Don't Miss!
- News Namma Metro: 2023-24ರಲ್ಲಿ ಮೆಟ್ರೋ ವಾರ್ಷಿಕ ಆದಾಯದಲ್ಲಿ ಭಾರೀ ಏರಿಕೆ: ಖರ್ಚು-ಆದಾಯದ ಮಾಹಿತಿ?
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Sports IPL 2024: ಮುಂಬೈ ಇಂಡಿಯನ್ಸ್ ವಿರುದ್ಧ ಶತಕ; ರೋಹಿತ್, ಕೊಹ್ಲಿಗೆ ಕ್ರೆಡಿಟ್ ನೀಡಿದ ಯಶಸ್ವಿ ಜೈಸ್ವಾಲ್!
- Technology Itel: ಭಾರತದಲ್ಲಿ ಐಟೆಲ್ S24 ಲಾಂಚ್! 108MP ಕ್ಯಾಮೆರಾ.. ಬೆಲೆ ಇಷ್ಟೇ
- Lifestyle ಪ್ರವಾಹಕ್ಕೆ ಕಾರಣವಾಗೋದು ಮಳೆಯಲ್ಲ ಬೇಸಿಗೆಯ ಬಿಸಿಲು..! ನಂಬಲು ಸಾಧ್ಯವಿಲ್ಲ ಅಂದ್ರೆ ಈ ವಿಡಿಯೋ ನೋಡಿ..!
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಭಾಷಣೆಕಾರ ಕುಣಿಗಲ್ ನಾಗಭೂಷಣ್ ಬೆಳ್ಳಿಹೆಜ್ಜೆ
ಕರ್ನಾಟಕ ಚಲನಚಿತ್ರ ಅಕಾಡೆಮಿ ಸುಸೂತ್ರವಾಗಿ ನಡೆಸುಕೊಂಡು ಬರುತ್ತಿರುವ 'ಬೆಳ್ಳಿಹೆಜ್ಜೆ' ಕಾರ್ಯಕ್ರಮಕ್ಕೆ ಈ ಬಾರಿಯ ಮುಖ್ಯ ಅತಿಥಿಯಾಗಿ ಆಗಮಿಸುತ್ತಿದ್ದಾರೆ. ಅಕಾಡೆಮಿ ನಡೆಸಿಕೊಡುತ್ತಿರುವ 33ನೇ ಬೆಳ್ಳಿಹೆಜ್ಜೆ ಕಾರ್ಯಕ್ರಮ ಇದಾಗಿದೆ.
ಇದೇ ಆಗಸ್ಟ್ 25ರಂದು ಸಂಜೆ 5 ಗಂಟೆಗೆ ಬೆಂಗಳೂರು ಜೆಸಿ ರಸ್ತೆಯ ಪ್ರಿಯದರ್ಶಿನಿ ಚಿತ್ರಮಂದಿರ, ಬಾದಾಮಿ ಹೌಸ್ ನಲ್ಲಿ ಕಾರ್ಯಕ್ರಮ ನಡೆಯಲಿದೆ. ಅವರನ್ನು ತೆರೆಯ ಮೇಲೆ ನೋಡಿರುವ, ಅವರ ಅದೆಷ್ಟೋ ಸಂಭಾಷಣೆಗಳನ್ನು ಕೇಳಿರುವವರು ಅವರೊಂದಿಗೆ ಅಂದು ಮುಖಾಮುಖಿಯಾಗಬಹುದು.
'ನಾಂದಿ' ಚಿತ್ರದ ಮೂಲಕ ಸಹನಿರ್ದೇಶಕರಾಗಿ ಚಿತ್ರರಂಗಕ್ಕೆ ಕಾಲಿಟ್ಟ ನಾಗಭೂಷಣ ಅವರು 'ಸಿಂಹ ಜೋಡಿ' ಮೂಲಕ ಚಿತ್ರ ಸಂಭಾಷಣೆ ರಚಿಸಲು ಮೊದಲಿಟ್ಟರು. ಜೊತೆಗೆ ಬಣ್ಣ ಹಚ್ಚಲೂ ಆರಂಭಿಸಿದರು. ಜನಪ್ರಿಯ ಸಂಭಾಷಣೆಕಾರರಾಗಿ ರೂಪುಗೊಂಡ ಕುಣಿಗಲ್ ನಾಗಭೂಷಣ್ ಇದುವರೆಗೂ 200ಕ್ಕೂ ಹೆಚ್ಚು ಚಿತ್ರಗಳಿಗೆ ಸಂಭಾಷಣೆ ಹೆಣೆದಿದ್ದಾರೆ.
ರಾಜ್ಯ ಸರ್ಕಾರದಿಂದ ಎರಡು ಬಾರಿ ಅತ್ಯುತ್ತಮ ಸಂಭಾಷಣಾ ಕರ್ತೃ ಪ್ರಶಸ್ತಿ (ಗೌರಿ ಗಣೇಶ, ಯಾರಿಗೂ ಹೇಳ್ಬೇಡಿ) ಪಡೆದಿದ್ದಾರೆ. ಆಶೀರ್ವಾದ ಹಾಗೂ ಬಾಳು ಜೇನು ಚಿತ್ರಗಳು ಅವರ ನಿರ್ದೇಶನಲ್ಲಿ ಬಂದಂತಹ ಚಿತ್ರಗಳು. ಚಲನಚಿತ್ರರಂಗದ ಜೊತೆಗೆ ಕಿರುತೆರೆಯಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಗಣೇಶನ ಮದುವೆ, ಗೋಲ್ ಮಾಲ್ ರಾಧಾಕೃಷ್ಣ. (ಒನ್ ಇಂಡಿಯಾ ಕನ್ನಡ)