Don't Miss!
- News 2024ರ ಲೋಸಕಭೆ ಚುನಾವಣೆಗೆ ಮತ ಹಾಕುವುದು ಹೇಗೆ?
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದಿಗಂತ್, ಕೋಡಿಗೆ ರಮ್ಯಾ 'ಗ್ರೀನ್ ಸಿಗ್ನಲ್' ಸಿಕ್ಕಿಲ್ಲ
ತೆಲುಗು ಚಿತ್ರಗಳ ನಿರ್ದೇಶಕ ಕೋಡಿ ರಾಮಕೃಷ್ಣ ಕನ್ನಡದಲ್ಲಿ ನಿರ್ದೇಶಿಸಲಿರುವ ಚಿತ್ರಕ್ಕೆ ಭರದಿಂದ ಸಿದ್ಧತೆಗಳು ನಡೆಯುತ್ತಿವೆ. ಬರುವ ತಿಂಗಳು ಜೂನ್ 2012 ರಲ್ಲಿ ಸೆಟ್ಟೇರಲಿರುವ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿರುವ ಕೋಡಿ ರಾಮಕೃಷ್ಣ, ಸದ್ಯಕ್ಕೆ ತೆಲುಗು ಚಿತ್ರ ಬಾಬ ಸತ್ಯ ಸಾಯಿ ಎಂಬ ಚಿತ್ರ ನಿರ್ದೇಶದಲ್ಲಿ ಬಿಜಿಯಾಗಿದ್ದಾರೆ. ಅದನ್ನು ಮುಗಿಸಿ ತಕ್ಷಣ ಕನ್ನಡ ಚಿತ್ರದಲ್ಲಿ ತೊಡಗಿಸಿಕೊಳ್ಳುವುದಾಗಿ ಅವರು ಹೇಳಿದ್ದಾರೆ.
ಕೋಡಿ ನಿರ್ದೇಶನದ ಕನ್ನಡ ಚಿತ್ರದಲ್ಲಿ ದಿಗಂತ್ ನಾಯಕ ಎನ್ನುವುದು ಈಗಾಗಲೇ ಪಕ್ಕಾ ಆಗಿದ್ದರೂ ನಾಯಕಿ ಪಕ್ಕಾ ಆಗಿಲ್ಲ. ರಮ್ಯಾ ನಾಯಕಿಯಾಗಬೇಕೆಂಬುದು ಚಿತ್ರತಂಡದ ಅಭಿಪ್ರಾಯ. ಆದರೆ ಅದಕ್ಕೆ ರಮ್ಯಾ ಇನ್ನೂ ಓಕೆ ಅಂದಿಲ್ಲ. ಕಠಾರಿವೀರದ ಪ್ರಚಾರಕಾರ್ಯದಲ್ಲಿ ಬಿಜಿಯಾಗಿರುವ ರಮ್ಯಾ ಇನ್ನು ಸ್ವಲ್ಪ ದಿನಗಳಲ್ಲೇ ಕೋಡಿ ಚಿತ್ರಕ್ಕೆ ಗ್ರೀನ್ ಸಿಗ್ನಲ್ ನೀಡುತ್ತಾರೆ ಎನ್ನಲಾಗುತ್ತಿದೆ.
ಮೂರು ವರ್ಷಗಳ ಹಿಂದೆ ತೆಲುಗಿನಲ್ಲಿ ಕೋಡಿ ರಾಮಕೃಷ್ಣ ನಿರ್ದೇಶಿಸಿದ್ದ 'ಅರುಂಧತಿ' ಸೂಪರ್ ಹಿಟ್ ಆಗಿದ್ದಷ್ಟೇ ಅಲ್ಲ, ಕನ್ನಡದ ಬೆಡಗಿ ಅನುಷ್ಕಾ ಶೆಟ್ಟಿಗೆ ಸ್ಟಾರ್ ವ್ಯಾಲ್ಯೂ ತಂದುಕೊಟ್ಟಿದೆ. ಅಷ್ಟೇ ಅಲ್ಲ, ಅವರು ಈಗಾಗಲೇ ನೂರಕ್ಕಿಂತ ಹೆಚ್ಚು ತೆಲುಗು ಚಿತ್ರಗಳನ್ನು ನಿರ್ದೇಶಿಸಿರುವವರು. ಅಂತಹ ನಿರ್ದೇಶಕರಿಗೆ ರಮ್ಯಾ 'ನೋ' ಅನ್ನಲಿಕ್ಕಿಲ್ಲ ಎಂದೇ ಹೇಳಲಾಗುತ್ತಿದೆ. ಸದ್ಯಕ್ಕೆ ರಮ್ಯಾ ಕಡೆಗೇ ಚಿತ್ರತಂಡ ನೋಡುವಂತಾಗಿದೆ. (ಒನ್ ಇಂಡಿಯಾ ಕನ್ನಡ)