Don't Miss!
- Lifestyle ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- Automobiles ಜಾವಾ ಮೋಟಾರ್ಸೈಕಲ್ ಮಾಲೀಕರಿಗೆ ಸಿಹಿಸುದ್ದಿ: ಈ ಅವಕಾಶ ಕಳೆದುಕೊಳ್ಳಬೇಡಿ!
- Finance ಎಮರ್ಜೆನ್ಸಿ ಲೋನ್ ಅಂದ್ರೆ ಏನು, ಇದನ್ನು ಪಡೆದುಕೊಳ್ಳುವುದು ಹೇಗೆ ? ಇಲ್ಲಿದೆ ನೋಡಿ ಸುಲಭ ಉಪಾಯ
- News Yaduveer Wadiyar: ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ಗೆ ಶಾಕ್ ಕೊಟ್ಟ ಒಕ್ಕಲಿಗರು!
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾಮಿಡಿ ಸ್ಟಾರ್ ಕುರಿ ಪ್ರತಾಪ್ ಈಗ ಹೀರೋ
ಸ್ಯಾಂಡಲ್ ವುಡ್ ನ ಖ್ಯಾತ ಹಾಸ್ಯ ನಟ ಕುರಿ ಪ್ರತಾಪ್ ಈಗ ಹೀರೋ ಆಗಿ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ಚಂದನವನದಲ್ಲಿ ಈಗಾಗಲೇ ಅನೇಕ ಹಾಸ್ಯ ಕಲಾವಿದರು ನಾಯಕರಾಗಿ ಮಿಂಚಿ ಸಕ್ಸಸ್ ಕಂಡಿದ್ದಾರೆ. ಕಾಮಿಡಿ ನಟರಾಗಿ ಬಣ್ಣದ ಲೋಕಕ್ಕೆ ಎಂಟ್ರಿ ಕೊಡುವ ಅನೇಕ ಕಲಾವಿದರು ಖ್ಯಾತಿಗಳಿಸುತ್ತಿದ್ದಂತೆ ಹೀರೋ ಆಗಿ ಪ್ರೇಕ್ಷಕರ ಮುಂದೆ ಬರ್ತಿದ್ದಾರೆ. ಇದೀಗ ಅದೇ ಸಾಲಿಗೆ ಕುರಿ ಪ್ರತಾಪ್ ಸಹ ಸೇರಿಕೊಂಡಿದ್ದಾರೆ.
ಅಂದಹಾಗೆ ಕುರಿ ಪ್ರತಾಪ್ ಹೀರೋ ಆಗಿ ನಟಿಸುತ್ತಿರುವ ಮೊದಲ ಸಿನಿಮಾಗೆ 'ಆರ್ ಸಿ ಬ್ರದರ್ಸ್' ಎಂದು ಟೈಟಲ್ ಇಡಲಾಗಿದೆ. ಪ್ರಕಾಶ್ ಕುಮಾರ್ ಎನ್ನುವವರು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸಹೋದರ ನಡುವಿನ ಸಂಬಂಧದ ಬಗ್ಗೆ ಇರುವ ಸಿನಿಮಾ ಇದಾಗಿದೆ. ಚಿತ್ರದಲ್ಲಿ ತಬಲ ನಾಣಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ.
ಬಿಗ್ ಬಾಸ್ ಬಳಿಕ ಕುರಿ ಪ್ರತಾಪ್ ಬೇಸರವಾದ್ರಾ! ಸೋಲಿನ ಬಗ್ಗೆ ಪ್ರತಾಪ್ ಹೇಳಿದ್ದೇನು?
ಕುರಿ ಪ್ರತಾಪ್ ಅಣ್ಣನ ಪಾತ್ರದಲ್ಲಿ ತಬಲ ನಾಣಿ ನಟಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಇಬ್ಬರ ಕಾಂಬಿನೇಷನ್ ನಲ್ಲಿ ಮೂಡಿಬರುವ ಕಾಮಿಡಿ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸುವುದರಲ್ಲಿ ಯಾವುದೇ ಅನುಮಾನವಿಲ್ಲ. ಅಂದಹಾಗೆ ಆರ್ ಸಿ ಬ್ರದರ್ಸ್ ಸಿನಿಮಾ ಮಾರ್ಚ್ ತಿಂಗಳಿಂದ ಚಿತ್ರೀಕರಣ ಪ್ರಾರಂಭವಾಗಲಿದೆ.
Recommended Video
ಸ್ಯಾಂಡಲ್ ವುಡ್ ನಲ್ಲಿ ಸಖತ್ ಬ್ಯುಸಿ ಇರುವ ಕಾಮಿಡಿ ನಟರಲ್ಲಿ ಒಬ್ಬರಾಗಿರುವ ಕುರಿ ಪ್ರತಾಪ್ ಕೈಯಲ್ಲಿ ಸದ್ಯ ಸಾಲು ಸಾಲು ಸಿನಿಮಾಗಳಿವೆ. ಕಿರುತೆರೆ ಮತ್ತು ಸಿನಿಮಾ ಎರಡರಲ್ಲೂ ಮಿಂಚುತ್ತಿರುವ ಕುರಿ ಪ್ರತಾಪ್ ಕಳೆದ ಬಾರಿ ಬಿಗ್ ಬಾಸ್ ಗೆ ಎಂಟ್ರಿ ಕೊಟ್ಟಿದ್ದರು. ಬಿಗ್ ಮನೆಯಿಂದ ಹೊರಬರುತ್ತಿದ್ದಂತೆ ಮತ್ತೆ ಸಿನಿಮಾಗಳಲ್ಲಿ ನಿರತರಾಗಿರುವ ಕುರಿ ಪ್ರತಾಪ್ ಇದೀಗ ನಾಯಕನಾಗಿ ಅಭಿಮಾನಿಗಳನ್ನು ರಂಜಿಸಲು ಸಿದ್ಧರಾಗಿದ್ದಾರೆ.