Don't Miss!
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- News ಲೋಕಸಭಾ ಚುನಾವಣೆ 2024: ಮತದಾನಕ್ಕೆ ಸಕಲ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
- Automobiles Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅರ್ಧ ಸೆಂಚುರಿ ಹೊಸ್ತಿಲಲ್ಲಿ ಸಂಗೊಳ್ಳಿ ರಾಯಣ್ಣ
ಮಲ್ಟಿಫ್ಲೆಕ್ಸ್ ಚಿತ್ರಮಂದಿರಗಳಿಗೂ ಕನ್ನಡ ಚಿತ್ರಗಳಿಗೂ ಎಣ್ಣೆ ಸೀಗೆಕಾಯಿ ಸಂಬಂಧ. ಪರಿಸ್ಥಿತಿ ಹೀಗಿದ್ದರೂ ಸಂಗೊಳ್ಳಿ ರಾಯಣ್ಣ ಚಿತ್ರ ಪಿವಿಆರ್, ರಾಕ್ ಲೈನ್ ಸಿನಿಮಾಸ್, ಗೋಪಾಲನ್ ಸಿನಿಮಾಸ್, ಐನಾಕ್ಸ್ ಚಿತ್ರಮಂದಿರಗಳಲ್ಲಿ ಅಲುಗಾಡದಿರುವುದು ವಿಶೇಷ.
ಇನ್ನು ಉಳಿದಂತೆ ಬೆಂಗಳೂರಿನ ನರ್ತಕಿ ಹಾಗೂ ಪ್ರಸನ್ನ ಚಿತ್ರಮಂದಿರಗಳಲ್ಲಿ ಪ್ರತಿದಿನ ನಾಲ್ಕು ಪ್ರದರ್ಶನಗಳನ್ನು ಕಾಣುತ್ತಿದೆ. ಪರಭಾಷಾ ಚಿತ್ರಗಳ ಪೈಪೋಟಿ ನಡುವೆಯೂ 'ರಾಯಣ್ಣ' ಕಲೆಕ್ಷನ್ ತಾಳ ತಪ್ಪಿಲ್ಲ. ರಾಜ್ಯದ 80ಕ್ಕೂ ಅಧಿಕ ಚಿತ್ರಗಮಂದಿರಗಳಲ್ಲಿ ಸಂಗೊಳ್ಳಿ ರಾಯಣ್ಣ ಅರ್ಧ ಶತಕ ಆಚರಿಸಿಕೊಳ್ಳುತ್ತಿದ್ದಾನೆ.
ಒಟ್ಟು ರು.30 ಕೋಟಿ ಬಜೆಟ್ ನಲ್ಲಿ ನಿರ್ಮಿಸಿರುವ ಈ ಚಿತ್ರ ವಿವಾದಕ್ಕೂ ಗುರಿಯಾಗಿತ್ತು. ಐತಿಹಾಸಿಕ ಚಿತ್ರದಲ್ಲಿ ಕೆಲವೊಂದು ಸನ್ನಿವೇಶಗಳನ್ನು ಅನಾವಶ್ಯಕವಾಗಿ ತುರುಕಲಾಗಿದೆ. ನಾಯಕಿ ಜೊತೆ 'ರಾಯಣ್ಣ'ನ ಡ್ಯುಯೆಟ್ ಅವಶ್ಯಕತೆ ಇರಲಿಲ್ಲ ಎಂಬ ಮಾತುಗಳು ಕೇಳಿಬಂದಿದ್ದವು.
ದರ್ಶನ್ ಸಾರಥ್ಯದಲ್ಲಿ ಸಂಗೊಳ್ಳಿ ರಾಯಣ್ಣ ಚಿತ್ರತಂಡ ವಿಜಯಯಾತ್ರೆಯನ್ನೂ ರಾಜ್ಯದಾದ್ಯಂತ ನಡೆಸಿತು. ಇದಕ್ಕೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಕಾವೇರಿ ಹೋರಾಟದ ಹಿನ್ನೆಲೆಯಲ್ಲಿ ಈ ವಿಜಯಯಾತ್ರೆಯನ್ನು ಕೈಬಿಡಲಾಯಿತು. ದರ್ಶನ್ ಅವರ ವೃತ್ತಿಜೀವನದಲ್ಲಿ ಸಂಗೊಳ್ಳಿ ರಾಯಣ್ಣ ಚಿತ್ರ ಮತ್ತೊಂದು ಮೈಲಿಗಲ್ಲು ಎನ್ನಬಹುದು. (ಒನ್ಇಂಡಿಯಾ ಕನ್ನಡ)