Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಮಿಳು ನಟಿ ರಿಯಾಮಿಕಾ ಆತ್ಮಹತ್ಯೆಗೆ ನಿಜವಾದ ಕಾರಣವೇನು?
ಆಕೆ ತಮಿಳು ಚಿತ್ರರಂಗದ ಉದಯೋನ್ಮುಖ ನಟಿ. ಮೂರು ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದಳು. ಆದರೆ, ಇತ್ತೀಚೆಗೆ ಅವಕಾಶ ಸಿಕ್ಕಿರಲಿಲ್ಲ. ಈ ಬಗ್ಗೆ ಸಾಕಷ್ಟು ಚಿಂತಿಸಿ, ಮನನೊಂದಿದ್ದಳು. ಚಿತ್ರರಂಗದಲ್ಲಿ ಆಪ್ತನಾಗಿದ್ದ ಗೆಳೆಯ ಬಳಿ ದುಃಖ ತೋಡಿಕೊಂಡಿದ್ದಳು. ಆದರೆ, ಎಲ್ಲಾ ಕಡೆಯಿಂದ ನೆಗಟಿವ್ ಉತ್ತರ ಬಂದಿದ್ದರಿಂದ ಇನ್ನಷ್ಟು ಕುಗ್ಗಿ ಹೋದಳು. ಕೊನೆಗೆ ತನ್ನ ಬದುಕನ್ನು ಕೊನೆಗಾಣಿಸಿಕೊಂಡಳು.
ರಿಯಾಮಿಕಾಗೆ ಚಿತ್ರಗಳಲ್ಲಿ ನಟಿಸಲು ಸಾಕಷ್ಟು ಅವಕಾಶಗಳು ಸಿಗುತ್ತಿತ್ತು. ಆದರೆ, ಒಂದು ಕೆಟ್ಟ ಚಿತ್ರವನ್ನು ಒಪ್ಪಿಕೊಂಡಿದ್ದರಿಂದ ಆಕೆಯನ್ನು ಚಿತ್ರರಂಗದಿಂದ ದೂರ ಮಾಡಲಾಯಿತು ಎಂಬ ಸುದ್ದಿಯೂ ಇದೆ.
ಕಸಿನ್ ಬ್ರದರ್ ಪ್ರಕಾಶ್ ಜತೆ ಚೆನ್ನೈನ ವಲಸರವಕ್ಕಮ್ ನ ರಾಧಾನಗರದಲ್ಲಿ ರಿಯಾಮಿಕಾ ವಾಸವಾಗಿದ್ದರು. ಪ್ರಕಾಶ್ ಕೂಡಾ ಚಿತ್ರರಂಗದಲ್ಲಿ ಸಹಾಯಕ ನಿರ್ದೇಶಕನಾಗಿ ದುಡಿಯುತ್ತಿದ್ದಾರೆ.
ರಿಯಾಮಿಕಾಗೆ ದಿನೇಶ್ ಎಂಬ ಗೆಳೆಯ ಇದ್ದಾನೆ. ಎಕ್ಸ್ ವಿಡಿಯೋಸ್, ಕುಮಾರನುಕು ಕೊಂಡಾಟ್ಟಮ್ ಮತ್ತು ಅಘೋರಿಯಿನ್ ಅಟ್ಟಮ್ ಮುಂತಾದ ಚಿತ್ರಗಳಲ್ಲಿ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.
ಕೊನೆಯ ಕರೆ ದಿನೇಶ್ ಗೆ ಮಾಡಿದ್ದಳು ರಿಯಾಮಿಕಾ
ವ್ಮಂಗಳವಾರ ತಡರಾತ್ರಿ ರಿಯಾಮಿಕಾ ತನ್ನ ಆಪ್ತ ಸ್ನೇಹಿತ, ದಿನೇಶನಿಗೆ ಸಾಕಷ್ಟು ಬಾರಿ ಕರೆ ಮಾಡಿದ್ದಳು. ಆದರೆ, ಕರೆ ಸ್ವೀಕರಿಸಿರಲಿಲ್ಲ. ಇದರಿಮ್ದ ಬೇಜಾರಾಗಿ, ಮನೆಗೆ ಬಂದು ಹಾಗೆ ಮಲಗಿದ್ದಾಳೆ. ಈ ಬಗ್ಗೆ ಅಣ್ಣ ಪ್ರಕಾಶ್ ಪ್ರಶ್ನಿಸಿದಾಗ, ಏನಿಲ್ಲ ದಣಿವಾಗಿದೆ ಎಂದು ಹೇಳಿದ್ದಾಳೆ. ಮರುದಿನ ಬೆಳಗ್ಗೆ ರಿಯಾಮಿಕಾಳಿಗೆ ದಿನೇಶ್ ವಾಪಸ್ಕರೆ ಮಾಡಿದಾಗ ನಾಟ್ ರೀಚಬಲ್ ಆಗಿದೆ. ತಕ್ಷಣ ಮನೆಗೆ ಬಂದಿದ್ದಾನೆ.
ಬಾಗಿಲು ಒಡೆದು ಒಳಗೆ ಹೋಗಿ ನೋಡಿದ್ದಾರೆ
ಆಕೆಯ ರೂಮಿನ ಬಾಗಿಲು ಬಡಿದರೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಒಳಗಿನಿಂದ ಲಾಕ್ ಆಗಿತ್ತು.ಸಾಕಷ್ಟು ಬಾರಿ ಬಾಗಿಲು ಬಡಿದಿದ್ದಾರೆ. ಆದರೆ, ಬಾಗಿಲು ತೆಗೆಯದಿದ್ದಾಗ ಪ್ರಕಾಶ್ ಕಿಟಕಿಯನ್ನು ಒಡೆದು ಇಣುಕಿದಾಗ, ರಿಯಾಮಿಕಾ ನೇಣಿಗೆ ಶರಣಾಗಿರುವುದು ಕಂಡುಬಂದಿದೆ.
ತಕ್ಷಣ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತ ದೇಹವನ್ನು ವಶಕ್ಕೆ ಪಡೆದಿದ್ದಾರೆ
ಅರ್ಥಿಕ ಸಮಸ್ಯೆ ಎದುರಾಗಿತ್ತು
ಮುರ್ನಾಲ್ಕು ಚಿತ್ರಗಳಲ್ಲಿ ನಟಿಸಿದ್ದ ರಿಯಾಮಿಕಾಗೆ ಎಕ್ಸ್ ರೇಟಿಂಗ್ ಚಿತ್ರವೊಂದರಲ್ಲಿ ನಟಿಸುವ ಅವಕಾಶ ಸಿಕ್ಕಿತ್ತು. ಇದಾದ ಬಳಿಕ ಬರೀ ಅಂಥಾ ಸಿನಿಮಾಗಳ ಆಫರ್ ಬರ ತೊಡಗಿತ್ತು. ಇದು ಆಕೆಗೆ ಕೂಡಾ ಇಷ್ಟವಿರಲಿಲ್ಲ. ಈ ಬಗ್ಗೆ ಮನೆಯಲ್ಲಿ ಅಣ್ಣನ ಜತೆ ಮಾತಿನ ಚಕಮಕಿ ನಡೆಯುತ್ತಿತ್ತು. ಗೆಳೆಯ ದಿನೇಶ್ ಕೂಡಾ, ಸಿನಿಮಾ ಮಾಡುತ್ತಿರು ಕೈಯಲ್ಲಿ ಕಾಸು ಇರಬೇಕು ಎಂದೆಲ್ಲ ಒತ್ತಡ ಹೇರುತ್ತಿದ್ದ ಎಂದು ತಿಳಿದು ಬಂದಿದೆ.
ಪೊಲೀಸರ ಹೇಳಿಕೆ
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೊದಲಿಗೆ ಆಕೆ ಗೆಳೆಯ ದಿನೇಶ್ ನನ್ನು ವಿಚಾರಣೆಗೊಳಪಡಿಸಿದ್ದು ಆತನ ಮೊಬೈಲ್ ಫೋನ್ ವಶಕ್ಕೆ ಪಡೆದುಕೊಂಡಿದ್ದಾರೆ. ರಿಯಾಮಿಕಾ ಫೋನ್, ವಾಟ್ಸಾಪ್ ಚಾಟ್ ಗಳನ್ನು ಪರಿಶೀಲಿಸುತ್ತಿದ್ದಾರೆ. ಆಕೆ ನಟಿಸಿದ ಚಿತ್ರ ತಂಡವನ್ನು ವಿಚಾರಣೆಗೊಳಪಡಿಸುವ ಸಾಧ್ಯತೆಯಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಹೆಚ್ಚಿನ ಮಾಹಿತಿ ಸಿಗಲಿದೆ. ಸೂಸೈಡ್ ನೋಟ್ ಸಿಕ್ಕಿಲ್ಲ. ಆತ್ಮಹತ್ಯೆಗೆ ಕಾರಣ ಎಂಬುದು ಪತ್ತೆ ಹಚ್ಚಲಾಗುವುದು ಎಂದಿದ್ದಾರೆ.