Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪತ್ನಿ, ನಿರ್ಮಾಪಕಿ ಸ್ವಪ್ನ ಟ್ವೀಟ್ ಗೆ ಸ್ಪಷ್ಟನೆ ನೀಡಿದ ಕೃಷ್ಣ
Recommended Video
'ಪೈಲ್ವಾನ್' ಸಿನಿಮಾದ ಪೈರಸಿ ವಿಷಯವಾಗಿ ನಿರ್ಮಾಪಕಿ ಸ್ವಪ್ನ ಕೃಷ್ಣ ಟ್ವೀಟ್ ಮಾಡಿದ್ದರು. ''ಎಲ್ಲ ಅಭಿಮಾನಿಗಳಿಗೆ ಸಿಹಿ ಸುದ್ದಿ. ಬೆದರಿಕೆಗೆ ಜಗ್ಗೊನಲ್ಲ ನಮ್ಮ ಪೈಲ್ವಾನ. ಪೈಲ್ವಾನ್ ನ ಕಾಲ್ ಏಳೋಕೆ ಬಂದವರ ಸ್ಥಾನ ಕಾಲ್ ಕೆಳಗೆನೇ'' ಎನ್ನುವುದು ಸ್ವಪ್ನ ಹೇಳಿಕೆಯಾಗಿತ್ತು.
ನಿರ್ಮಾಪಕಿ ಸ್ವಪ್ನ ಟ್ವೀಟ್ ಅನ್ನು ಬೇರೆ ಬೇರೆ ಅರ್ಥಗಳು ಕಲ್ಪಿಸಲಾಗಿತ್ತು. ಇದು ನಟ ದರ್ಶನ್ ಗೆ ಮಾಡಿರುವ ಟ್ವೀಟ್ ಎನ್ನುವ ಆರೋಪ ಬಂದಿತ್ತು. ಆದರೆ, ಈ ಬಗ್ಗೆ ನಿರ್ದೇಶಕ ಕೃಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
ದರ್ಶನ್ ಫ್ಯಾನ್ಸ್ ಬಗ್ಗೆ ಸ್ಪಷ್ಟನೆ ನೀಡಿದ ಪೈಲ್ವಾನ್ ನಿರ್ಮಾಪಕಿ ಸ್ವಪ್ನಕೃಷ್ಣ
''ಪೈರಸಿ ಮಾಡುವವರಿಗೆ, ಸಿನಿಮಾವನ್ನು ಸೋಲಿಸಬೇಕು ಎನ್ನುವವರಿಗೆ ಆ ಮಾತುಗಳನ್ನು ಹೇಳಿದ್ದು.'' ಎಂದು ಪತ್ನಿ ಟ್ವೀಟ್ ಗೆ ಕೃಷ್ಣ ಸ್ಪಷ್ಟನೆ ನೀಡಿದ್ದಾರೆ.
''ಒಬ್ಬ ಟೆಕ್ನಿಷಿಯನ್ ಆಗಿ ಬಂದು, ಒಂದು ದೊಡ್ಡ ಸಿನಿಮಾವನ್ನು ನಿರ್ಮಾಣ ಮಾಡುತ್ತೇವೆ ಎಂದಾಗ ನಮಗೂ ನೋವಾಗುತ್ತೆ. ಇದರಲ್ಲಿ ಯಾರಿಗೂ ಟಾರ್ಗೆಟ್ ಮಾಡಿಲ್ಲ. ಈ ರೀತಿ ಘಟನೆ ನಡೆದಾಗ ಸಿನಿಮಾ ಮಾಡಿರುವ ನಿರ್ಮಾಪಕನಿಗೆ ನೋವಾಗುತ್ತದೆ. ಆ ನೋವನ್ನು ಅವರು ಹೇಳಿಕೊಂಡಿದ್ದಾರೆ ಅಷ್ಟೇ.'' ಎಂದು ಕೃಷ್ಣ ತಿಳಿಸಿದ್ದಾರೆ.
ಆರೋಪದಿಂದ ದರ್ಶನ್ ಫ್ಯಾನ್ಸ್ ಆಕ್ರೋಶ : ಕಿಚ್ಚನಿಗೆ ಡಿ ಬಾಸ್ ಹುಡುಗರ ಪ್ರಶ್ನೆ!
''ಯಾರೂ ಏನೋ ಮಾಡಿದರೂ ಸಿನಿಮಾ ಗೆದ್ದಿದೆ. ಹೀಗಾಗಿ, ಅವರ ಟ್ವೀಟ್ ಅನ್ನು ಬೇರೆ ಅರ್ಥದಲ್ಲಿ ಕಲ್ಪಿಸಿಕೊಳ್ಳುವ ಅಗತ್ಯ ಇಲ್ಲ.'' ಎಂದು ಕೃಷ್ಣ ಹೇಳಿಕೆ ನೀಡಿದ್ದಾರೆ.