Don't Miss!
- Sports IPL 2024: ಆರ್ಸಿಬಿ ಕಪ್ ಗೆಲ್ಲದಿರಲು ಅತಿಯಾದ ಪಾರ್ಟಿ ಕಾರಣವೇ?; ರೈನಾ ಬಿಚ್ಚಿಟ್ಟ ಸತ್ಯ
- News Bengaluru Heat Wave: ಮಳೆಯ ನಡುವೆ ಮತ್ತೆ ದಾಖಲೆಯ ಗರಿಷ್ಠ ತಾಪಮಾನ: ಶಾಖದ ಅಲೆ ಮುನ್ಸೂಚನೆ
- Automobiles Ola: ಓಲಾದಿಂದ ಕಡಿಮೆ ಬೆಲೆಯ 'ಎಸ್1 ಎಕ್ಸ್' ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ದೊಡ್ಡ ಘೋಷಣೆ.. ಏನದು?
- Technology ನಾಳೆ ವಿವೋದ ಈ ಹೊಸ ಫೋನ್ ಫಸ್ಟ್ ಸೇಲ್!..ಬಜೆಟ್ ಬೆಲೆಗೆ ಲಭ್ಯ!
- Lifestyle ಪ್ರತಿ ಲೀ ಕತ್ತೆ ಹಾಲಿಗೆ ₹5,000..! 20 ಕತ್ತೆಗಳ ಮೂಲಕ ₹2.5 ಕೋಟಿ ವ್ಯವಹಾರ..!
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಟಗರು ಶತದಿನೋತ್ಸವದ ಸಂಭ್ರಮದಲ್ಲಿ ಹೊಸ ಚಿತ್ರ ಅನೌನ್ಸ್
'ಟಗರು' ಈ ವರ್ಷದ ಹಿಟ್ ಲೀಸ್ಟ್ ನಲ್ಲಿ ಸೇರಿಕೊಂಡಿರುವ ಸಿನಿಮಾ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ದುನಿಯಾ ಸೂರಿ ಕಾಂಬಿನೇಶನ್ ಅನ್ನು ಮನಸ್ಸಾರೇ ಕನ್ನಡ ಸಿನಿಮಾ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.
75 ದಿನಗಳನ್ನ ಪೂರೈಸಿ ನೂರುದಿನಗಳತ್ತ ಸಾಗುತ್ತಿರುವ ಟಗರು ಸಿನಿಮಾ ತಂಡ ಚಿತ್ರ ಶತದಿನೋತ್ಸವ ಪೂರೈಸುತ್ತಿರುವ ಸಮಯದಲ್ಲಿ ಸಿನಿಪ್ರಿಯರಿಗೆ ಮತ್ತೊಂದು ಸುದ್ದಿಕೊಟ್ಟಿದೆ. ಅದೇನಪ್ಪಾ ಅಂದರೆ ಟಗರು ಚಿತ್ರತಂಡ ಮತ್ತೆ ಒಂದಾಗಿ ವೀಕ್ಷರ ಮುಂದೆ ಬರಲಿದ್ಯಂತೆ.
ಜಗತ್ತಿನಲ್ಲಿರುವ ತಾಯಂದಿರಿಗೆ ಡಾಲಿಯ ಪ್ರೀತಿಯ ಉಡುಗೊರೆ
ಹೌದು ನಿರ್ಮಾಪಕ ಕೆ ಪಿ ಶ್ರೀಕಾಂತ್ ದುನಿಯಾ ಸೂರಿ ಅವರ ಚಿತ್ರವನ್ನು ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಆದರೆ ಚಿತ್ರದಲ್ಲಿ ನಾಯಕ ಮಾತ್ರ ಕನ್ನಡ ಸಿನಿಮಾರಂಗದ ನಟ ರಾಕ್ಷಸ ಅಂತ ಖ್ಯಾತಿ ಪಡೆದುಕೊಂಡಿರುವ ಸ್ಪೆಷಲ್ ಹೀರೋ ಧನಂಜಯ.
'ಕಾಗೆ ಬಂಗಾರ' ಸಿನಿಮಾ ಪಕ್ಕಕ್ಕಿಟ್ಟು ನಟ ಧನಂಜಯ ಅವರಿಗೆ ದುನಿಯಾ ಸೂರಿ ಚಿತ್ರ ಡೈರೆಕ್ಟ್ ಮಾಡಲು ಮುಂದಾಗಿದ್ದಾರೆ. ಡಾಲಿ ಕೂಡ ಇದಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಅದರ ಬೆನ್ನಲ್ಲೇ ಮತ್ತೊಂದು ಚಿತ್ರ ನಿರ್ಮಾಣ ಮಾಡಲು ಕೆ ಪಿ ಶ್ರೀಕಾಂತ್ ಮನಸ್ಸು ಮಾಡಿದ್ದಾರೆ. ಸದ್ಯ ಧನಂಜಯ ಹಾಗೂ ದುನಿಯಾ ಸೂರಿ ಯಾವ ಚಿತ್ರದಲ್ಲಿ ಭಾಗಿ ಆಗುತ್ತಾರೆ ಎನ್ನುವುದೇ ಕುತೂಹಲ.