Don't Miss!
- Finance mukesh ambaniಗೆ 67 ವರ್ಷ, ಅವರು ಹೊಂದಿರುವ ದುಬಾರಿ ವಸ್ತುಗಳು ಏನೇನು ಗೊತ್ತಾ?
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕುರುಕ್ಷೇತ್ರ' ಮತ್ತೆ ಮುಂದಕ್ಕೆ : ದರ್ಶನ್ ಅಭಿಮಾನಿಗಳಲ್ಲಿ ಮುನಿರತ್ನ ಕ್ಷಮೆ
Recommended Video
17 days to go... 16 th days to go.. ಅಂತ 'ಕುರುಕ್ಷೇತ್ರ' ಸಿನಿಮಾದ ಪೋಸ್ಟರ್ ಗಳು ದಿನಕೊಂದು ಬಿಡುಗಡೆ ಆಗುತ್ತಿದ್ದವು. ದರ್ಶನ್ ಅಭಿಮಾನಿಗಳು ಸಿನಿಮಾದ ಬಿಡುಗಡೆಗಾಗಿ ಕಾಯುತ್ತಿದ್ದರು. ಆದರೆ, ಚಿತ್ರದ ರಿಲೀಸ್ ಡೇಟ್ ಮತ್ತೆ ಮುಂದಕ್ಕೆ ಹೋಗಿದೆ.
'ಕುರುಕ್ಷೇತ್ರ' ಬಿಡುಗಡೆಯ ದಿನಾಂಕ ಪದೇ ಪದೇ ಬದಲಾಗುತ್ತಿತ್ತು. ಆದರೆ, ಆಗಸ್ಟ್ 2 ರಂದು ಸಿನಿಮಾ ಬಿಡುಗಡೆ ಪಕ್ಕಾ ಎಂದು ಅನೇಕ ಪೋಸ್ಟರ್ ಗಳು ಬಂದಿದ್ದವು. ಅಚ್ಚರಿ ಎಂದರೆ, ಈಗ ಆ ದಿನವೂ ಸಿನಿಮಾ ರಿಲೀಸ್ ಆಗುತ್ತಿಲ್ಲ.
ಸದ್ದಿಲ್ಲದೇ ಆಂಧ್ರಕ್ಕೆ ಎಂಟ್ರಿ ಕೊಟ್ಟ 'ದುರ್ಯೋಧನ' ದರ್ಶನ್
ಕೆಲವು ಅನಿವಾರ್ಯ ಕಾರಣಗಳಿಂದ ಚಿತ್ರದ ಬಿಡುಗಡೆಯನ್ನು ಮುಂದಕ್ಕೆ ಹಾಕಲಾಗಿದೆಯಂತೆ. ಆಗಸ್ಟ್ 2ಕ್ಕೆ ಬಿಡುಗಡೆಯಾಗಬೇಕಿದ್ದ ಸಿನಿಮಾ, ಒಂದು ವಾರ ಮುಂದಕ್ಕೆ ಹೋಗಿದೆ. ಆಗಸ್ಟ್ 9 ರಂದು ಸಿನಿಮಾ ದೇಶಾದ್ಯಂತ ಬಿಡುಗಡೆ ಆಗಲಿದೆ.
ಸಿನಿಮಾದ ರಿಲೀಸ್ ಡೇಟ್ ಮತ್ತೆ ಮುಂದಕ್ಕೆ ಹೋಗಿದ್ದು, ದರ್ಶನ್ ಅಭಿಮಾನಿಗಳಲ್ಲಿ ಮುನಿರತ್ನ ಕ್ಷಮೆ ಕೇಳಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ವಿಶೇಷವಾಗಿ ಸಿನಿಮಾ ಪ್ರೇಕ್ಷಕರ ಮುಂದೆ ಬರಲಿದೆ.
ಕುರುಕ್ಷೇತ್ರ ಹೊಸ ಟ್ರೈಲರ್ ನೋಡಿದ್ಮೇಲೂ ಫ್ಯಾನ್ಸ್ ನಿರಾಸೆ.!
ನಿನ್ನೆ 'ಕುರುಕ್ಷೇತ್ರ' ಸಿನಿಮಾದ ಎರಡನೇ ಟ್ರೇಲರ್ ಬಿಡುಗಡೆಯಾಗಿದ್ದು, ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ತೆಲುಗಿನಲ್ಲಿಯೂ ಸಿನಿಮಾ ಟ್ರೇಲರ್ ಹೊರಬಂದಿದೆ.
ನಾಗಣ್ಣ ಸಿನಿಮಾದ ನಿರ್ದೇಶನ ಮಾಡಿದ್ದಾರೆ. ದರ್ಶನ್, ಅಂಬರೀಶ್, ರವಿಚಂದ್ರನ್, ಭಾರತಿ ವಿಷ್ಣುವರ್ಧನ್, ಅರ್ಜುನ್ ಸರ್ಜಾ, ರವಿಶಂಕರ್, ನಿಖಿಲ್ ಕುಮಾರ್, ಸ್ನೇಹ ಸೇರಿದಂತೆ ಅನೇಕ ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ.