Don't Miss!
- News ಹುಬ್ಬಳ್ಳಿ ನೇಹಾ ಕೊಲೆ ಪ್ರಕರಣ: ಸಿದ್ದರಾಮಯ್ಯ ಸರ್ಕಾರವೇ ನೇರ ಹೊಣೆ ಎಂದ ಬಿಜೆಪಿ ಶಾಸಕ
- Lifestyle ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
- Sports LSG vs CSK IPL 2024: ಮತ್ತೊಮ್ಮೆ ಧೋನಿ, ಜಡೇಜಾ ಅಬ್ಬರ; ಲಕ್ನೋ ತಂಡಕ್ಕೆ ಸವಾಲಿನ ಗುರಿ ನೀಡಿದ ಸಿಎಸ್ಕೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜ್ಯದಾದ್ಯಂತ 'ಸಂಗೊಳ್ಳಿ ರಾಯಣ್ಣ' ವಿಜಯಯಾತ್ರೆ
ಈಗಾಗಲೆ 25 ದಿನಗಳನ್ನು ಪೂರೈಸಿರುವ ರಾಯಣ್ಣ ಈಗ ರಾಜ್ಯದಾದ್ಯಂತ ವಿಜಯಯಾತ್ರೆ ಹೊರಡಲು ಅಣಿಯಾಗಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ವೃತ್ತಿಜೀವನದಲ್ಲೂ ರಾಯಣ್ಣ ಚಿತ್ರ ಹೊಸ ಮೈಲಿಗಲ್ಲು ಸೃಷ್ಟಿಸಿದೆ.
ಇದೇ ಭಾನುವಾರ (ಡಿಸೆಂಬರ್ 2) ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಚಿತ್ರತಂಡ ಬೆಂಗಳೂರಿನ ಸಂಗೊಳ್ಳಿ ಪ್ರತಿಮೆಯಿಂದ ಬೆಳಗ್ಗೆ 9.30ಕ್ಕೆ ಹೊರಡಲಿದೆ. ತುಮಕೂರು, ತಿಪಟೂರು, ಅರಸೀಕೆರೆ, ಕಡೂರು, ತರೀಕೆರೆ ಸಾಗಲಿದೆ.
ಸೋಮವಾರ (ಡಿಸೆಂಬರ್ 3) ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿ, ಕೊಪ್ಪ ಮಂಗಳೂರು ತಲುಪಲಿದೆ. ಅಲ್ಲಿಂದ ಚಿತ್ರತಂಡ ಮಂಗಳವಾರ (ಡಿಸೆಂಬರ್ 4) ಪುತ್ತೂರು, ಸಕಲೇಶಪುರ, ಮೂಡಿಗೆರೆ, ಚಿಕ್ಕಮಂಗಳೂರು ಹಾಸನ ತಲುಪಲಿದೆ.
ಬುಧವಾರ (ಡಿಸೆಂಬರ್ 5)ಕ್ಕೆ ಹೊಳೆನರಸೀಪುರ, ಚನ್ನರಾಯಪಟ್ಟಣ, ಕೆ.ಆರ್.ಪೇಟೆ, ಕೆ.ಆರ್.ನಗರ ಯಾತ್ರೆ ಮುಗಿಸಿಕೊಂಡು ಮೈಸೂರು ತಲುಪಲಿದೆ. ಗುರುವಾರ (ಡಿಸೆಂಬರ್ 6) ಚಾಮರಾಜನಗರ, ಕೊಳ್ಳೆಗಾಲ, ಮಳವಳ್ಳಿ ಹಾಗೂ ಮೈಸೂರು ತಲುಪಿ ಶುಕ್ರವಾರ (ಡಿಸೆಂಬರ್ 7) ಮಂಡ್ಯ, ಮದ್ದೂರು, ರಾಮನಗರದ ಮೂಲಕ ಬೆಂಗಳೂರು ಸೇರಲಿದೆ. (ಒನ್ಇಂಡಿಯಾ ಕನ್ನಡ)