Don't Miss!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- News Namma Metro Purple Line: ದೈನಂದಿನ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆ, ಕಾರಣಗಳೇನು?
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Technology Tecno: ಬಹುನಿರೀಕ್ಷಿತ ಟೆಕ್ನೋ ಪೋವಾ 6 ಪ್ರೊ ಲಾಂಚ್! 12GB RAM.. 6000mAh ಬ್ಯಾಟರಿ.. ಬೆಲೆ ಎಷ್ಟು?
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
48 ಗಂಟೆಗಳು ನನ್ನ ಕುಟುಂಬಕ್ಕೆ ತೀರಾ ಸಂಕಷ್ಟದ ಸಮಯವಾಗಿತ್ತು; ಕೊರೊನಾ ತೀವ್ರತೆ ವಿವರಿಸಿದ ಕೃತಿ
ಕೊರೊನಾ ಮಹಾಮಾರಿಯಿಂದ ಇಡೀ ದೇಶ ತತ್ತರಿಸಿ ಹೋಗಿದೆ. ದಿನಕ್ಕೆ ಸಾವಿರಾರು ಮಂದಿಯನ್ನು ಬಲಿ ಪಡೆಯುತ್ತಿರುವ ಕೊರೊನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಸೋಂಕಿತರು ಆಸ್ಪತ್ರೆ, ಬೆಡ್, ಆಕ್ಸಿಜನ್ ಇಲ್ಲದೆ ಪರದಾಡುತ್ತಿದ್ದಾರೆ. ಕೊರೊನಾಗೆ ಅನೇಕ ಸಿನಿಮಾ ಮಂದಿ ಬಲಿಯಾಗಿದ್ದಾರೆ.
ಕೋವಿಡ್ ಸೋಂಕಿನ ತೀವ್ರತೆ ಬಗ್ಗೆ ಗೂಗ್ಲಿ ಸುಂದರಿ ಕೃತಿ ಕರಬಂದ ಸಾಮಾಜಿಕ ಜಾಲತಾಣದಲ್ಲಿ ವಿವರಿಸಿದ್ದಾರೆ. 48 ಗಂಟೆಗಳು ತನ್ನ ಕುಟುಂಬಕ್ಕೆ ತೀರಾ ಸಂಕಷ್ಟದ ಸಮಯವಾಗಿತ್ತು ಎಂದು ಹೇಳಿದ್ದಾರೆ. ಕಷ್ಟದ ಸಮಯ ಎದುರಿಸಿದ ಕೃತಿ ದಯವಿಟ್ಟು ಎಲ್ಲರೂ ಮನೆಯಲ್ಲೇ ಇರಿ ಎಂದು ಮನವಿ ಮಾಡಿದ್ದಾರೆ.
ಕೊರೊನಾ ಸಂಕಷ್ಟಕ್ಕೆ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ ನೆರವಿನ ಹಸ್ತ
'ಕಳೆದ 48 ಗಂಟೆಗಳು ನನಗೂ ನನ್ನ ಕುಟುಂಬಕ್ಕೂ ತೀರಾ ಸಂಕಟದ ಸಮಯವಾಗಿತ್ತು. ಅದು ಮನೆಗೆ ಬರುವವರೆಗೂ ಎಷ್ಟು ಭಯಾನಕ ಎನ್ನುವುದು ಗೊತ್ತಾಗಲ್ಲ. ದಯವಿಟ್ಟು ಮನೆಯಲ್ಲೇ ಇರಿ. ಮನೆಯಿಂದ ಹೊರಹೋಗಲು ನಿರ್ಧರಿಸಿದರೆ ಒಂದು ಹೆಜ್ಜೆ ಹಿಂದಕ್ಕೆ ಇಡಿ. ನಿಮ್ಮ ಪ್ರಾಣವನ್ನು ಪಣಕ್ಕಿಡುವುದು ಸರಿಯೇ ಎಂದು ಯೋಚಿಸಿ' ಎಂದು ಹೇಳಿದ್ದಾರೆ.
ಕೊರೊನಾ ಸಂಕಷ್ಟದಲ್ಲಿ ಅನುಭವಿಸಿದ ಕಷ್ಟವನ್ನು ವಿವರಿಸುವ ಮೂಲಕ ಎಲ್ಲರೂ ಸುರಕ್ಷಿತವಾಗಿ ಇರುವಂತೆ ಹೇಳಿದ್ದಾರೆ. ಕೃತಿ ಕರಬಂದ ಸದ್ಯ ಮುಂಬೈನಲ್ಲಿ ನೆಲೆಸಿದ್ದಾರೆ. ಕನ್ನಡದ ಗೂಗ್ಲಿ ಸಿನಿಮಾ ಮೂಲಕ ಪ್ರಖ್ಯಾತಿಗಳಿಸಿದ ಕೃತಿ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.
ಗಲಾಟೆ, ಸೂಪರ್ ರಂಗ, ಬೆಳ್ಳಿ, ದಳಪತಿ ಸೇರಿದಂತೆ ಕೆಲವು ಕನ್ನಡದ ಸಿನಿಮಾಗಳಲ್ಲಿ ಕೃತಿ ಮಿಂಚಿದ್ದಾರೆ. ಸದ್ಯ ಹಿಂದಿಯಲ್ಲಿ ಬ್ಯುಸಿಯಾಗಿರುವ ಕೃತಿ ಮುಂಬೈನಲ್ಲೇ ನೆಲೆಸಿದ್ದಾರೆ.
Recommended Video
ಸಾಕಷ್ಟು ಮಂದಿ ಸೆಲೆಬ್ರಿಟಿಗಳು ಕೊರೊನಾ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಇನ್ನು ಕೆಲವರು ಈ ಸಂಕಷ್ಟದ ಸಮಯದಲ್ಲಿ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಅಗತ್ಯ ಇರುವವರಿಗೆ ಆಕ್ಸಿಜನ್, ಆಸ್ಪತ್ರೆ ವ್ಯವಸ್ಥೆ ಮಾಡಿಸಿಕೊಡುತ್ತಿದ್ದಾರೆ.