Don't Miss!
- Sports ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಕೆಎಲ್ ರಾಹುಲ್ಗೆ ಸ್ಥಾನ?; ರಾಬಿನ್ ಉತ್ತಪ್ಪ ಹೇಳಿದ್ದೇನು?
- News karnataka Rain: ಬೆಂಗಳೂರಿನಲ್ಲಿ ಏ.23ರವರೆಗೆ ಮಳೆ- ಬೆಳಗಾವಿ ಮಂದಿಗೆ ಕುಂದಾ ಕೊಟ್ಟ ವರುಣ ಧಾರವಾಡ ಮಂದಿಗಿಂದು ಪೇಡಾ ಕೊಡ್ತಾನಾ?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಭೂಮಿಪುತ್ರ' ಸಿನಿಮಾ ಶುರುವಾಗದಿರಲು ಕಾರಣ ಎಚ್.ಡಿ.ಕೆ.!
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಟ್ವೆಂಟಿ ಟ್ವೆಂಟಿ ಸರ್ಕಾರದ ಕತೆ ಇಟ್ಟುಕೊಂಡು ಸ್ಯಾಂಡಲ್ ವುಡ್ ನಲ್ಲಿ 'ಭೂಮಿಪುತ್ರ' ಸಿನಿಮಾ ಸೆಟ್ಟೇರಿತ್ತು. ಆದರೆ ಅದ್ದೂರಿಯಾಗಿ ಮುಹೂರ್ತ ಮಾಡಿಕೊಂಡ ಈ ಸಿನಿಮಾದ ಚಿತ್ರೀಕರಣ ಇದುವರೆಗೂ ಶುರು ಆಗಿಲ್ಲ.
ಕುಮಾರಣ್ಣನ 'ಭೂಮಿಪುತ್ರ' ಚಿತ್ರಕ್ಕೆ ಅಡ್ಡಗಾಲು ಹಾಕಿದವರು ಯಾರು?
ಈ ಹಿಂದೆ 'ಭೂಮಿಪುತ್ರ' ಚಿತ್ರದ ಶೂಟಿಂಗ್ ತಡ ಆಗುವುದಕ್ಕೆ ನಿರ್ಮಾಪಕರ ಹಣಕಾಸು ವಿಷಯ ಕಾರಣ ಎಂದು ನಿರ್ದೇಶಕ ಎಸ್.ನಾರಾಯಣ್ ಹೇಳಿದ್ದರು. ಆದರೆ ಈಗ ಚಿತ್ರದ ನಿರ್ಮಾಪಕ ಪ್ರಭು ಕುಮಾರ್ ಚಿತ್ರದ ಚಿತ್ರೀಕರಣ ತಡ ಆಗಿರುವ ಬಗ್ಗೆ ಮಾತನಾಡಿದ್ದಾರೆ.
ನಿರ್ಮಾಪಕ ಪ್ರಭು ಕುಮಾರ್ ಅವರು ಹೇಳುವ ಪ್ರಕಾರ ಕುಮಾರಸ್ವಾಮಿ ಅವರು ಇನ್ನೂ ಎಸ್.ನಾರಾಯಣ್ ಅವರ ಕಥೆಯನ್ನು ಓಕೆ ಮಾಡಿಲ್ಲವಂತೆ. 'ಕಥೆ ಇಷ್ಟ ಪಟ್ಟು ಅವರು ಓಕೆ ಮಾಡದೆ ನಾವು ಚಿತ್ರೀಕರಣ ಮಾಡಲು ಸಾಧ್ಯವಿಲ್ಲ' ಎಂದು ನಿರ್ಮಾಪಕರು ಸ್ಪಷ್ಟ ಪಡಿಸಿದ್ದಾರೆ. ಇದರಿಂದ ತೆರೆ ಮೇಲೆ ಕುಮಾರಣ್ಣನ ಆಡಳಿತ ನೋಡಲು ಆಸೆ ಇಟ್ಟುಕೊಂಡಿದ್ದ ಅಭಿಮಾನಿಗಳಿಗೆ ಮತ್ತೆ ನಿರಾಸೆ ಆಗಿದೆ.