Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅರ್ಧ ಸೆಂಚುರಿ ಹೊಸ್ತಿಲಲ್ಲಿ ಸಂಗೊಳ್ಳಿ ರಾಯಣ್ಣ
ಮಲ್ಟಿಫ್ಲೆಕ್ಸ್ ಚಿತ್ರಮಂದಿರಗಳಿಗೂ ಕನ್ನಡ ಚಿತ್ರಗಳಿಗೂ ಎಣ್ಣೆ ಸೀಗೆಕಾಯಿ ಸಂಬಂಧ. ಪರಿಸ್ಥಿತಿ ಹೀಗಿದ್ದರೂ ಸಂಗೊಳ್ಳಿ ರಾಯಣ್ಣ ಚಿತ್ರ ಪಿವಿಆರ್, ರಾಕ್ ಲೈನ್ ಸಿನಿಮಾಸ್, ಗೋಪಾಲನ್ ಸಿನಿಮಾಸ್, ಐನಾಕ್ಸ್ ಚಿತ್ರಮಂದಿರಗಳಲ್ಲಿ ಅಲುಗಾಡದಿರುವುದು ವಿಶೇಷ.
ಇನ್ನು ಉಳಿದಂತೆ ಬೆಂಗಳೂರಿನ ನರ್ತಕಿ ಹಾಗೂ ಪ್ರಸನ್ನ ಚಿತ್ರಮಂದಿರಗಳಲ್ಲಿ ಪ್ರತಿದಿನ ನಾಲ್ಕು ಪ್ರದರ್ಶನಗಳನ್ನು ಕಾಣುತ್ತಿದೆ. ಪರಭಾಷಾ ಚಿತ್ರಗಳ ಪೈಪೋಟಿ ನಡುವೆಯೂ 'ರಾಯಣ್ಣ' ಕಲೆಕ್ಷನ್ ತಾಳ ತಪ್ಪಿಲ್ಲ. ರಾಜ್ಯದ 80ಕ್ಕೂ ಅಧಿಕ ಚಿತ್ರಗಮಂದಿರಗಳಲ್ಲಿ ಸಂಗೊಳ್ಳಿ ರಾಯಣ್ಣ ಅರ್ಧ ಶತಕ ಆಚರಿಸಿಕೊಳ್ಳುತ್ತಿದ್ದಾನೆ.
ಒಟ್ಟು ರು.30 ಕೋಟಿ ಬಜೆಟ್ ನಲ್ಲಿ ನಿರ್ಮಿಸಿರುವ ಈ ಚಿತ್ರ ವಿವಾದಕ್ಕೂ ಗುರಿಯಾಗಿತ್ತು. ಐತಿಹಾಸಿಕ ಚಿತ್ರದಲ್ಲಿ ಕೆಲವೊಂದು ಸನ್ನಿವೇಶಗಳನ್ನು ಅನಾವಶ್ಯಕವಾಗಿ ತುರುಕಲಾಗಿದೆ. ನಾಯಕಿ ಜೊತೆ 'ರಾಯಣ್ಣ'ನ ಡ್ಯುಯೆಟ್ ಅವಶ್ಯಕತೆ ಇರಲಿಲ್ಲ ಎಂಬ ಮಾತುಗಳು ಕೇಳಿಬಂದಿದ್ದವು.
ದರ್ಶನ್ ಸಾರಥ್ಯದಲ್ಲಿ ಸಂಗೊಳ್ಳಿ ರಾಯಣ್ಣ ಚಿತ್ರತಂಡ ವಿಜಯಯಾತ್ರೆಯನ್ನೂ ರಾಜ್ಯದಾದ್ಯಂತ ನಡೆಸಿತು. ಇದಕ್ಕೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಕಾವೇರಿ ಹೋರಾಟದ ಹಿನ್ನೆಲೆಯಲ್ಲಿ ಈ ವಿಜಯಯಾತ್ರೆಯನ್ನು ಕೈಬಿಡಲಾಯಿತು. ದರ್ಶನ್ ಅವರ ವೃತ್ತಿಜೀವನದಲ್ಲಿ ಸಂಗೊಳ್ಳಿ ರಾಯಣ್ಣ ಚಿತ್ರ ಮತ್ತೊಂದು ಮೈಲಿಗಲ್ಲು ಎನ್ನಬಹುದು. (ಒನ್ಇಂಡಿಯಾ ಕನ್ನಡ)