Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂದುಕೊಂಡದ್ದಕ್ಕಿಂತ ಮುಂಚೆಯೇ ನಡೆಯಲಿದೆ 'ಕುರುಕ್ಷೇತ್ರ' ಯುದ್ಧ
Recommended Video
ಮುನಿರತ್ನ ನಿರ್ಮಾಣದ 'ಕುರುಕ್ಷೇತ್ರ' ಚಿತ್ರದ ಶೂಟಿಂಗ್ ಭರದಿಂದ ಸಾಗಿದೆ. ಬಹುಕೋಟಿ ವೆಚ್ಚದ ಅದ್ದೂರಿ ಸಿನಿಮಾ ಇದಾಗಿದ್ದು, ಕನ್ನಡ ಚಿತ್ರರಂಗದಲ್ಲೇ ಹೊಸ ಇತಿಹಾಸವನ್ನು ಬರೆಯಲಿದ್ದಾರೆ ನಿರ್ಮಾಪಕರಾದ ರಾಕ್ ಲೈನ್ ವೆಂಕಟೇಶ್ ಹಾಗೂ ಮುನಿರತ್ನ. ಇನ್ನು ಅಂದುಕೊಂಡಂದಕ್ಕಿಂತ ಮುಂಚಿತವಾಗಿಯೇ ಚಿತ್ರೀಕರಣ ಮುಗಿಸಲು ನಿರ್ದೇಶಕ ನಾಗಣ್ಣ ಪ್ಲಾನ್ ಮಾಡಿದ್ದಾರೆ.
ಫೆಬ್ರವರಿಯಲ್ಲಿ ಸಿನಿಮಾ ರಿಲೀಸ್ ಮಾಡಬೇಕೆಂದು ಯೋಚಿಸಿದ ಚಿತ್ರತಂಡ ಅದಕ್ಕೂ ಮುಂಚಿತವಾಗಿಯೇ ಚಿತ್ರವನ್ನು ರಿಲೀಸ್ ಮಾಡುವ ಸಾಧ್ಯತೆಗಳು ಹೆಚ್ಚಾಗಿವೆ. ಮಾಮೂಲಿ ಕಮರ್ಶಿಯಲ್ ಸಿನಿಮಾಗಳಿಗೂ 'ಕುರುಕ್ಷೇತ್ರ' ಚಿತ್ರಕ್ಕೂ ಸಾಕಷ್ಟು ವ್ಯತ್ಯಾಸವಿದ್ದು ನೂರಾರು ತಂತ್ರಜ್ಞರು 'ಕುರುಕ್ಷೇತ್ರ' ಚಿತ್ರಕ್ಕಾಗಿ ಹಗಲಿರುಳು ಕೆಲಸ ಮಾಡುತ್ತಿದ್ದಾರೆ.
ಅಂದಹಾಗೆ, 'ಕುರುಕ್ಷೇತ್ರ' ಸಿನಿಮಾದ ಚಿತ್ರೀಕರಣ ಕಂಪ್ಲೀಟ್ ಆಯ್ತಾ? ದರ್ಶನ್ ಇನ್ನೂ ಹೈದ್ರಾಬಾದ್ ನಲ್ಲಿಯೇ ಇದ್ದಾರಾ? ಅಥವಾ ಚಿತ್ರೀಕರಣ ಬಾಕಿ ಉಳಿದಿದ್ಯಾ ಇವೆಲ್ಲವುದರ ಕಂಪ್ಲೀಟ್ ವಿವರ ಮುಂದಿದೆ ಓದಿ..
ಜನವರಿಯಲ್ಲೇ 'ಕುರುಕ್ಷೇತ್ರ' ರಿಲೀಸ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ಕುರುಕ್ಷೇತ್ರ' ಸಿನಿಮಾ ಫೆಬ್ರವರಿಯಲ್ಲಿ ತೆರೆಗೆ ಬರಲಿದೆ ಎನ್ನುವ ಮಾತುಗಳು ಕೇಳಿ ಬಂದಿತ್ತು. ಆದರೆ ಮೂಲಗಳ ಪ್ರಕಾರ ವರ್ಷದ ಪ್ರಾರಂಭದಲ್ಲಿ ಅಂದರೆ ಜನವರಿ ಅಂತ್ಯಕ್ಕೆ ಚಿತ್ರ ಬಿಡುಗಡೆಯಾಗುವ ಸಾಧ್ಯತೆಗಳು ಹೆಚ್ಚಾಗಿದೆಯಂತೆ.
ಅಂಬಿ ದಂಪತಿಗೆ ಶುಭಕೋರಿದ ದರ್ಶನ್ ಮತ್ತು ಕಿಚ್ಚ ಸುದೀಪ್
ಅದ್ದೂರಿ ಸಾಹಸ ದೃಶ್ಯಗಳ ಚಿತ್ರೀಕರಣ
'ಕುರುಕ್ಷೇತ್ರ' ಚಿತ್ರದಲ್ಲಿ ದುರ್ಯೋಧನ ಹಾಗೂ ಭೀಮನ ಮಧ್ಯೆ ನಡೆಯುವ ಯುದ್ಧನ ದೃಶ್ಯಗಳ ಚಿತ್ರೀಕರಣದಲ್ಲಿ ಸಿನಿಮಾ ತಂಡ ಭಾಗಿಯಾಗಿದೆ. ಕಣಲ್ ಕಣ್ಣನ್ ಸಾಹಸ ನಿರ್ದೇಶನ ಮಾಡುತ್ತಿದ್ದಾರೆ.
ದರ್ಶನ್ 'ಕುರುಕ್ಷೇತ್ರ'ದ ಚಿತ್ರದ 'ಶಕುನಿ' ಲುಕ್ ರಿವಿಲ್
ಹಾಡಿನ ಚಿತ್ರೀಕರಣ ಮೂಲಕ ಶೂಟಿಂಗ್ ಕಂಪ್ಲೀಟ್
ಸದ್ಯ ಸಾಹಸ ದೃಶ್ಯಗಳನ್ನು ಚಿತ್ರೀಕರಣ ಮಾಡುತ್ತಿರುವ 'ಕುರುಕ್ಷೇತ್ರ' ಸಿನಿಮಾ ತಂಡ ಇದಾದ ನಂತರ ಹಾಡಿನ ಚಿತ್ರೀಕರಣ ಶುರು ಮಾಡಲಿದೆ. ಮೇಘನಾ ರಾಜ್ ಹಾಗೂ ದರ್ಶನ್ ಇಬ್ಬರು ಹಾಡಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಾಂಗ್ ಶೂಟಿಂಗ್ ಗಾಗಿ ಅದ್ದೂರಿ ಸೆಟ್ ರೆಡಿ ಮಾಡಲಾಗಿದೆ.
ಆದಷ್ಟು ಬೇಗ ಬೆಳ್ಳಿತೆರೆ ಮೇಲೆ ಸಿನಿಮಾ
'ಕುರುಕ್ಷೇತ್ರ' ಚಿತ್ರವನ್ನು ಆದಷ್ಟು ಬೇಗ ಕನ್ನಡ ಸಿನಿಮಾ ಪ್ರೇಕ್ಷಕರ ಮುಂದೆ ತರುವ ಹಿನ್ನಲೆಯಲ್ಲಿ ಚಿತ್ರತಂಡ ಹಗಲು-ರಾತ್ರಿ ಲೆಕ್ಕಿಸದೇ ಕೆಲಸ ಮಾಡುತ್ತಿದೆ. ಒಂದೆಡೆ ಡಬ್ಬಿಂಗ್ ಕೆಲಸಗಳು ನಡೆಯುತ್ತಿದ್ದರೆ ಮತ್ತೊಂದೆಡೆ ಸಿ,ಜಿ ಮತ್ತು ಗ್ರಾಫಿಕ್ಸ್ ಕೆಲಸಗಳು ಮುಂದುವರೆಯುತ್ತಿದೆ. ಆನ್ ಲೈನ್ ಎಡಿಟಿಂಗ್ ಆಗುತ್ತಿದ್ದು ಚಿತ್ರೀಕರಣ ಮುಗಿಯುತ್ತಿದ್ದಂತೆ ಕೆಲವೇ ಕೆಲವು ದಿನಗಳಲ್ಲಿ ಪ್ರೇಕ್ಷಕರ ಎದುರು ಸಿನಿಮಾ ಬರಲಿದೆ.