Don't Miss!
- Automobiles ಬೈಕಿನಂತೆ ಮೈಲೇಜ್, ಹಿಂದೆಗಿಂತಲೂ ಬಲಿಷ್ಠವಾಗಿ ಸ್ವಿಫ್ಟ್ ಅಖಾಡಕ್ಕೆ: ಖರೀದಿಸಲು ಕ್ಯೂ ನಿಲ್ಲಲು ರೆಡಿಯಾಗಿರಿ!
- News Bengaluru Rain: ಮುದ್ದಿನ ನಾಯಿಮರಿಗೆ ಮೊದಲ ಮಳೆ ತೋರಿಸಿ ಖುಷಿ ಪಟ್ಟ ವ್ಯಕ್ತಿ; ವಿಡಿಯೋ ವೈರಲ್
- Lifestyle ಮಕ್ಕಳಲ್ಲಿ ಮಲೇರಿಯಾ: ಹೇಗೆ ಬರುತ್ತದೆ, ಇದರ ಲಕ್ಷಣಗಳೇನು? ತಡೆಗಟ್ಟುವುದು ಹೇಗೆ?
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಭಾಷಣೆಕಾರ ಕುಣಿಗಲ್ ನಾಗಭೂಷಣ್ ಬೆಳ್ಳಿಹೆಜ್ಜೆ
ಕರ್ನಾಟಕ ಚಲನಚಿತ್ರ ಅಕಾಡೆಮಿ ಸುಸೂತ್ರವಾಗಿ ನಡೆಸುಕೊಂಡು ಬರುತ್ತಿರುವ 'ಬೆಳ್ಳಿಹೆಜ್ಜೆ' ಕಾರ್ಯಕ್ರಮಕ್ಕೆ ಈ ಬಾರಿಯ ಮುಖ್ಯ ಅತಿಥಿಯಾಗಿ ಆಗಮಿಸುತ್ತಿದ್ದಾರೆ. ಅಕಾಡೆಮಿ ನಡೆಸಿಕೊಡುತ್ತಿರುವ 33ನೇ ಬೆಳ್ಳಿಹೆಜ್ಜೆ ಕಾರ್ಯಕ್ರಮ ಇದಾಗಿದೆ.
ಇದೇ ಆಗಸ್ಟ್ 25ರಂದು ಸಂಜೆ 5 ಗಂಟೆಗೆ ಬೆಂಗಳೂರು ಜೆಸಿ ರಸ್ತೆಯ ಪ್ರಿಯದರ್ಶಿನಿ ಚಿತ್ರಮಂದಿರ, ಬಾದಾಮಿ ಹೌಸ್ ನಲ್ಲಿ ಕಾರ್ಯಕ್ರಮ ನಡೆಯಲಿದೆ. ಅವರನ್ನು ತೆರೆಯ ಮೇಲೆ ನೋಡಿರುವ, ಅವರ ಅದೆಷ್ಟೋ ಸಂಭಾಷಣೆಗಳನ್ನು ಕೇಳಿರುವವರು ಅವರೊಂದಿಗೆ ಅಂದು ಮುಖಾಮುಖಿಯಾಗಬಹುದು.
'ನಾಂದಿ' ಚಿತ್ರದ ಮೂಲಕ ಸಹನಿರ್ದೇಶಕರಾಗಿ ಚಿತ್ರರಂಗಕ್ಕೆ ಕಾಲಿಟ್ಟ ನಾಗಭೂಷಣ ಅವರು 'ಸಿಂಹ ಜೋಡಿ' ಮೂಲಕ ಚಿತ್ರ ಸಂಭಾಷಣೆ ರಚಿಸಲು ಮೊದಲಿಟ್ಟರು. ಜೊತೆಗೆ ಬಣ್ಣ ಹಚ್ಚಲೂ ಆರಂಭಿಸಿದರು. ಜನಪ್ರಿಯ ಸಂಭಾಷಣೆಕಾರರಾಗಿ ರೂಪುಗೊಂಡ ಕುಣಿಗಲ್ ನಾಗಭೂಷಣ್ ಇದುವರೆಗೂ 200ಕ್ಕೂ ಹೆಚ್ಚು ಚಿತ್ರಗಳಿಗೆ ಸಂಭಾಷಣೆ ಹೆಣೆದಿದ್ದಾರೆ.
ರಾಜ್ಯ ಸರ್ಕಾರದಿಂದ ಎರಡು ಬಾರಿ ಅತ್ಯುತ್ತಮ ಸಂಭಾಷಣಾ ಕರ್ತೃ ಪ್ರಶಸ್ತಿ (ಗೌರಿ ಗಣೇಶ, ಯಾರಿಗೂ ಹೇಳ್ಬೇಡಿ) ಪಡೆದಿದ್ದಾರೆ. ಆಶೀರ್ವಾದ ಹಾಗೂ ಬಾಳು ಜೇನು ಚಿತ್ರಗಳು ಅವರ ನಿರ್ದೇಶನಲ್ಲಿ ಬಂದಂತಹ ಚಿತ್ರಗಳು. ಚಲನಚಿತ್ರರಂಗದ ಜೊತೆಗೆ ಕಿರುತೆರೆಯಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಗಣೇಶನ ಮದುವೆ, ಗೋಲ್ ಮಾಲ್ ರಾಧಾಕೃಷ್ಣ. (ಒನ್ ಇಂಡಿಯಾ ಕನ್ನಡ)