Don't Miss!
- News ಪಟ್ಟು ಬಿಡದೆ ನಾಮಪತ್ರ ಸಲ್ಲಿಸಿದ ಕೆಎಸ್ ಈಶ್ವರಪ್ಪಗೆ ಏಪ್ರಿಲ್ 22 ಡೆಡ್ ಲೈನ್!
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Finance ನಾಳೆ ಬೆಂಗಳೂರಿನಲ್ಲಿ ಚಿಕನ್, ಮಟನ್ ಮಾರಾಟಕ್ಕೆ ನಿಷೇಧ
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಸೀತಾರಾಮ ಕಲ್ಯಾಣ' ಸಿನಿಮಾದ ಶೂಟಿಂಗ್ ಸೆಟ್ ನಲ್ಲಿ ಕುಮಾರಸ್ವಾಮಿ
Recommended Video
ನಟ ನಿಖಿಲ್ ಕುಮಾರ್ ಅಭಿನಯದ 'ಸೀತಾರಾಮ ಕಲ್ಯಾಣ' ಸಿನಿಮಾದ ಚಿತ್ರೀಕರಣ ಸದ್ಯ ನಡೆಯುತ್ತಿದೆ. ಈಗ ಚಿತ್ರದ ಶೂಟಿಂಗ್ ಸೆಟ್ ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ.
ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ಇಬ್ಬರು 'ಸೀತಾರಾಮ ಕಲ್ಯಾಣ' ಸಿನಿಮಾದ ಚಿತ್ರೀಕರಣದ ಸ್ಥಳಕ್ಕೆ ಹೋಗಿದ್ದಾರೆ. ಮಗನ ನಟನೆ ಕಂಡು ಅಪ್ಪ ಅಮ್ಮ ಖುಷಿ ಆಗಿದ್ದಾರೆ. ಈ ವೇಳೆ ನಿಖಿಲ್ ಕುಮಾರ್, ಚಿತ್ರದ ನಾಯಕಿ ರಚಿತಾ ರಾಮ್, ನಿರ್ದೇಶಕ ಎ.ಹರ್ಷ ಸೇರಿದಂತೆ ಎಲ್ಲರೂ ಕುಮಾರಸ್ವಾಮಿ ದಂಪತಿ ಜೊತೆಗೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.
ಹಳ್ಳಿ ಮಕ್ಕಳ ಜೊತೆಗೆ ಕ್ರಿಕೆಟ್ ಆಡಿದ ನಿಖಿಲ್ ಕುಮಾರ್
ಮುಖ್ಯಮಂತ್ರಿಯಾಗಿರುವ ಕುಮಾರಸ್ವಾಮಿ ಎಷ್ಟೇ ಕೆಲಸ ಇದ್ದರೂ ತಮ್ಮ ಮಗನ ಸಿನಿಮಾ ಬಗ್ಗೆ ಕೂಡ ಕಾಳಜಿ ವಹಿಸಿದ್ದಾರೆ. ಈ ಹಿಂದೆ ಮಗನ 'ಜಾಗ್ವಾರ್' ಚಿತ್ರದ ಕೆಲಸಗಳನ್ನು ಕೂಡ ಕುಮಾರಸ್ವಾಮಿ ಹತ್ತಿರದಿಂದ ಗಮನಿಸಿದ್ದರು.
ಇನ್ನು 'ಸೀತಾರಾಮ ಕಲ್ಯಾಣ' ಕುಮಾರಸ್ವಾಮಿ ಅವರ ಚಿನ್ನಾಂಬಿಕಾ ಬ್ಯಾನರ್ ನಲ್ಲಿ ನಿರ್ಮಾಣ ಆಗುತ್ತಿರುವ ಸಿನಿಮಾವಾಗಿದೆ. 'ಜಾಗ್ವಾರ್' ನಂತರ ನಿಖಿಲ್ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಮೈಸೂರಿನ ನಂತರ ಈ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತಿದೆ.