Don't Miss!
- News ಅತ್ಯಾಚಾರ ಪ್ರಕರಣ: ಇಬ್ಬರು ಆರೋಪಿಗಳಿಗೆ 20 ವರ್ಷ ಕಠಿಣ ಶಿಕ್ಷೆ, 55,000 ರೂಪಾಯಿ ದಂಡ
- Automobiles ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- Lifestyle ರಸ್ತೆ ಬದಿಯ ಮರಗಳಿಗೆ ಬಣ್ಣ ಏಕೆ ಬಳಿದಿರುತ್ತಾರೆ..? ಕೆವಿನ್ ಪೀಟರ್ಸನ್ಗೆ ಈ ಪ್ರಶ್ನೆ ಕಾಡಿದ್ದೇಕೆ..?
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉಪ್ಪಿ ಬಿಟ್ಟ KPJP ಸ್ಥಿತಿ ಹೇಗಿದೆ? ಚುನಾವಣಾ ಕಣದಲ್ಲಿ ಎಷ್ಟು ಸ್ಪರ್ಧಿಗಳು ಇದ್ದಾರೆ?
Recommended Video
ಅಂದುಕೊಂಡಂತೆ ಆಗಿದ್ದರೆ ರಿಯಲ್ ಸ್ಟಾರ್ ಉಪೇಂದ್ರ ತಮ್ಮ ಕೆಪಿಜೆಪಿ (ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿ) ಪಕ್ಷದಿಂದ ಈ ಬಾರಿಯ ಚುನಾವಣೆಗೆ ಸ್ಪರ್ಧಿ ಮಾಡಬೇಕಿತ್ತು. ಆದರೆ ಉಪ್ಪಿ ಲೆಕ್ಕಾಚಾರವೆಲ್ಲ ಉಲ್ಪಾ ಆಗಿ ಅವರೇ ಆ ಪಾರ್ಟಿಯಿಂದ ಹೊರ ಬಂದರು.
ಕರ್ನಾಟಕ ಚುನಾವಣೆಗೆ ಎಲ್ಲ ಪಕ್ಷಗಳು ಬಿಡುವಿಲ್ಲದೆ ಪ್ರಚಾರ ಮಾಡುತ್ತಿವೆ. ಹೀಗಿರುವಾಗ, ಕೆಪಿಜೆಪಿ ಪಕ್ಷ ಈ ಬಾರಿಯ ಚುನಾವಣೆಗೆ ಯಾವ ರೀತಿ ಸಿದ್ಧವಾಗಿದೆ ಎನ್ನುವ ಕುತೂಹಲ ಮೂಡಿದೆ. ಒಂದು ಕಡೆ ಉಪೇಂದ್ರ ಸಿನಿಮಾದ ಶೂಟಿಂಗ್ ಕೆಲಸಗಳಲ್ಲಿ ಬಿಜಿ ಇದ್ದಾರೆ. ಉಪೇಂದ್ರ ಹೊರ ಬಂದ ಮೇಲೆ ಕೆಪಿಜೆಪಿಯ ಸ್ಥಿತಿ ಹೇಗಿದೆ ಎನ್ನುವ ಪ್ರಶ್ನೆ ಇನ್ನೊಂದು ಕಡೆ ಇದೆ.
ಇಷ್ಟು ದಿನ ಸೈಲೆಂಟ್ ಆಗಿದ್ದ ಉಪೇಂದ್ರ ಬಗ್ಗೆ ಈಗ ಬಂದಿದೆ ಹೊಸ ಬ್ರೇಕಿಂಗ್ ನ್ಯೂಸ್ !
ಅಂದಹಾಗೆ, ಇದೀಗ ತಮ್ಮ ಚುನಾವಣೆಯ ತಯಾರಿಯ ಬಗ್ಗೆ ಸ್ವತಃ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಯ ಸಂಸ್ಥಾಪಕ ಅಧ್ಯಕ್ಷ ಮಹೇಶ್ ಗೌಡ 'ಫಿಲ್ಮಿಬೀಟ್ ಕನ್ನಡ'ದ ಜೊತೆಗೆ ಮಾತನಾಡಿದ್ದಾರೆ. ಮುಂದೆ ಓದಿ...
32 ಕ್ಷೇತ್ರದಿಂದ ಸ್ಪರ್ಧೆ
ಈ ಬಾರಿಯ ಕರ್ನಾಟಕ ಚುನಾವಣೆಯಲ್ಲಿ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿ 32 ಕ್ಷೇತ್ರದಿಂದ ಸ್ಪರ್ಧೆಗೆ ಇಳಿದಿದೆ. ಮೊದಲು 60 ಜನರಿಗೆ ಬಿ ಫಾರಂ ನೀಡಿದ್ದು, ಆಮೇಲೆ 45 ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಆಲೋಚನೆಯಲ್ಲಿ ಇದ್ದರಂತೆ. ಆದರೆ ಕೊನೆಗೆ 32 ಸ್ಪರ್ಧಿಗಳು ಫೈನಲ್ ಆದರಂತೆ.
13 ಜಿಲ್ಲೆಗಳಲ್ಲಿ ಸ್ಪರ್ಧೆ
ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿ ಮುಖ್ಯವಾಗಿ ಬೆಂಗಳೂರನ್ನು ಗಮನ ಹರಿಸಿದೆ. 32 ಅಭ್ಯರ್ಥಿಗಳ ಪೈಕಿ ಬೆಂಗಳೂರಿನ 11 ಕ್ಷೇತ್ರದಲ್ಲಿ ಕೆಪಿಜೆಪಿ ಪಕ್ಷ ಸ್ಪರ್ಧೆ ಮಾಡಲಿದೆ. ಉಳಿದಂತೆ ಮುಖ್ಯವಾಗಿ ತುಮಕೂರುನಲ್ಲಿ 3 ಕ್ಷೇತ್ರ, ಮೈಸೂರು ಮತ್ತು ಮಂಡ್ಯದಲ್ಲಿ ತಲಾ 2 ಹಾಗೂ ದಾವಣಗೆರೆಯ 3 ಕ್ಷೇತ್ರದಿಂದ ಅಭ್ಯರ್ಥಿಗಳು ಚುನಾವಣಾ ಕಣಕ್ಕೆ ಇಳಿದಿದ್ದಾರೆ.
ದೆಹಲಿಯಲ್ಲಿ ಉಪೇಂದ್ರ : 'ಉತ್ತಮ ಪ್ರಜಾಕೀಯ ಪಾರ್ಟಿ' ನೋಂದಣಿ ಪ್ರಕ್ರಿಯೆ
ಡಾಕ್ಟರ್, ಇಂಜಿನಿಯರ್, ಲಾಯರ್ ಸಹ ಇದ್ದಾರೆ
ಕೆಪಿಜೆಪಿ ಪಕ್ಷದ ಅಭ್ಯರ್ಥಿಗಳಲ್ಲಿ ಡಾಕ್ಟರ್, ಇಂಜಿನಿಯರ್, ಲಾಯರ್, ಅಧ್ಯಾಪಕರು ಸಹ ಇದ್ದಾರಂತೆ. ತಮ್ಮ ತಮ್ಮ ಕ್ಷೇತ್ರದ ಬಗ್ಗೆ ಎಲ್ಲ ವಿಷಯವನ್ನು ತಿಳಿದುಕೊಂಡವರಿಗೆ ಟಿಕೆಟ್ ನೀಡಲಾಗಿದೆಯಂತೆ. ಪಕ್ಷದಲ್ಲಿ ಎಲ್ಲರ ಜೊತೆಗೆ ಮಾತುಕತೆ ನಡೆಸಿ ಸರಿ ಎನ್ನಿಸಿದವರಿಗೆ ಅವಕಾಶ ನೀಡಲಾಗಿದೆಯಂತೆ.
ಪ್ರಚಾರ ಚೆನ್ನಾಗಿ ನಡೆಯುತ್ತಿದೆ
ಕೆಪಿಜೆಪಿ ಪಕ್ಷದ ಚುನಾವಣಾ ಪ್ರಚಾರ ಜೋರಾಗಿ ನಡೆಯುತ್ತಿದೆ ಎಂದು ಮಹೇಶ್ ಗೌಡ ತಿಳಿಸಿದ್ದಾರೆ. ಈಗಾಗಲೇ ಅನೇಕ ವಿಧಾನಸಭೆ ಕ್ಷೇತ್ರಗಳಿಗೆ ಹೋಗಿದ್ದು, ಇಂದು ಹುಬ್ಬಳ್ಳಿ ಮತ್ತು ದಾವಣಗೆರೆಯಲ್ಲಿ ಕಾರ್ಯಕ್ರಮ ಮಾಡಲಾಗುವುದಂತೆ. ನಾಳೆ ರಾಣೆಬೆನ್ನೂರಿನಲ್ಲಿ ಪ್ರಚಾರ ಕೆಲಸ ನಡೆಯಲಿದೆ.
ಉಪೇಂದ್ರ ಬಿಟ್ಟ ಮೇಲೆ ಯಾವುದು ಪರಿಣಾಮ ಆಗಿಲ್ಲ
''ಉಪೇಂದ್ರ ಅವರು ನಮ್ಮ ಪಕ್ಷದಿಂದ ಹೊರ ಹೋಗಿರುವುದು ನಮ್ಮ ಪಾರ್ಟಿಗೆ ಯಾವುದೇ ಪರಿಣಾಮ ಬೀರಿಲ್ಲ. ಅವರು ಪಕ್ಷ ಬಿಟ್ಟ ಮೇಲೆ ಅದು ನಮಗೆ ಒಳ್ಳೆಯದು ಆಗಿಲ್ಲ, ಕೆಟ್ಟದ್ದು ಆಗಿಲ್ಲ. ಈ ಬಾರಿ ಕರ್ನಾಟಕದ ಜನ ಬದಲಾವಣೆ ಬಯಸಿದ್ದಾರೆ. ಪ್ರಾದೇಶಿಕ ಪಕ್ಷಗಳ ಬಗ್ಗೆ ಒಲವು ಇಟ್ಟಿದ್ದಾರೆ. ಅದು ನಮಗೆ ಸಂತೋಷ ತಂದಿದೆ. ಚುನಾವಣೆಯಲ್ಲಿ ನಮ್ಮ ಪ್ರಯತ್ನ ನಾವು ಮಾಡುತ್ತ ಇದ್ದೇವೆ.'' ಎಂದು ಮಾತು ಮುಗಿಸಿದರು ಕೆಪಿಜೆಪಿಯ ಸಂಸ್ಥಾಪಕ ಅಧ್ಯಕ್ಷ ಮಹೇಶ್ ಗೌಡ