Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡದ ಮಹಾತ್ವಾಕಾಂಕ್ಷೆಯ ಸಿನಿಮಾ 'ಕುರುಕ್ಷೇತ್ರ'ಕ್ಕೆ ಇಂದು ಅದ್ದೂರಿ ಚಾಲನೆ
ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ 50ನೇ ಸಿನಿಮಾ 'ಕುರುಕ್ಷೇತ್ರ'ಕ್ಕೆ ಮುಹೂರ್ತ ನಿಗದಿ ಆಗಿದೆ. ಇಂದು (ಆಗಸ್ಟ್ 6) ಸಂಜೆ 6.30ಕ್ಕೆ 'ಕುರುಕ್ಷೇತ್ರ' ಚಿತ್ರದ ಮುಹೂರ್ತ ಕಾರ್ಯಕ್ರಮ ನಡೆಯಲಿದೆ.
ಕುರುಕ್ಷೇತ್ರದಲ್ಲಿ 'ಡೈಲಾಗ್ ಕಿಂಗ್' ಸಹೋದರರ ಪಾತ್ರಗಳು ಬಹಿರಂಗ
ಬೆಂಗಳೂರಿನ ತುಮಕೂರು ರಸ್ತೆ ಬಳಿಯಿರುವ ಗೊರಗುಂಟೆಪಾಳ್ಯದ ಡಾ.ಪ್ರಭಾಕರ್ ಕೋರೆ ಕನ್ವೆಂಷನ್ ಸೆಂಟರ್ ನಲ್ಲಿ 'ಕುರುಕ್ಷೇತ್ರ' ಚಿತ್ರದ ಮುಹೂರ್ತ ಸಮಾರಂಭ ನಡೆಯಲಿದೆ. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಎಚ್.ಡಿ.ಕುಮಾರಸ್ವಾಮಿ ರವರಿಗೆ ವಿಶೇಷ ಆಹ್ವಾನ ನೀಡಲಾಗಿದ್ದು, ಮುಹೂರ್ತದ ಶಾಟ್ ಗೆ ಸಿ.ಎಂ ಸಿದ್ಧರಾಮಯ್ಯ ಕ್ಲಾಪ್ ಮಾಡಲಿದ್ದಾರೆ. ರಾಜಕೀಯ ಗಣ್ಯರ ಜೊತೆಗೆ ಸಿನಿಮಾದ ತಾರೆಯರು ಸಹ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಇದು ಮಾಮೂಲಿ 'ಕುರುಕ್ಷೇತ್ರ' ಅಲ್ಲ: 'ಮುನಿರತ್ನ ಕುರುಕ್ಷೇತ್ರ'.!
ಅಂದಹಾಗೆ, 'ಕುರುಕ್ಷೇತ್ರ' ಸಿನಿಮಾವನ್ನು ನಿರ್ಮಾಪಕ ಮುನಿರತ್ನ ನಿರ್ಮಾಣ ಮಾಡುತ್ತಿದ್ದು, ನಾಗಣ್ಣ ನಿರ್ದೇಶನ ಚಿತ್ರಕ್ಕಿದೆ. ಚಿತ್ರದಲ್ಲಿ ದರ್ಶನ್, ರವಿಚಂದ್ರನ್, ಸಾಯಿಕುಮಾರ್, ನಿಖಿಲ್ ಕುಮಾರ್, ಹರಿಪ್ರಿಯಾ, ಲಕ್ಷ್ಮಿ, ಸ್ನೇಹಾ, ರೆಜಿನಾ, ಮತ್ತು ಬಾಲಿವುಡ್ ನಟ ಡ್ಯಾನಿಶ್ ಅಖ್ತರ್ ಸೈಫಿ ಸೇರಿದಂತೆ ಹಲವರು ಕಾಣಿಸಿಕೊಳ್ಳುವುದು ಖಚಿತವಾಗಿದೆ. 'ಕುರುಕ್ಷೇತ್ರ' ಸಿನಿಮಾದ ಚಿತ್ರೀಕರಣ ಹೈದರಾಬಾದ್ ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ನಡೆಯಲಿದೆ.