Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಿಲ್ವರ್ ಜ್ಯುಬಿಲಿ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಐತಿಹಾಸಿಕ ಚಿತ್ರ 'ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ' ರಜತ ಮಹೋತ್ಸವ ಆಚರಿಸಿಕೊಳ್ಳುತ್ತಿದೆ. ಈ ಚಿತ್ರ ಯಶಸ್ವಿ 25ನೇ ವಾರ ಪ್ರದರ್ಶನ ಕಾಣುತ್ತಿದೆ. ಬೆಂಗಳೂರಿನ ತ್ರಿಭುವನ್ ಚಿತ್ರಮಂದಿರದಲ್ಲಿ 25 ವಾರಗಳನ್ನು ಪೂರೈಸಿದೆ.
ಕೆ.ಎಂ.ದೊಡ್ಡಿಯ ಸುಮ, ಚಿಕ್ಕಮಂಡೆ ಸಾತನೂರಿನ ಶ್ರೀ ವೆಂಕಟೇಶ್ವರ, ಹುಬ್ಬಳ್ಳಿಯ ರೂಪಂ, ಬೆಳವಾವಿಯ ಚಿತ್ರ, ಧಾರವಾಡದ ಪದ್ಮ, ಕಿತ್ತೂರಿನ ಶಿವಶಕ್ತಿ, ಅಣ್ಣಿಗೇರಿಯ ಜನತಾ, ತಿಳುವಳಿಯ ಮಹಾಂತೇಶ್ ಹಾಗೂ ಆದೋಣಿಯ ರಾಜ್ ಚಿತ್ರಮಂದಿರಗಳಲ್ಲಿ ಸಿಲ್ವರ್ ಜ್ಯುಬಿಲಿ ಆಚರಿಸಿಕೊಳ್ಳುತ್ತಿದೆ. (ಚಿತ್ರ ವಿಮರ್ಶೆ ಓದಿ)
'ರಾಯಣ್ಣ' ಚಿತ್ರ ಕೇವಲ ಕನ್ನಡಿಗರನ್ನಷ್ಟೇ ಅಲ್ಲದೆ ಪರಭಾಷಾ ಚಿತ್ರರಸಿಕರನ್ನೂ ಆಕರ್ಷಿಸುತ್ತಿದೆ. ನಾಗಣ್ಣ ನಿರ್ದೇಶನ, ಕೇಶವಾದಿತ್ಯ ಸಂಭಾಷಣೆ, ರಮೇಶ್ ಬಾಬು ಅವರ ಛಾಯಾಗ್ರಹಣವಿರುವ ಚಿತ್ರ ಪ್ರೇಕ್ಷಕರನ್ನು ಸ್ವಾತಂತ್ರ್ಯಪೂರ್ವಕ್ಕೆ ಕರೆದೊಯ್ಯತ್ತದೆ.
ಚಿತ್ರದ ತಾರಾಗಣದಲ್ಲಿ ನಿಖಿತಾ ತುಕ್ರಲ್, ಶ್ರೀನಿವಾಸಮೂರ್ತಿ, ಶೋಭರಾಜ್, ಉಮಾಶ್ರೀ, ದೊಡ್ಡಣ್ಣ, ಸಿ.ಆರ್.ಸಿಂಹ, ರಮೇಶ್ ಭಟ್, ಶಿವಕುಮಾರ್, ಧರ್ಮ, ಸೌರವ್, ಸತ್ಯಜಿತ್, ಬ್ರಹ್ಮಾವರ್, ಕರಿಬಸವಯ್ಯ, ಕಿಲ್ಲರ್ ವೆಂಕಟೇಶ್, ಅರವಿಂದ್ ಬಿರೇದಾರ್, ರಾಜೇಶ್ ಹಾಗೂ ವಿಜಯ ಸಾರಥಿ ಅಭಿನಯಿಸುತ್ತಿದ್ದಾರೆ.
ಸರಿಸುಮಾರು ರು.30 ಕೋಟಿ ಬಜೆಟ್ನಲ್ಲಿ ಚಿತ್ರವನ್ನು ನಿರ್ಮಿಸಲಾಗಿದ್ದು, 77 ವರ್ಷಗಳ ಕನ್ನಡ ಸಿನಿ ಇತಿಹಾಸದಲ್ಲೇ ಭಾರಿ ಬಜೆಟ್ ಚಿತ್ರವಾಗಿ ಹೊಸ ದಾಖಲೆಗೆ ಕಾರಣವಾಗಿದೆ. ಒಟ್ಟು 175 ದಿನಗಳ ಕಾಲ ಚಿತ್ರೀಕರಣಗೊಂಡಿರುವ ಈ ಚಿತ್ರದ ನಿರ್ಮಾಪಕರು ಆನಂದ್ ಅಪ್ಪುಗೋಳ್. (ಏಜೆನ್ಸೀಸ್)