬಿಗ್ ಬಾಸ್ ಕಿಚ್ಚ ಸುದೀಪ್ ಟೆಂಪಲ್ ರನ್ ಶುರು ಮಾಡಿದ್ದಾರೆ. 'ವಿಕ್ರಾಂತ್ ರೋಣ' ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ಸುದೀಪ್ ಹೊಸ ಸಿನಿಮಾವನ್ನು ಇನ್ನೂ ಘೋಷಣೆ ಮಾಡಿಲ್ಲ. ರಿಯಾಲಿಟಿ ಶೋ ಬಿಗ್ ಬಾಸ್ ನಿರೂಪಣೆಯಲ್ಲಿ ಬ್ಯುಸಿಯಾಗಿದೆ. ಈ ಮಧ್ಯೆ ದೇವಸ್ಥಾನಗಳಿಗೂ ಭೇಟಿ ನೀಡುತ್ತಿದ್ದಾರೆ.

ಕಿಚ್ಚ ಸುದೀಪ್ ಇಂದು (ಡಿಸೆಂಬರ್ 4) ಮಂಗಳೂರಿನ ಸುಪ್ರಸಿದ್ಧ ಕಟೀಲು ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಬಿಗ್ ಬಾಸ್ ಶೋ ಮುಗಿಸಿದ ಕಾರ್ಯಕ್ರಮದ ನಿಮಿತ್ತ ಮಂಗಳೂರಿಗೆ ತೆರಳಿದ್ದ ಸುದೀಪ್ ಕಟೀಲು ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದವನ್ನು ಪಡೆದಿದ್ದಾರೆ.

ಕಟೀಲು ದೇವಸ್ಥಾನಕ್ಕೆ ಸುದೀಪ್ ಭೇಟಿ

ಕಟೀಲು ದೇವಸ್ಥಾನಕ್ಕೆ ಸುದೀಪ್ ಭೇಟಿ

ಸುದೀಪ್ ಹಾಗೂ ಪತ್ನಿ ಪ್ರಿಯಾ ಸುದೀಪ್ ಇಬ್ಬರೂ ಮಂಗಳೂರಿಗೆ ಆಗಮಿಸಿದ್ದಾರೆ. ಕಟೀಲು ದುರ್ಗಾಪರಮೇಶ್ವರಿ ದೇವಳ ಶಿಕ್ಷಣ ಸಂಸ್ಥೆಗಳ ಸಂಯೋಜನೆಯಲ್ಲಿ ಭ್ರಮರ- ಇಂಚರ ನುಡಿಹಬ್ಬ ಕಾರ್ಯಕ್ರಮ ನಡೆಯುತ್ತಿದೆ. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕಿಚ್ಚ ಸುದೀಪ್ ಆಗಮಿಸಿದ್ದಾರೆ. ಈ ವೇಳೆ ಮಂಗಳೂರಿನ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದವನ್ನು ಪಡೆದಿದ್ದಾರೆ.

ದೇವಸ್ಥಾನದಲ್ಲಿ ಅಭಿಮಾನದ ಅಲೆ

ದೇವಸ್ಥಾನದಲ್ಲಿ ಅಭಿಮಾನದ ಅಲೆ

ಕಿಚ್ಚ ಸುದೀಪ್ ಹಾಗೂ ಪತ್ನಿ ಪ್ರಿಯಾ ಕಟೀಲು ದೇವಸ್ಥಾನಕ್ಕೆ ಭೇಟಿ ನೀಡುತ್ತಿರುವ ವಿಷಯ ಅಭಿಮಾನಿಗಳು ಮುಟ್ಟಿದೆ. ತಕ್ಷಣವೇ ಕಿಚ್ಚ ಸುದೀಪ್ ನೋಡಿ ಅಭಿಮಾನಿಗಳು ಮುಗಿಬಿದ್ದಿದ್ದರು. ದೇವಸ್ಥಾನದಲ್ಲಿ ದೇವಿಯ ದರ್ಶನ ಪಡೆದ ಬಳಿಕ ಅಭಿಮಾನಿಗಳ ಅಭಿಮಾನದ ಅಲೆಯಲ್ಲಿ ತೇಲಾಡಿದ್ರು. ಇದೇ ವೇಳೆದ ದೇವಸ್ಥಾನದ ಪ್ರಮುಖ ಅರ್ಚಕರು ಕಿಚ್ಚ ಸುದೀಪ್‌ರನ್ನು ಸನ್ಮಾನಿಸಿ, ಕಟೀಲು ದುರ್ಗಾಪರಮೇಶ್ವರಿಯ ಫೋಟೊ ನೀಡಿದರು.

ಸುದೀಪ್ ಮುಂದಿನ ಸಿನಿಮಾ ಯಾವುದು?

ಸುದೀಪ್ ಮುಂದಿನ ಸಿನಿಮಾ ಯಾವುದು?

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಯಾವುದು ಅನ್ನೋದು ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. 'ವಿಕ್ರಾಂತ್ ರೋಣ' ಗೆಲುವಿನ ಬಳಿಕ ಸುದೀಪ್ ಯಾರಿಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಅನ್ನೋ ಸುಳಿವು ಇನ್ನೂ ಸಿಕ್ಕಿಲ್ಲ. ಆದರೆ ಮೂಲಗಳ ಪ್ರಕಾರ, ತಮಿಳು ಪ್ರತಿಷ್ಠಿತ ಸಂಸ್ಥೆ ಲೈಕಾ ಪ್ರೊಡಕ್ಷನ್‌ಗೆ ಕಿಚ್ಚ ಸುದೀಪ್ ಜೊತೆ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ ಅನ್ನೋ ಸುದ್ದಿ ಹರಿದಾಡುತ್ತಿದೆ. ಎರಡು ಭಾಷೆಯಲ್ಲಿ ಏಕಕಾಲಕ್ಕೆ ನಿರ್ಮಾಣಗೊಳ್ಳಲಿದ್ದು, ಐದು ಭಾಷೆಯಲ್ಲಿ ಬಿಡುಗಡೆಯಾಗಲಿದೆ ಅನ್ನೋ ಗುಸು ಗುಸು ಶುರುವಾಗಿದೆ. ಆದರೆ, ಸುದೀಪ್ ಹಾಗೂ ಲೈಕಾ ಸಂಸ್ಥೆ ಈ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಿಲ್ಲ.

ಬಿಗ್ ಬಾಸ್ ಮುಗಿದ ಬಳಿಕ ಹೊಸ ಸಿನಿಮಾ?

ಬಿಗ್ ಬಾಸ್ ಮುಗಿದ ಬಳಿಕ ಹೊಸ ಸಿನಿಮಾ?

ಸ್ಯಾಂಡಲ್‌ವುಡ್‌ನಲ್ಲಿ ಹರಿದಾಡುತ್ತಿರುವ ಮಾಹಿತಿ ಪ್ರಕಾರ, ಬಿಗ್ ಬಾಸ್ ರಿಯಾಲಿಟಿ ಶೋ ಮುಗಿದ ಬಳಿಕ ಹೊಸ ಸಿನಿಮಾವನ್ನು ಘೋಷಣೆ ಮಾಡುವ ಸಾಧ್ಯತೆಯಿದೆ. ಸದ್ಯ ಸುದೀಪ್ ಬಿಗ್ ಬಾಸ್ ನಿರೂಪಣೆಯಲ್ಲಿ ಬ್ಯುಸಿಯಾಗಿದ್ದಾರೆ. ಜೊತೆ ಹೊಸ ಹೊಸ ಕಥೆಗಳನ್ನು ಕೇಳುತ್ತಿದ್ದಾರೆ ಅನ್ನೋ ಮಾತು ಕೇಳಿಬರುತ್ತಿದೆ. ಈ ಮಧ್ಯೆ ಹೊಸ ಹೊಸ ಪ್ರಾಜೆಕ್ಟ್ ಬಗ್ಗೆ ಗುಸು ಗುಸು ಸುದ್ದಿಗಳು ಹರಿದಾಡುತ್ತಿವೆ. ಇವುಗಳಲ್ಲಿ ಸುದೀಪ್ ಯಾವುದಕ್ಕೆ ಗ್ರೀನ್ ಸಿಗ್ನಲ್ ಕೊಡುತ್ತಾರೆ ಅನ್ನೋದು ಇನ್ನು ಕೆಲವು ದಿನಗಳಲ್ಲಿ ಹೊರಬೀಳುವ ಸಾಧ್ಯತೆಯಿದೆ.

More from Filmibeat

English summary
Kiccha Sudeepa Visits Kateel Duragaparameshwari Temple In Mangalore, Know More.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X