Don't Miss!
- News Acid Attack: ಆಸ್ತಿ ವಿವಾದ: ಮಗನ ಮೇಲೆ 'ಆಸಿಡ್' ಎರಚಿದ ತಂದೆ
- Automobiles ಜೀವದ ಗೆಳೆಯನಿಗೆ ಸರ್ಪ್ರೈಸ್ ಆಗಿ 'ಬೈಕ್' ಉಡುಗೊರೆ ನೀಡಿದ ವಧು.. ಆತನ ಸಂತೋಷಕ್ಕೆ ಪಾರವೇ ಇರಲಿಲ್ಲ!
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Lifestyle ಮೈ ತೂಕ ಕಡಿಮೆಯಾಗಲು ಈ ಪುದೀನಾ ನೀರು ಸಹಕಾರಿಯೇ? ಇದರ ಇತರ ಪ್ರಯೋಜನಗಳೇನು?
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರೀಕರಣದ ವೇಳೆ ಅಜಯ್ ರಾವ್ ಕಾಲಿಗೆ ಗಾಯ
Recommended Video
ಸ್ಯಾಂಡಲ್ ವುಡ್ ನಲ್ಲಿ ಸಕ್ಸಸ್ ಜೋಡಿ ಎನ್ನಿಸಿಕೊಂಡಿರುವ ಕೃಷ್ಣ ಅಜಯ್ ರಾವ್ ಹಾಗೂ ನಿರ್ದೇಶಕ ಶಶಾಂಕ್ ಕಾಂಬಿನೇಶನ್ ನಲ್ಲಿ ಮೂಡಿ ಬರುತ್ತಿರುವ 'ತಾಯಿಗೆ ತಕ್ಕ ಮಗ' ಸಿನಿಮಾದ ಚಿತ್ರೀಕರಣಕ್ಕೆ ಬ್ರೇಕ್ ಬಿದ್ದಿದೆ. ಇತ್ತೀಚಿಗಷ್ಟೇ ಸಿನಿಮಾ ಸಾಹಸ ದೃಶ್ಯಗಳನ್ನ ಚಿತ್ರೀಕರಿಸುವಾಗ ನಟ ಅಜಯ್ ರಾವ್ ಕಾಲಿಗೆ ಗಾಯ ಮಾಡಿಕೊಂಡಿದ್ದಾರೆ.
ಸುಮಲತಾ ಅಂಬರೀಶ್, ಅಜಯ್ ರಾವ್ ಹಾಗೂ ಆಶಿಕಾ ರಂಗನಾಥ್, ಭಜರಂಗಿ ಲೋಕಿ, ಅಚ್ಚುತ್ ರಾವ್ ಹಾಗೂ ಸಾಧು ಕೋಕಿಲ ಚಿತ್ರದಲ್ಲಿ ಅಭಿನಯಿಸುತ್ತಿದ್ದು ಸಾಕಷ್ಟು ದಿನಗಳ ಹಿಂದೆಯೇ ಚಿತ್ರೀಕರಣ ಶುರು ಮಾಡಿದ್ದ ಸಿನಿಮಾ ಟೀಂ ಶೇಕಡ 50 ರಷ್ಟು ಚಿತ್ರೀಕರಣ ಮಾಡಿ ಮುಗಿಸಿದೆ.
ನಟಿ ಸುಮಲತಾ ಟ್ಯಾಟೂ ಹಾಕಿಸಿಕೊಂಡ ಅಜಯ್ ರಾವ್
ವೈದ್ಯರು ಅಜಯ್ ರಾವ್ ಅವರಿಗೆ ವಿಶ್ರಾಂತಿ ಪಡೆಯಲು ತಿಳಿಸಿದ್ದು ಅದಕ್ಕಾಗಿ ಸದ್ಯಕ್ಕೆ ಚಿತ್ರೀಕರಣಕ್ಕೆ ಬ್ರೇಕ್ ಹಾಕಲಾಗಿದೆ. ಏರ್ಪಿಲ್ 2 ರಿಂದ ಚಿತ್ರೀಕರಣಕ್ಕೆ ಪ್ಲಾನ್ ಮಾಡಿಕೊಂಡಿದೆ ಸಿನಿಮಾತಂಡ. ಸಿನಿಮಾಗೆ ಶೇಖರ್ ಚಂದ್ರ ಕ್ಯಾಮೆರಾ ವರ್ಕ್ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನವಿದೆ.
ಬೆಂಗಳೂರಿನ ಸುತ್ತಾ ಮುತ್ತಾ ತಾಯಿಗೆ ತಕ್ಕ ಮಗ ಸಿನಿಮಾದ ಚಿತ್ರೀಕರಣ ಮಾಡಿರುವ ನಿರ್ದೇಶಕರು ಸತತ 35 ದಿನಗಳ ಶೂಟಿಂಗ್ ಮುಗಿಸಿದ್ದಾರೆ. ಹಿಟ್ ಸಿನಿಮಾಗಳನ್ನ ನೀಡಿ ಪ್ರೇಕ್ಷಕರನ್ನ ಖುಷಿ ಪಡಿಸಿರುವ ಅಜಯ್ ಮತ್ತು ಶಶಾಂಕ್ ಕಾಂಬಿನೇಶನ್ ಈ ಬಾರಿಯೂ ನೋಡುಗರಿಗೆ ಮನೋರಂಜನೆ ನೀಡಲಿದೆ.