Don't Miss!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- News Chardham Yatra Guidelines 2024: ಚಾರ್ಧಾಮ್ ಯಾತ್ರೆಗೆ ಹೋಗುವಾಗ ಈ ವಸ್ತುಗಳನ್ನು ಬ್ಯಾಗ್ ಅಲ್ಲಿ ಇಟ್ಟುಕೊಳ್ಳಿ....
- Automobiles ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
- Lifestyle ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕುರಿ ಪ್ರತಾಪ್ ಸಾವಿನ ವಂದತಿ: ಸ್ಪಷ್ಟನೆ ನೀಡಿದ ಹಾಸ್ಯ ನಟ
ಕನ್ನಡದ ಖ್ಯಾತ ಹಾಸ್ಯ ನಟ ಕುರಿ ಪ್ರತಾಪ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಸ್ಥಿತಿ ಬಹಳ ಗಂಭೀರವಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.
Recommended Video
ಮತ್ತೆ ಕೆಲವರು ಕುರಿ ಪ್ರತಾಪ್ ಅವರು ನಿಧನರಾಗಿದ್ದಾರೆ ಎಂಬ ಪೋಸ್ಟ್ಗಳನ್ನು ಸಹ ಹಾಕಿಬಿಟ್ಟಿದ್ದರು. ಇದು ಸಹಜವಾಗಿ ಕುರಿ ಪ್ರತಾಪ್ ಅಭಿಮಾನಿಗಳಲ್ಲಿ ಆತಂಕ ಸೃಷ್ಟಿಸಿತ್ತು.
ನಾನು ಸತ್ತಿಲ್ಲ, ಆರೋಗ್ಯವಾಗಿ, ಆರಾಮಾಗಿ ಇದ್ದೀನಿ; ನಟ ದೊಡ್ಡಣ್ಣ
ಇದು ಕೇವಲ ವಂದತಿ ಅಷ್ಟೇ. ಕುರಿ ಪ್ರತಾಪ್ ಅವರು ಆರೋಗ್ಯವಾಗಿದ್ದಾರೆ. ಸುಳ್ಳು ವಂದತಿಯ ಬಗ್ಗೆ ಸ್ವತಃ ಪ್ರತಾಪ್ ಅವರೇ ವಿಡಿಯೋ ಮಾಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ.
''ಸೋಶಿಯಲ್ ಮೀಡಿಯಾದಲ್ಲಿ ನನ್ನ ಬಗ್ಗೆ ಸುಳ್ಳು ಸುದ್ದಿಗಳು ಹರಿದಾಡುತ್ತಿದೆ. ತುಂಬಾ ಜನ ಫೋನ್ ಮಾಡಿ ವಿಚಾರಿಸುತ್ತಿದ್ದಾರೆ. ಎಲ್ಲರಿಗೂ ಹೇಳಿ ಹೇಳಿ ಸಾಕಾಯಿತು. ನಾನು ಆರಾಮಾಗಿದ್ದೇನೆ, ಮನೆಯಲ್ಲಿಯೇ ಇದ್ದೀನಿ'' ಎಂದು ಸ್ಪಷ್ಟಪಡಿಸಿದ್ದಾರೆ.
''ಚೆನ್ನಾಗಿದ್ದವರ ಬಗ್ಗೆಯೂ ಇಂತಹ ಸುಳ್ಳು ಸುದ್ದಿಗಳನ್ನು ಏಕೆ ಹರಡಿಸುತ್ತಾರೋ ಗೊತ್ತಿಲ್ಲ. ಎಲ್ಲರೂ ಮನೆಯಲ್ಲಿರಿ, ಎಲ್ಲೂ ಹೊರಗೆ ಹೋಗಬೇಡಿ'' ಎಂದು ವಿನಂತಿಸಿದ್ದಾರೆ.
ಕೆಲವು ದಿನಗಳ ಹಿಂದೆ ಹಿರಿಯ ನಟ ದೊಡ್ಡಣ್ಣ ಅವರ ಬಗ್ಗೆಯೂ ಇಂತಹದ್ದೇ ವದಂತಿ ಹಬ್ಬಿತ್ತು. ಆಮೇಲೆ ದೊಡ್ಡಣ್ಣ ಅವರು ಸಹ ವಿಡಿಯೋ ಮಾಡುವ ಮೂಲಕ ಅಭಿಮಾನಿಗಳಿಗೆ ಸ್ಪಷ್ಟನೆ ನೀಡಿದ್ದರು. ಸಾವಿನ ಬಗ್ಗೆ ವಂದತಿ ಹಬ್ಬಿಸುವವರ ವಿರುದ್ಧ ಆಕ್ರೋಶವೂ ಹೊರಹಾಕಿದ್ದರು.