ವಿದೇಶದಲ್ಲಿ ಒಂದು ದಿನ ಮುಂಚಿತವಾಗಿ 'ಕುರುಕ್ಷೇತ್ರ' ಯುದ್ಧ
'ಕುರುಕ್ಷೇತ್ರ' ಸಿನಿಮಾದ ಬಿಡುಗಡೆಗೆ ಆಗಸ್ಟ್ 9ಕ್ಕೆ ದಿನಾಂಕ ನಿಗದಿ ಆಗಿದೆ. ಆದರೆ, ಚಿತ್ರದ ಬಿಡುಗಡೆಯನ್ನು ಒಂದು ದಿನ ಮುಂಚಿತವಾಗಿ ವಿದೇಶದಲ್ಲಿ ಮಾಡಲಾಗುತ್ತಿದೆ.
ಸಿನಿಮಾದ ವಿತರಕರು ಒಂದು ದಿನದ ಮುನ್ನವೇ ವಿದೇಶದಲ್ಲಿ ರಿಲೀಸ್ ಬಿಡುಗಡೆ ಮಾಡುವ ತಯಾರಿ ನಡೆಸಿದ್ದಾರೆ. ಗ್ರಾಂಡ್ ಇಂಡಿಯಾ ಫಿಲ್ಮ್ ಸಂಸ್ಥೆ ಚಿತ್ರದ ಹಂಚಿಕೆ ಜವಾಬ್ದಾರಿ ತೆಗೆದುಕೊಂಡಿದೆ. ಹೀಗಾಗಿ, ಆಗಸ್ಟ್ 8ರ ಗುರುವಾರದಂದೇ ವಿದೇಶದ ದರ್ಶನ್ ಅಭಿಮಾನಿಗಳು ಸಿನಿಮಾವನ್ನು ನೋಡಬಹುದಾಗಿದೆ.
'ಕುರುಕ್ಷೇತ್ರ' ಐದು ಭಾಷೆಗಳಲ್ಲಿ ಬಿಡುಗಡೆ ಆಗುತ್ತಿದೆ. ರಾಕ್ ಲೈನ್ ವೆಂಕಟೇಶ್ ಕರ್ನಾಟಕದಲ್ಲಿ ವಿತರಣೆ ಮಾಡುತ್ತಿದ್ದಾರೆ. ಬೆಂಗಳೂರಿನ ನರ್ತಕಿ ಮುಖ್ಯ ಚಿತ್ರಮಂದಿರವಾಗಿದೆ. ಕರ್ನಾಟಕದ ಕೆಲವು ಚಿತ್ರಮಂದಿರಗಳಲ್ಲಿಯೂ ಸಿನಿಮಾ ಹಿಂದಿನ ದಿನ ಅಥವಾ ಬೆಳ್ಳಂಬೆಳಗ್ಗೆ ಬಿಡುಗಡೆ ಆಗುವ ಸಾಧ್ಯತೆ ಇದೆ.

ದರ್ಶನ್, ಅಂಬರೀಶ್, ರವಿಚಂದ್ರನ್, ಭಾರತಿ ವಿಷ್ಣುವರ್ಧನ್, ಅರ್ಜುನ್ ಸರ್ಜಾ, ರವಿಶಂಕರ್, ನಿಖಿಲ್ ಕುಮಾರ್, ಸ್ನೇಹ ಸೇರಿದಂತೆ ಅನೇಕ ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ. ನಾಗಣ್ಣ ಸಿನಿಮಾದ ನಿರ್ದೇಶನ ಮಾಡಿದ್ದಾರೆ. ಮುನಿರತ್ನ ಸಿನಿಮಾದ ನಿರ್ಮಾಣ ಮಾಡಿದ್ದಾರೆ.
ಹರಿಕೃಷ್ಣ ಸಿನಿಮಾಗೆ ಸಂಗೀತ ನೀಡಿದ್ದಾರೆ. ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದಾರೆ.


Click it and Unblock the Notifications











